ಪೌರತ್ವ ತಿದ್ದುಪಡಿ ಕಾಯ್ದೆ: ಗಾಳಿಸುದ್ದಿ ಗುಟ್ಟು ರಟ್ಟುಗೊಳಿಸಿದ ಮೋದಿ
ಕೋಲ್ಕತ್ತಾ, ಜನವರಿ.12: ಸ್ವಾಮಿ ವಿವೇಕಾಂನಂದರ ಜನ್ಮ ದಿನಾಚರಣೆ ಹಿನ್ನೆಲೆ ದೇಶದ ಯುವಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂದೇಶವನ್ನು ರವಾನಿಸಿದ್ದಾರೆ. ಎರಡು ದಿನ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ನರೇಂದ್ರ ಮೋದಿ, ವೀರ ಸನ್ಯಾಸಿಗೆ ಪುಷ್ಪ ನಮನ ಸಲ್ಲಿಸಿದರು.
ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಧಾನಮಂತ್ರಿಯೊಬ್ಬರು ಪಶ್ಚಿಮ ಬಂಗಾಳ ಹೌರಾ ಜಿಲ್ಲೆ ಬೇಲೂರಿನ ರಾಮಕೃಷ್ಣ ಆಶ್ರಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ಆಶ್ರಮಕ್ಕೆ ಭೇಟಿ ನೀಡಿದ್ದ ಮೋದಿ, ಇಂದು ಬೆಳ್ಳಂಬೆಳಗ್ಗೆ ಸ್ವಾಮಿ ವಿವೇಕಾನಂದ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಬೇಲೂರು ಆಶ್ರಮದಲ್ಲಿರುವ ರಾಮಕೃಷ್ಣ ಪರಮಹಂಸರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಮಠದಲ್ಲಿ ನೆಡೆದ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಕಳೆದ ಬಾರಿ ತಾವು ಮಠಕ್ಕೆ ಭೇಟಿ ನೀಡಿದಾಗ ಸ್ವಾಮಿ ಆತ್ಮಾಸ್ಥನಂದ ಅವರ ಆಶೀರ್ವಾದ ಪಡೆದುಕೊಂಡಿದ್ದನ್ನು ಸ್ಮರಿಸಿಕೊಂಡರು. ಈಗ ಆತ್ಮಾಸ್ಥನಂದ ಸ್ವಾಮೀಜಿ ಭೌತಿಕವಾಗಿ ತಮ್ಮೊಂದಿಗಿಲ್ಲ. ಆದರೆ, ಅವರ ಕಾರ್ಯ ಹಾಗೂ ಹಾಕಿಕೊಟ್ಟ ಮಾರ್ಗವು ಸದಾ ನಮಗೆ ಮಾರ್ಗದರ್ಶಿಯಾಗುತ್ತದೆ ಎಂದರು.

ಬದಲಾವಣೆ ಮಂತ್ರ ಜಪಿಸಿದ ಪ್ರಧಾನಮಂತ್ರಿ ಮೋದಿ
ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ರಾಷ್ಟ್ರೀಯ ಯುವ ದಿನಾಚರಣೆ ಎಂದು ಆಚರಿಸಲಾಗುತ್ತದೆ. ವಿವೇಕಾನಂದರು ಹೇಳಿದ್ದ ಮಾತನ್ನು ಪ್ರಧಾನಿ ಸ್ಮರಿಸಿಕೊಂಡರು. 100 ಮಂದಿ ಶಕ್ತಿಶಾಲಿ ಯುವಕರಿಂದ ನಾನು ಭಾರತವನ್ನು ಬದಲಾಯಿಸಬಲ್ಲೆ ಎಂದು ಹೇಳಿದ್ದರು. ಈಗಲೂ ಯುವಕರು ಶ್ರಮವಿಟ್ಟು ಕೆಲಸ ಮಾಡಿದರೆ ದೇಶವನ್ನು ಬದಲಾಯಿಸಲು ಸಾಧ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಸಿಎಎ ಬಗ್ಗೆ ಸ್ಪಷ್ಟನೆ ನೀಡಿದ ಪ್ರಧಾನಮಂತ್ರಿ ಮೋದಿ
ಕೇಂದ್ರ ಸರ್ಕಾರವು ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತೀಯರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದರು. ಭಾರತ ಹಾಗೂ ದೇಶದ ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡವ ಪ್ರಜೆಗಳಿಗೆ ಇದರಿಂದ ಯಾವುದೇ ಸಮಸ್ಯೆ ಇಲ್ಲ ಎಂದರು. ಪೌರತ್ವ ತಿದ್ದುಪಡಿ ಕಾಯ್ದೆಯು ಯಾರನ್ನೂ ದೇಶದಿಂದ ಹೊರ ಹಾಕಲು ರೂಪಿಸಿದ ಕಾಯ್ದೆಯಲ್ಲ ಎಂದು ಹೇಳಿದರು.

ಅನುಮಾನಗಳಿಗೆ ಉತ್ತರಿಸುವುದೇ ನಮ್ಮ ಕರ್ತವ್ಯ
ಪೌರತ್ವ ತಿದ್ದುಪಡಿ ಕಾಯ್ದೆ ಯುವಕರಲ್ಲಿ ಸಾಕಷ್ಟು ಅನುಮಾನಗಳಿದೆ. ದೇಶದ ಜನರ ದಾರಿ ತಪ್ಪಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಹೀಗಿರುವಾಗ ಕೇಂದ್ರ ಸರ್ಕಾರ ಜಾರಿಗೊಳಿಸಿದ ಕಾಯ್ದೆ ಬಗ್ಗೆ ಯುವ ಸಮುದಾಯದಲ್ಲಿ ಹುಟ್ಟುಕೊಂಡಿರುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುವುದು ತಮ್ಮ ಕರ್ತವ್ಯವಾಗಿದೆ ಎಂದು ಪ್ರಧಾನಿ ಹೇಳಿದರು.

"ಗಾಳಿಸುದ್ದಿಗಳಿಗೆ ಯಾರೂ ಕಿವಿಗೊಡುವ ಅಗತ್ಯವಿಲ್ಲ"
ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ದೇಶದಲ್ಲಿ ಗಾಳಿಸುದ್ದಿಯನ್ನು ಹರಿಬಿಡಲಾಗುತ್ತಿದೆ. ಕೆಲವರು ರಾಜಕೀಯಕ್ಕಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಇದರಲ್ಲಿ ನಡೆಯುತ್ತಿರುವ ರಾಜಕಾರಣದ ಬಗ್ಗೆ ಯುವಕರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಸಂದೇಶ ನೀಡಿದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications