ಕಾಲೇಜಿನ ಮೆರಿಟ್ ಪಟ್ಟಿಯಲ್ಲಿ ಸನ್ನಿ ಲಿಯೋನ್ ಟಾಪರ್!
ಕೋಲ್ಕತಾ, ಆಗಸ್ಟ್ 29: ನಟಿ ಸನ್ನಿ ಲಿಯೋನ್ ಮತ್ತೆ ಕಾಲೇಜಿಗೆ ಸೇರಲಿದ್ದಾರೆ. ಬಿಎ ಪದವಿಗೆ ಸನ್ನಿ ಲಿಯೋನ್ ಪ್ರವೇಶ ಪಡೆದಿದ್ದಾರೆ. ಮುಂದಿನ ಸೆಮೆಸ್ಟರ್ನಲ್ಲಿ ಕಾಲೇಜಲ್ಲಿ ಭೇಟಿಯಾಗೋಣ ಎಂದು ಅವರು ಹೇಳಿದ್ದಾರೆ!- ಈ ಕಾಲದಲ್ಲಿ ಸನ್ನಿಗೇಕೆ ಓದುವ ಆಸೆ ಎಂಬ ಅಚ್ಚರಿಯೇ? ಸನ್ನಿ ಲಿಯನ್ ಹೆಸರು ಕಾಲೇಜಿನಲ್ಲಿ ಕಾಣಿಸಿಕೊಂಡಿರುವುದು ಹೊಸತೇನಲ್ಲ. ಹಿಂದೆಯೂ ಇಂತಹದ್ದೊಂದು ತಮಾಷೆಯ ಘಟನೆ ಸುದ್ದಿಯಾಗಿತ್ತು.
ಕೋಲ್ಕತಾದ ಅಶುತೋಷ್ ಕಾಲೇಜ್ ಬಿಎ (ಆನರ್ಸ್) ಇಂಗ್ಲಿಷ್ ವಿಭಾಗಕ್ಕೆ ಪ್ರವೇಶ ಪಡೆದವರ ಮೊದಲ ಪಟ್ಟಿಯನ್ನು ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಅದರ ಮೊದಲ ಹೆಸರು ಸನ್ನಿ ಲಿಯೋನ್ ಅವರದ್ದು. 12ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಸರಿಯಾಗಿ 400 ಅಂಕಗಳನ್ನು ಪಡೆದ ಸಾಧನೆ ಮಾಡಿರುವ ಸನ್ನಿ ಲಿಯೋನ್ ಹೆಸರಿನ ಜತೆಗೆ ಅಪ್ಲಿಕೇಷನ್ ಐಡಿ ಮತ್ತು ಪ್ರವೇಶ ಸಂಖ್ಯೆಯನ್ನು ಪ್ರಕಟಿಸಲಾಗಿದೆ.
ಈ ಸುದ್ದಿಯನ್ನು ತಿಳಿದ ಸನ್ನಿ ಲಿಯೋನ್ ಖುಷಿಯಾಗಿದ್ದಾರೆ! 'ಕಾಲೇಜ್ನ ಮುಂದಿನ ಸೆಮೆಸ್ಟರ್ನಲ್ಲಿ ನಿಮ್ಮೆಲ್ಲರನ್ನೂ ಭೇಟಿಯಾಗುತ್ತೇನೆ. ನೀವು ನನ್ನ ತರಗತಿಯಲ್ಲಿದ್ದೀರಿ ಎಂದು ಭಾವಿಸುತ್ತೇನೆ' ಎಂದು ಸನ್ನಿ ಲಿಯೋನ್ ತಮಾಷೆಯಾಗಿ ಟ್ವೀಟ್ ಮಾಡಿದ್ದಾರೆ.

ಕಾಲೇಜ್ ಮೆರಿಟ್ ಪಟ್ಟಿಯಲ್ಲಿ ಸನ್ನಿ ಲಿಯೋನ್ ಹೆಸರು ಇರುವುದು ಕಿಡಿಗೇಡಿಗಳ ಕೃತ್ಯ ಎಂದು ಆಡಳಿತ ಮಂಡಳಿ ಆರೋಪಿಸಿದೆ. ಯಾರೋ ಉದ್ದೇಶಪೂರ್ವಕವಾಗಿಯೇ ಸನ್ನಿ ಲಿಯೋನ್ ಹೆಸರನ್ನು ನಮೂದಿಸಿ ಸುಳ್ಳು ಅರ್ಜಿ ನೀಡಿದ್ದಾರೆ. ಅದನ್ನು ಸರಿಪಡಿಸುವಂತೆ ಪ್ರವೇಶಾತ ವಿಭಾಗಕ್ಕೆ ಸೂಚನೆ ನೀಡಿದ್ದೇವೆ. ಈ ಘಟನೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ತಿಳಿಸಿದೆ.
ಅಂದಹಾಗೆ, ಸನ್ನಿ ಲಿಯೋನ್ ಹೆಸರು ಮೆರಿಟ್ ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದು ಮೊದಲ ಸಲವೇನಲ್ಲ. ಕಳೆದ ವರ್ಷ ಬಿಹಾರ ಪಬ್ಲಿಕ್ ಹೆಲ್ತ್ ಎಂಜಿನಿಯರಿಂಗ್ ಇಲಾಖೆಯ ಜೂನಿಯರ್ ಎಂಜಿನಿಯರ್ ಹುದ್ದೆಗೆ ಮಾಡಲಾಗಿದ್ದ ಕರಡು ಪಟ್ಟಿಯಲ್ಲಿ ಸನ್ನಿ ಲಿಯೋನ್ ಹೆಸರು ಮೊದಲ ಸ್ಥಾನದಲ್ಲಿತ್ತು. ಎಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಅಭ್ಯರ್ಥಿಯು ಶೇ 98.5 ಅಂಕ ಗಳಿಸಿದ್ದರು ಎಂದು ನಮೂದಿಸಲಾಗಿತ್ತು. ಇದನ್ನು ಕೂಡ ಸನ್ನಿ ಲಿಯೋನ್ ತಮಾಷೆಯಾಗಿ ಪರಿಗಣಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications