ಪ.ಬಂಗಾಳ; ಬಿಜೆಪಿ ಕಚೇರಿ ಬಳಿ ಟಿಎಂಸಿ ಕಾರ್ಯಕರ್ತರಿಂದ ಗಲಭೆ

ಕೋಲ್ಕತ್ತಾ, ಡಿಸೆಂಬರ್ 26: ತೃಣಮೂಲ ಕಾಂಗ್ರೆಸ್ ತೊರೆದು ಈಚೆಗೆ ಬಿಜೆಪಿ ಸೇರಿದ್ದ ಸಂಸದ ಸುನೀಲ್ ಮೊಂಡಾಲ್ ವಾಹನವನ್ನು ಸುತ್ತುವರೆದ ಟಿಎಂಸಿ ಕಾರ್ಯಕರ್ತರು ಕಪ್ಪು ಧ್ವಜ ತೋರಿಸಿ ಗಲಭೆ ಏರ್ಪಟ್ಟ ಘಟನೆ ಶನಿವಾರ ನಡೆದಿದೆ.

ಶನಿವಾರ ಬೆಳಿಗ್ಗೆ ಸುನೀಲ್ ಮೊಂಡಾಲ್ ಸನ್ಮಾನ ಕಾರ್ಯಕ್ರಮಕ್ಕೆಂದು ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಟಿಎಂಸಿ ಕಾರ್ಯಕರ್ತರು ಕಪ್ಪು ಧ್ವಜ ತೋರಿಸಿ ಕಾರನ್ನು ಸುತ್ತುವರೆದು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಗಲಭೆ ಮುಗಿಯಿತಾದರೂ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.

ಡಿ.19ರಂದು ಸುನೀಲ್ ಮೊಂಡಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. ತೃಣಮೂಲ ಕಾಂಗ್ರೆಸ್ ನ ಹಲವು ಬಂಡಾಯ ಮುಖಂಡರು ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅವರಿಗೆಲ್ಲ ಶನಿವಾರ ಬಿಜೆಪಿ ಕಚೇರಿಯಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Trinamool Activists Shouted Slogans Against MP Sunil Mondal

ಬಿಜೆಪಿ ಕಚೇರಿ ಸಮೀಪವೇ ಶನಿವಾರ ಟಿಎಂಸಿ ವೇದಿಕೆ ಸಿದ್ಧಪಡಿಸಿತ್ತು. ಬಿಜೆಪಿ ಕಚೇರಿಗೆ ಬಂಡಾಯ ನಾಯಕರು ಆಗಮಿಸುತ್ತಿದ್ದಂತೆಯೇ ಟಿಎಂಸಿ ಕಾರ್ಯಕರ್ತರು ಅಲ್ಲಿಂದಲೇ ಅವರ ವಿರುದ್ಧ ಘೋಷಣೆ ಕೂಗುತ್ತಿದ್ದರು. ಈ ಬೆಳವಣಿಗೆ ನಡೆಯುತ್ತಿದ್ದಂತೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಯಿತು. ಆನಂತರ ಟಿಎಂಸಿ ವೇದಿಕೆ ಹಾಗೂ ಬಿಜೆಪಿ ಕಚೇರಿ ನಡುವೆ ಬ್ಯಾರಿಕೇಡ್ ಹಾಕಲಾಯಿತು.

ಈ ಘಟನೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಜಯ್ ಪ್ರಕಾಶ್ ಮಜುಂದಾರ್, ಇವೆಲ್ಲ ಬಿಜೆಪಿ ಮಣಿಸಲು ತೃಣಮೂಲ ಕಾಂಗ್ರೆಸ್ ತಂತ್ರಗಳು ಎಂದು ಪ್ರತಿಕ್ರಿಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+