ಬೋಧ್ ಗಯಾ, ಬುರ್ದ್ವಾನ್ ಸ್ಫೋಟಕ್ಕೆ ಕಾರಣನಾದ ಉಗ್ರ ಸೆರೆ
ಕೋಲ್ಕತಾ, ಮೇ 29: ಬುರ್ದ್ವಾನ್, 2018ರ ಬೋಧ್ ಗಯಾ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಉಗ್ರನನ್ನು ಮುರ್ಷಿದಾಬಾದಿನಲ್ಲಿ ಶುಕ್ರವಾರದಂದು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Recommended Video
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಸೂಟಿ ಎಂಬಲ್ಲಿ ಅಡಗುತಾಣದಲ್ಲಿದ್ದ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಕರೀಮ್ನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಈತ ಬಾಂಗ್ಲಾದೇಶ ಭಯೋತ್ಪಾದಕ ಸಂಘಟನೆ ಜಮಾತ್-ಉಲ್ ಮುಜಾಹಿದ್ದೀನ್ ಸಕ್ರಿಯ ಸದಸ್ಯನಾಗಿದ್ದಾನೆ.
ಕೋಲ್ಕತ್ತಾ ಪೊಲೀಸರ ಸ್ಪೆಷಲ್ ಟಾಸ್ಕ್ ಫೋರ್ಸ್(STF), ಮುರ್ಷಿದಾಬಾದ್ ಪೊಲೀಸರ ಜಂಟಿ ಕಾರ್ಯಾಚಾರಣೆಯಲ್ಲಿ ಈ ಉಗ್ರ ಸೆರೆಸಿಕ್ಕಿದ್ದಾನೆ. ಉಗ್ರನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

ಜಮಾತ್-ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ್ ಸಂಘಟನೆಯ ಪ್ರಮುಖ ಸದಸ್ಯ ಅಬ್ದುಲ್ ಕರೀಂ ಅಲಿಯಾಸ್ ಬೊರೊ ಕರೀಂಗಾಗಿ 2018ರಿಂದ ಪೊಲೀಸರು ಬಲೆ ಬೀಸಿದ್ದರು. 2018ರಲ್ಲಿ ಮುರ್ಷಿದಾಬಾದ್ ನಲ್ಲೇ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು ಪತ್ತೆಯಾಗಿತ್ತು, ಆದರೆ, ಕರೀಂ ತಪ್ಪಿಸಿಕೊಂಡಿದ್ದ.
ಎನ್ಐಎ ಚಾರ್ಜ್ ಶೀಟ್ ನಲ್ಲಿ ಹೆಸರಿರಲಿಲ್ಲ
2018 ಬೋಧ್ ಗಯಾ ಸ್ಫೋಟ ಪ್ರಕರಣ, ಪಶ್ಚಿಮ ಬಂಗಾಲದ ಬುರ್ಧ್ವಾನ್ ಸ್ಫೋಟ ಪ್ರಕರಣದ ತನಿಖೆ ಕೈಗೊಂಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ( NIA) ತಯಾರಿಸಿದ ದೋಷಾರೋಪಣ ಪಟ್ಟಿಯಲ್ಲಿ ಕರೀಂ ಹೆಸರಿಲ್ಲದಿರುವುದು ಅಚ್ಚರಿ ಮೂಡಿಸಿತ್ತು. ಆದರೆ, ಹಲವು ವಿಧ್ವಂಸಕ ಕೃತ್ಯಗಳಿಗೆ ಕಾರಣರಾದ ಟಾಪ್ 3 ಜೆಎಂಬಿ ಉಗ್ರರರಲ್ಲಿ ಈತನೂ ಒಬ್ಬ.
ಸುಮಾರು 1500 ವರ್ಷ ಇತಿಹಾಸವುಳ್ಳ ಮಹಾಬೋಧಿ ದೇಗುಲದಲ್ಲಿ 2018ರಲ್ಲಿ ಕಡಿಮೆ ತೀವ್ರತೆಯುಳ್ಳ ಸ್ಫೋಟ ಸಂಭವಿಸಿತ್ತು. ಇದರಲ್ಲಿ 9 ಮಂದಿ ಬೌದ್ಧ ಭಿಕ್ಕುಗಳು ಗಾಯಗೊಂಡಿದ್ದರು. ದೇಗುಲದ ಒಳಭಾಗ ಚೈತ್ಯಗಾರ, ಭಗವಾನ್ ಬುದ್ಧನಿಗೆ ಜ್ಞಾನೋದಯ ಉಂಟಾದ ಸ್ಥಳ ಎಂದೇ ನಂಬಲಾಗಿರುವ ಬೋಧಿ ವೃಕ್ಷ ಸುರಕ್ಷಿತವಾಗಿತ್ತು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications