ಸಿಬಿಐ v/s ಮಮತಾ ಬ್ಯಾನರ್ಜಿ ಯುದ್ಧ: ಪ್ರಮುಖ ಘಟನಾವಳಿಗಳು
ಕೊಲ್ಕತ್ತ, ಫೆಬ್ರವರಿ 06: ಕಳೆದ ಎರಡು ದಿನಗಳಿಂದ ಕೊಲ್ಕತ್ತದಲ್ಲಿ ನಡೆಯುತ್ತಿರುವ ಘಟನೆಗಳು ದೇಶದ ಗಮನ ಸೆಳೆದಿದೆ. ಕೊಲ್ಕತ್ತ ಪೊಲೀಸ್ ಕಮಿಷನರ್ ಅವರ ಬಂಧನಕ್ಕೆ ಬಂದಿದ್ದ ಸಿಬಿಐನ ಅಧಿಕಾರಿಗಳನ್ನೇ ಕೊಲ್ಕತ್ತ ಪೊಲೀಸರು ಬಂಧಿಸಿದ್ದರು. ಆ ನಂತರ ಅದು ಮಮತಾ ಬ್ಯಾನರ್ಜಿ v/s ಕೇಂದ್ರ ಸರ್ಕಾರ ಮಧ್ಯೆ ಯುದ್ಧವಾಗಿ ಮಾರ್ಪಾಡಾಯಿತು.
ಮಮತಾ ಬ್ಯಾನರ್ಜಿ ಅವರು ಸಿಬಿಐ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಭಾನುವಾರ ರಾತ್ರಿ ಪ್ರತಿಭಟನಾ ಧರಣಿ ಕೂತರು. ಪ್ರಕರಣ ಸುಪ್ರಿಂಕೋರ್ಟ್ ಮೆಟ್ಟಿಲೇರಿತು. ಇಂದು ಸುಪ್ರಿಂ ಕೋರ್ಟ್ ಆದೇಶ ಹೊರಡಿಸಿದ ನಂತರ ಮಮತಾ ಬ್ಯಾನರ್ಜಿ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.
ಕೇಂದ್ರ ಸರ್ಕಾರ v/s ಮಮತಾ ಬ್ಯಾನರ್ಜಿ ಯುದ್ಧದ ಪ್ರಮುಖ ಘಟನಾವಳಿಗಳು ಇಲ್ಲಿವೆ...
* ಕೊಲ್ಕತ್ತ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರನ್ನು ಚಿಟ್ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ, ತಪಾಸಣೆ ಹಾಗೂ ಬಂಧನಕ್ಕೆ ಭಾನುವಾರ ರಾತ್ರಿ ಸಿಬಿಐ ತಂಡ ಆಗಮನ, ಸಿಬಿಐ ತಂಡವನ್ನು ವಶಕ್ಕೆ ಪಡೆದ ಕೊಲ್ಕತ್ತ ಪೊಲೀಸರು.

ಮಮತಾ ಬ್ಯಾನರ್ಜಿ ಧರಣಿ ಪ್ರಾರಂಭ
* ಕೇಂದ್ರ ತನಿಖಾ ಸಂಸ್ಥೆಯನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಭಾನುವಾರ ರಾತ್ರಿ ಧರಣಿ ಸತ್ಯಾಗ್ರಹ. ಸಂವಿಧಾನ ಉಳಿಸಿ ಪ್ರತಿಭಟನೆಗೆ ಟಿಎಂಸಿಯ ಕಾರ್ಯಕರ್ತರು, ಮಂತ್ರಿಗಳು, ಶಾಸಕರು ಭಾಗಿ.

ಹಲವು ರಾಷ್ಟ್ರ ನಾಯಕರ ಬೆಂಬಲ
* ಚಂದ್ರಬಾಬು ನಾಯ್ಡು, ಕನಿಮೋಳಿ, ರಾಹುಲ್ ಗಾಂಧಿ, ದೇವೇಗೌಡ, ಯಶವಂತ ಸಿನ್ಹಾ, ಶರದ್ ಪೊವಾರ್, ತೇಜಸ್ವಿ ಯಾದವ್ ಸೇರಿ ಇನ್ನೂ ಹಲವರಿಂದ ಮಮತಾ ಬ್ಯಾನರ್ಜಿಗೆ ಬೆಂಬಲ.
* ಕೊಲ್ಕತ್ತ ಪೊಲೀಸರು ಹಾಗೂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರಿಂಕೋರ್ಟ್ಗೆ ಮನವಿ ಸಲ್ಲಿಸಿದ ಸಿಬಿಐ, ಸೂಕ್ತ ದಾಖಲೆಗಳೊಂದಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ.

ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
* ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ, ಕೊಲ್ಕತ್ತ ಪೊಲೀಸ್ ಕಮಿಷನರ್ ರಾಜೀವ್ ಅವರು ಮೇಘಾಲಯದ ಶಿಲ್ಲಾಂಗ್ನಲ್ಲಿ ಸಿಬಿಐ ಎದುರು ವಿಚಾರಣೆಗೆ ಹಾಜರಾಗಲು ಸೂಚಿಸಿತು. ಹಾಗೆಯೇ ರಾಜೀವ್ ಕುಮಾರ್ ಅವರನ್ನು ಬಂಧಿಸದಂತೆ ಸಿಬಿಐಗೆ ಸೂಚನೆ ನೀಡಿದೆ.

ಧರಣಿ ಅಂತ್ಯಗೊಳಿಸಿದ ಮಮತಾ
* ಸುಪ್ರಿಂ ಆದೇಶದ ಬಳಿಕ ಮಮತಾ ಬ್ಯಾನರ್ಜಿ ಅವರು ತಮ್ಮ ಮೂರು ದಿನದ ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು. ಇದು ನಮಗೆ ಸಿಕ್ಕ ನೈಕಿಕ ಜಯ ಎಂದು ಹೇಳಿದರು. ಇನ್ನು ಮುಂದೆ ಇದೇ ಹೋರಾಟ ದೆಹಲಿಯಲ್ಲಿ ಮುಂದುವರೆಯಲಿದೆ ಎಂದು ಮಮತಾ ಹೇಳಿದರು.

'ಮಮತಾ ಮುಖದ ಮೇಲೆ ಮೊಟ್ಟೆ'
* ಸುಪ್ರಿಂಕೋರ್ಟ್ ಆದೇಶದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಸುಪ್ರಿಂ ಆದೇಶ ಮಮತಾ ಬ್ಯಾನರ್ಜಿ ಮುಖದ ಮೇಲೆ ಮೊಟ್ಟೆ ಎಸೆದಂತಾಗಿದೆ ಎಂದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications