ರಸ್ತೆಯಲ್ಲಿ ನಮಾಜ್ ಗೆ ಬಿಜೆಪಿಯ ತಿರುಗೇಟು: ರಸ್ತೆಯಲ್ಲೇ ಹನುಮಾನ್ ಚಾಲೀಸ್
ಕೋಲ್ಕತಾ, ಜೂನ್ 26: ರಸ್ತೆಯಲ್ಲಿ ನಮಾಜ್ ಮಾಡುವ ಪದ್ದತಿಗೆ ಬ್ರೇಕ್ ಹಾಕಬೇಕೆಂದು, ಕೋಲ್ಕತ್ತಾ ಬಿಜೆಪಿಯ ಯುವಮೋರ್ಚಾ ಘಟಕ, ವಿನೂತನ ಪ್ರತಿಭಟನೆಗೆ ಮುಂದಾಗಿದೆ.
ನಗರದ ಜಿ ಟಿ ರಸ್ತೆಯಲ್ಲಿ ಪ್ರತೀ ಶುಕ್ರವಾರ ರಸ್ತೆಯಲ್ಲಿ ನಮಾಜ್ ಮಾಡಲು ಸರಕಾರ ಅನುಮತಿ ನೀಡಿತ್ತು. ಇದನ್ನು ವಿರೋಧಿಸಿ ಬಿಜೆಪಿ ಈ ಹಿಂದೆ ಹಲವು ಬಾರಿ ತನ್ನ ಆಕ್ರೋಶ ವ್ಯಕ್ತಪಡಿಸಿತ್ತು.
ಈಗ, ರಸ್ತೆಯಲ್ಲಿ ಮಾಡುವ ನಮಾಜ್ ಗೆ ತಿರುಗೇಟು ನೀಡಲು, ಹೌರಾದ ಬಲ್ಲಿಖಾಲಿ ಎನ್ನುವ ಪ್ರದೇಶದಲ್ಲಿ, ಬಿಜೆಪಿಯ ಯುವಮೋರ್ಚಾ, ರಸ್ತೆಯಲ್ಲಿ ಹನುಮಾನ್ ಚಾಲೀಸ್ ಪಠಿಸಿ, ಪ್ರತಿಭಟನೆ ನಡೆಸಿದೆ.

ಹೌರಾ ಘಟಕದ ಬಿಜೆಪಿ ಮುಖ್ಯಸ್ಥ ಒ ಪಿ ಸಿಂಗ್, ಜಿ ಟಿ ರಸ್ತೆಯಲ್ಲಿ ಪ್ರತೀ ಶುಕ್ರವಾರ ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶ ನೀಡಲಾಗುತ್ತದೆ. ಇದರಿಂದ, ಟ್ರಾಫಿಕ್ ಜಾಮ್ ಆಗುತ್ತದೆ, ರೋಗಿಗಳು ಸಾವನ್ನಪ್ಪುತ್ತಿದ್ದಾರೆ, ಸಮಯಕ್ಕೆ ಸರಿಯಾಗಿ ಕಚೇರಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ರಸ್ತೆಯಲ್ಲಿ ನಮಾಜ್ ಮಾಡಲು ಕೊಟ್ಟಿರುವ ಅನುಮತಿ ಹಿಂದಕ್ಕೆ ಪಡೆಯುವವರೆಗೆ ನಾವೂ ಎಲ್ಲಾ ದೇವಾಲಯದ ಮುಂದಿನ ರಸ್ತೆಗಳಲ್ಲಿ ಹನುಮಾನ್ ಚಾಲೀಸ್ ಪಠಣ ಮಾಡುತ್ತೇವೆ ಎಂದು ಒ ಪಿ ಸಿಂಗ್ ಹೇಳಿದ್ದಾರೆ.
#WATCH WB: Bharatiya Janata Yuva Morcha recite Hanuman Chalisa near Bally Khal in Howrah. OP Singh, BJYM Pres, Howrah says, "GT Road is blocked to offer Friday namaz. Patients die,people can't reach office on time.Recitation continues till Friday Namaz like that is offered (25.6) pic.twitter.com/BscHgYJt2C
— ANI (@ANI) June 26, 2019
ಬಿಜೆಪಿ ಮುಖಂಡರ ಈ ವಿನೂತನ ಪ್ರತಿಭಟನೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications