ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಿಎಂಸಿ ಕಾರ್ಯಕರ್ತರಿಂದ ಸುವೇಂದು ಅಧಿಕಾರಿ ಕಚೇರಿ ಧ್ವಂಸ: ಆರೋಪ

|
Google Oneindia Kannada News

ಕೋಲ್ಕತ್ತ, ಜನವರಿ 10: ಇತ್ತೀಚೆಗಷ್ಟೇ ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಂಡಿರುವ ಸುವೇಂದು ಅಧಿಕಾರಿ ಕಚೇರಿಯನ್ನು ಟಿಎಂಸಿ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ.

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಟಿಎಂಸಿ ಸರ್ಕಾರದ ಮಾಜಿ ಸಚಿವ ಸುವೇಂದು ಅಧಿಕಾರಿ ಸೇರಿದಂತೆ ಅನೇಕ ಮುಖಂಡರು ಕಳೆದ ವರ್ಷ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಕೃತ್ಯದ ಹಿಂದಿರುವ ವ್ಯಕ್ತಿಗಳನ್ನು ಬಂಧಿಸುವಂತೆ ಬಿಜೆಪಿ ಒತ್ತಾಯಿಸಿದೆ.

ಪಕ್ಷ ತೊರೆಯುತ್ತಿರುವ ನಾಯಕರು; ತೃಣಮೂಲ ಕಾಂಗ್ರೆಸ್‌ಗೆ ಭಾರೀ ಸವಾಲುಪಕ್ಷ ತೊರೆಯುತ್ತಿರುವ ನಾಯಕರು; ತೃಣಮೂಲ ಕಾಂಗ್ರೆಸ್‌ಗೆ ಭಾರೀ ಸವಾಲು

ಟಿಎಂಸಿ ಕಾರ್ಯಕರ್ತರಿಂದ ಆಗಿರುವ ಘಟನೆ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ. ಆಡಳಿತ ಅವರ ಕೈಯಲ್ಲಿರುವುದರಿಂದ ತೋಳ್ಬಲ ಬಳಸಿ ಈ ರೀತಿಯ ಕೃತ್ಯವೆಸಗಲಾಗಿದೆ ಎಂದು ಬಿಜೆಪಿ ಮುಖಂಡ ಕಾನಿಷ್ಕ ಪಾಂಡೆ ಹೇಳಿದ್ದಾರೆ.

Suvendu Adhikaris Office In Bengals Nandigram Vandalised By TMC, Alleges BJP

ಆರೋಪಿಗಳನ್ನು ಬಂಧಿಸಿದಿದ್ದರೆ, ಯಾವುದೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಸಂಭವಿಸುವ ಘಟನೆಗಳಿಗೆ ನೀವೆ ಹೊಣೆ ವಹಿಸಿಕೊಳ್ಳಬೇಕಾಗುತ್ತದೆ ಎಂದು ಆಡಳಿತಕ್ಕೆ ಹೇಳಿರುವುದಾಗಿ ತಿಳಿಸಿದ ಪಾಂಡೆ, ಸರ್ಕಾರದ ವಿರುದ್ಧದ ಹೋರಾಟವನ್ನು ಮುಂದುವರೆಸುವುದಾಗಿ ಸವಾಲು ಹಾಕಿದರು.

ಬಿಜೆಪಿಯವರು ಯಾವಾಗಲೂ ಸುಳ್ಳು ಹೇಳುತ್ತಾ, ಅದನ್ನೇ ಅಭ್ಯಾಸ ಮಾಡಿಕೊಂಡಿದ್ದಾರೆ. ಟಿಎಂಸಿ ಧ್ವಜ ಮತ್ತು ಮಮತಾ ಬ್ಯಾನರ್ಜಿ ಭಾವಚಿತ್ರವನ್ನು ಹರಿದು ಬೆಂಕಿ ಹಚ್ಚಿದ್ದಾರೆ. ಮೊದಲು ತಮ್ಮ ಮನೆಯವರನ್ನು ಹದ್ದುಬಸ್ತಿನಲ್ಲಿಟ್ಟು ನಂತರ ಟಿಎಂಸಿಯನ್ನು ದೂಷಿಸಲಿ ಎಂದು ಅವರು ಹೇಳಿದರು.

ಈ ಪುಟಾಣಿಯ ತೊದಲು ನುಡಿ ಕೇಳಿ ಮೂರು ವರ್ಷವಾಯಿತುಈ ಪುಟಾಣಿಯ ತೊದಲು ನುಡಿ ಕೇಳಿ ಮೂರು ವರ್ಷವಾಯಿತು

ಈ ಘಟನೆಗೆ ಬಿಜೆಪಿಯ ಹಳೆಯ ಕಾರ್ಯಕರ್ತರು ಕಾರಣ ಎಂದು ಟಿಎಂಸಿ ಪೂರ್ವ ಮಿಡ್ನಾಪುರ ಜಿಲ್ಲೆಯ ಉಪಾಧ್ಯಕ್ಷ ಎಸ್ ಕೆ ಸೂಫಿಯಾನ್ ಹೇಳಿದ್ದಾರೆ.

English summary
Trinamool Congress (TMC) workers have vandalised BJP leader Suvendu Adhikari's office (Sahayak Kendra) in Nandigram area on Saturday night, the BJP has alleged.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X