ಕೊರೊನಾ: ಬೆಂಗಳೂರಿಗೆ ಹೋಗ್ತೀವಿ ಅಂದು ಬ್ಯಾಂಕಾಕ್ ಗೆ ಹೋಗ್ ಬಂದ್ರು; ಮನೇಲಿ ಮುಂದಾ!
ಕೋಲ್ಕತ್ತಾ, ಮಾರ್ಚ್ 31: ಈ ಕೊರೊನಾವೈರಸ್, ಈ ಲಾಕ್ ಡೌನ್ ಮುಗಿಯುವಷ್ಟರಲ್ಲಿ ಏನೇನು ಆಗಿರುತ್ತೋ ದೇವರೇ ಬಲ್ಲ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಹಾಸ್ಯಕಾರಿ ವಿದ್ಯಮಾನವೊಂದು ನಡೆದಿದೆ.
ಸಮಾಜದಲ್ಲಿ ಗಣ್ಯರಾದ ಇಬ್ಬರು ಮನೇಲಿ ಸುಳ್ಳು ಹೇಳಿ, ಈಗ ಫುಲ್ ಟೆನ್ಸನ್ ನಲ್ಲಿದ್ದಾರೆ. ಭಾರತೀಯ ಜನತಾ ಯುವ ಐಟಿ ಮೋರ್ಚಾದ ಅಭಿಜಿತ್ ಬಸಕ್ ಎನ್ನುವವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿ ಬರುತ್ತೇವೆ ಎಂದು ಇಬ್ಬರು ಬ್ಯಾಂಕಾಂಕ್ ಗೆ ಹೋಗಿ ಬಂದಿದ್ದಾರೆ. ಈ ವಿಚಾರದ ಬಗ್ಗೆ ಮನೇಲಿ ಯಾರ ಬಳಿಯೂ ಬಾಯಿ ಬಿಟ್ಟಿರಲಿಲ್ಲ.

ಆದರೆ, ವಿದೇಶ ಪ್ರವಾಸ ಮಾಡಿ ಬಂದವರನ್ನು ಕ್ವಾರಂಟೈನ್ ಗೆ ಒಳಪಡಿಸುತ್ತಿರುವುದರಿಂದ, ಈ ಇಬ್ಬರ ಟ್ರಾವೆಲ್ ಹಿಸ್ಟರಿಯನ್ನು ಪೊಲೀಸರು ಕೆದಕಿದ್ದಾರೆ. ಇದಾದ ನಂತರ, ಇಬ್ಬರ ಮನೆಯ ಗೇಟ್ ಮೇಲೆ ಕ್ವಾರಂಟೈನ್ ನೋಟಿಸ್ ಅಂಟಿಸಿದ್ದಾರೆ.
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಇಬ್ಬರು ಆ ನೋಟಿಸ್ ಅನ್ನು ಹರಿದು ಹಾಕಿದ್ದಾರೆ. ಅವರಿಗೆ ಹೆಂಡತಿಯರಿಂದಲೂ ಆ ವೇಳೆ ಸಪೋರ್ಟ್ ಸಿಕ್ಕಿದೆ. ಆಗ, ಪೋಲಿಸರು ಅವರ ಬ್ಯಾಂಕಾಕ್ ಹಿಸ್ಟರಿಯನ್ನು ವಿವರಿಸಿದ್ದಾರೆ.
ಜೊತೆಗೆ, ಕ್ವಾರಂಟೈನ್ ಗೆ ಒಳಪಡುವುದು ಎಷ್ಟು ಮುಖ್ಯ ಎನ್ನುವುದನ್ನು ಮನವರಿಕೆ ಮಾಡಿ, ಬೆಂಗಳೂರಿಗೆ ಹೋಗುತ್ತೇನೆಂದು ಸುಳ್ಳು ಹೇಳಿ, ಬ್ಯಾಂಕಾಕ್ ಹೋದ ಇಬ್ಬರನ್ನು ಕ್ವಾರಂಟೈನ್ ಗೆ ಒಳಪಡಿಸಿದ್ದಾರೆ. ಇಬ್ಬರ ಮನೆಯಲ್ಲಿ, ಮುಂದೇನಾಗಿರಬಹುದು, ಊಹಿಸುವುದು ಸುಲಭ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications