ಕೊಲ್ಕತ್ತಾದ 'ಬಿರ್ಯಾನಿ ಬ್ರದರ್ಸ್' ಅಪಘಾತದ ಕತೆಗೆ ರೋಚಕ ಟ್ವಿಸ್ಟ್
ಕೊಲ್ಕತ್ತಾ, ಆಗಸ್ಟ್ 22: ಕಳೆದ ನಾಲ್ಕು ದಿನಗಳ ಹಿಂದೆ ಕೊಲ್ಕತ್ತಾದಲ್ಲಿ ನಡೆದ ಅಪಘಾತ ಪ್ರಕರಣವೊಂದಕ್ಕೆ ರೋಚಕ ತಿರುವು ಲಭಿಸಿದೆ.
ಅಪಘಾತಕ್ಕೆ ಕಾರಣವಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ತಾನೇ ಅಪರಾಧ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದ. ಆದರೆ ವಿಚಾರಣೆಯ ವೇಳೆ ಆರೋಪಿ ಅಪರಾಧ ಎಸಗಿಲ್ಲ, ಬದಲಾಗಿ ತನ್ನ ತಮ್ಮನನ್ನು ಕಾಪಾಡುವ ಸಲುವಾಗಿ ತಪ್ಪನ್ನು ತನ್ನ ಮೇಲೆ ಹಾಕಿಕೊಂಡಿದ್ದಾನೆ ಎಂಬುದು ಪೊಲೀಸರಿಗೆ ತಿಳಿದಿದೆ. ಈ ಮೂಲಕ ಪ್ರಕರಣ ಅನಿರೀಕ್ಷಿತ ತಿರುವು ಪಡೆದಿದೆ.
ರಾಘಿಬ್ ಪರ್ವೇಜ್ ಮತ್ತು ಅರ್ಸಾಲಾನ್ ಪರ್ವೇಜ್ ಎಂಬ ಇಬ್ಬರು ಸಹೋದರರು ಕೋಲ್ಕತ್ತದ ಶ್ರೀಮಂತ ಮನೆತನಕ್ಕೆ ಸೇರಿದವರು. ಇಲ್ಲಿನ ಪ್ರಮುಖ ಬಿರ್ಯಾನಿ ಚೈನ್ ಹೊಟೇಲ್ ವೊಂದರ ಮಾಲೀಕರು ಎಂಬುದು ವಿಚಾರಣೆಯ ವೇಳೆ ತಿಳಿದುಬಂದಿದೆ.

ನಾಲ್ಕು ದಿನಗಳ ಹಿಂದೆ ಕೊಲ್ಕತ್ತಾದಲ್ಲಿ ವೇಗವಾಗಿ ಬಂದ ಜಾಗ್ವಾರ್ ಕಾರೊಂದು ಮರ್ಸಿಡಝ್ ಕಾರಿಗೆ ಗುದ್ದಿದ್ದ ಪರಿಣಾಮ ಇಬ್ಬರು ಮೃತರಾಗಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಮೃತರಿಬ್ಬರೂ ಬಾಂಗ್ಲಾದೇಶೀಯರು ಎಂಬುದು ಪತ್ತೆಯಾಗಿತ್ತು.
ಘಟನೆಯ ಸಂದರ್ಭದಲ್ಲಿ ತಾನೇ ಕಾರು ಚಲಾಯಿಸುತ್ತಿದ್ದೆ ಎಂದು ಒಪ್ಪಿಕೊಂಡ ಅರ್ಸಾಲಾನ್ ಪರ್ವೇಜ್ ನನ್ನು ಪೊಲೀಸರು ಬಂಧಿಸಿದ್ದರು. ಆದರೆ ಅಂದು ಕಾರು ಓಡಿಸುತ್ತಿದ್ದುದು ಅಸ್ರಾಲನ್ ನ ಸಹೋದರ ರಾಘಿಬ್ ಪರ್ವೇಜ್ ಎಂಬುದು ವಿಚಾರಣೆಯ ವೇಳೆ ಸಾಬೀತಾಗಿದೆ. ನಿಜವಾದ ಅಪರಾಧಿ ರಾಘಿಬ್ ಈ ಘಟನೆಯ ನಂತರ ದುಬೈಗೆ ಹಾರಿದ್ದ. ಆದರೆ ಸಿಸಿಟಿವಿ ಕ್ಯಾಮರಾ ಮತ್ತಿತರ ಸಾಕ್ಷ್ಯಗಳನ್ನು ಪರಿಶೀಲಿಸಿದ ಪೊಲೀಸರು ಕೂಲಂಕಷವಾಗಿ ಪರಿಶೀಲಿಸಿದಾಗ ಅರ್ಸಾಲಾನ್ ಅಪರಾಧಿಯಲ್ಲ, ಆತನ ಸಹೋದರ ರಾಘಿಬ್ ಅಪರಾಧಿ ಎಂಬುದು ದೃಢವಾಗಿದೆ. ದುಬೈನಿಂದ ವಾಪಸ್ ಬಂದಿದ್ದ ರಾಘಿಬ್ ನನ್ನೂ ಪೊಲೀಸರು ಬಂಧಿಸಿದ್ದಾರೆ.
ಇಂಥ ಭೀಕರ ಅಪಘಾತವಾದರೂ ಅರ್ಸಾಲಾನ್ ದೇಹದಲ್ಲಿ ಒಂದೂ ಗಾಯವಾಗದಿರುವುದನ್ನು ಕಂಡ ಪೊಲೀಸರು ಅನುಮಾನ ಬಂದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications