ಟಿಎಂಸಿ ಎಂಎಲ್ಎ ಸತ್ಯಜಿತ್ ಬಿಸ್ವಾಸ್ ಗುಂಡಿಟ್ಟು ಬರ್ಬರ ಹತ್ಯೆ
ಕೋಲ್ಕತಾ, ಫೆಬ್ರವರಿ 09 : ತೃಣಮೂಲ ಕಾಂಗ್ರೆಸ್ ಶಾಸಕ ಸತ್ಯಜಿತ್ ಬಿಸ್ವಾಸ್ ಅವರನ್ನು ಪಶ್ಚಿಮ ಬಂಗಾಳದ ಫುಲ್ಬರಿಯಲ್ಲಿ ಗುಂಡಿಟ್ಟು ಶನಿವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ನಾದಿಯಾ ಜಿಲ್ಲೆಯ ಫುಲ್ಬರಿಯಲ್ಲಿ ಅಪರಿಚಿತರು ಗುಂಡಿಟ್ಟು ಪರಾರಿಯಾಗಿದ್ದಾರೆ. ಅವರನ್ನು ಕೊಲೆ ಮಾಡಿದ ಸ್ಥಳದಲ್ಲಿ ರಿವಾಲ್ವರನ್ನು ವಶ ಪಡಿಸಿಕೊಳ್ಳಲಾಗಿದೆ.
ಸತ್ಯಜಿತ್ ಬಿಸ್ವಾಸ್ ಅವರು ಸರಸ್ವತಿ ಪೂಜೆಯನ್ನು ಉದ್ಘಾಟನೆ ಮಾಡಿ ವಾಪಸ್ ಬರುತ್ತಿದ್ದಾಗ ಈ ಹತ್ಯೆ ಮಾಡಲಾಗಿದೆ. ಅವರು ಪೂಜೆಯ ನಂತರ ವೇದಿಕೆಯಿಂದ ಇಳಿಯುತ್ತಿದ್ದಾಗ ಅತೀ ಹತ್ತಿರದಿಂದ ಗುಂಡಿನ ಸುರಿಮಳೆಗರೆಯಲಾಗಿದೆ.

ಸತ್ಯಜಿತ್ ಅವರು ಕೃಷ್ಣಗಂಜ್ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಎರಡು ಬಾರಿ ವಿಜೇತರಾಗಿದ್ದರು. ಈ ಹತ್ಯೆಗಾಗಿ ಬಿಜೆಪಿಯ ಮುಕುಲ್ ರಾಯ್ ಮೇಲೆ ಟಿಎಂಸಿ ಆರೋಪ ಹೊರಿಸಿದೆ. ಆದರೆ ಈ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ.
ನಾದಿಯಾ ಜಿಲ್ಲೆ ಬಾಂಗ್ಲಾದೇಶದ ಗಡಿಯ ಬಳಿಯಿದ್ದು, ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ ತನ್ನ ನೆಲೆ ಕಂಡುಕೊಳ್ಳುತ್ತಿದೆ. ಸತ್ಯಜಿತ್ ಬಿಸ್ವಾಸ್ ಅವರು ಜನಪ್ರಿಯ ನಾಯಕರಾಗಿ ಗುರುತಿಸಿಕೊಂಡಿದ್ದು, ಇತ್ತೀಚೆಗೆ ಹಸೆಮಣೆಯೇರಿದ್ದರು.
ಭತ್ತ ಕೊಳ್ಳುವಾಗ ನಡೆಯುತ್ತಿದ್ದ ಅವ್ಯವಹಾರದ ಬಗ್ಗೆ ಕೆಲ ದಿನಗಳ ಹಿಂದೆ ಸತ್ಯಜಿತ್ ಬಿಸ್ವಾಸ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications