Breaking News: ಕೋಲ್ಕತಾ ಪಾರ್ಕ್ ಸರ್ಕಸ್ ಪ್ರದೇಶದಲ್ಲಿ ಶೂಟೌಟ್ 2 ಮೃತ
ಕೋಲ್ಕತಾ, ಜೂನ್ 10: ಭಾರತ ಹಾಗೂ ಬಾಂಗ್ಲಾದೇಶ ನಡುವೆ ಬಸ್ ಸೇವೆ ಪುನರ್ ಆರಂಭವಾಗಿದೆ. ಈ ನಡುವೆ ಬಾಂಗ್ಲಾದೇಶದ ರಾಯಭಾರ ಕಚೇರಿ ಬಳಿ ಇಂದು ಗುಂಡಿನ ದಾಳಿ ನಡೆದಿದೆ.
ಈ ದುರ್ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಭದ್ರತಾ ಸಿಬ್ಬಂದಿಯೊಬ್ಬ ತನ್ನ ಸರ್ವೀಸ್ ರೈಫಲ್ನಿಂದ ಗುಂಡು ಹಾರಿಸಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಹಲವು ಸುತ್ತಿನ ಗುಂಡು ಹಾರಿಸಿದ ಭದ್ರತಾ ಸಿಬ್ಬಂದಿ, ತಾನು ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ.
ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ನೀಡಿರುವ ಹೇಳಿಕೆ ವಿರೋಧಿಸಿ ಹಲವಾರು ಪ್ರತಿಭಟನಾಕಾರರು ಈ ಪ್ರದೇಶದಲ್ಲಿ ಬೀಡು ಬಿಟ್ಟಿದ್ದರು. ಜನದಟ್ಟಣೆ ನಡುವೆ ಈ ದುರ್ಘಟನೆ ನಡೆದಿದ್ದು, ಭದ್ರತಾ ಸಿಬ್ಬಂದಿ 8- 10 ಸುತ್ತು ಗುಂಡು ಹಾರಿಸಿದ್ದು, ಗುರಿ ತಪ್ಪಿದ್ದರಿಂದ ಹೆಚ್ಚಿನ ಸಾವು ನೋವು ಸಂಭವಿಸಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಬಾಂಗ್ಲಾದೇಶ ರಾಯಭಾರ ಕಚೇರಿಯಿಂದ ಸುಮಾರು 50 ಮೀಟರ್ ದೂರದಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟ ಮಹಿಳೆ ಬೈಕ್ ಸವಾರಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತ ಪೊಲೀಸ್ ಸಿಬ್ಬಂದಿಯನ್ನು ಛೊಡ್ಪಾ ಲೆಪ್ಚಾ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ರಜೆ ಮೇಲಿದ್ದ ಈತ ಪುನಃ ಕರ್ತವ್ಯಕ್ಕೆ ಮರಳಿದ್ದ ಎಂದು ಸಿಟಿ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.
ಕಾನ್ಸ್ಟೆಬಲ್ ತನ್ನ ಸೇವಾ ಆಯುಧ, ಸ್ವಯಂ-ಲೋಡಿಂಗ್ ರೈಫಲ್ ಅಥವಾ ಎಸ್ಎಲ್ಆರ್ನಿಂದ ಗುಂಡು ಹಾರಿಸಿದ. ಘಟನೆ ನಡೆದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
"ಚೋಡುಪ್ ಲೆಪ್ಚಾ ಸುಮಾರು ಒಂದು ವರ್ಷದ ಹಿಂದೆ ಪೊಲೀಸರಿಗೆ ಸೇರಿದ್ದಾರೆ" ಎಂದು ಕೋಲ್ಕತ್ತಾ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ. ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚೋಡುಪ್ ಲೆಪ್ಚಾ ಖಿನ್ನತೆಯಿಂದ ಬಳಲುತ್ತಿದ್ದರೆ ಎಂಬುದರ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.
"ಇಡೀ ಘಟನೆಯು ಸುಮಾರು ಐದು ನಿಮಿಷಗಳ ಕಾಲ ನಡೆಯಿತು," ಬಬ್ಲು ಶೇಖ್ ಎಂಬುವರು ಗುಂಡಿನ ದಾಳಿಯನ್ನು ನೋಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮೃತ ಮಹಿಳೆಯಲ್ಲಿ ರಿಮಾ ಸಿನ್ಹಾ ಎಂದು ಗುರುತಿಸಲಾಗಿದೆ. ಆಕೆ ಹೌರಾದ ನಿವಾಸಿ ಎಂದು ತಿಳಿದು ಬಂದಿದೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಮೊಹಮ್ಮದ್ ಸರ್ಫರೋಶ್, ಮೊಹಮ್ಮದ್ ಬಶೀರ್ ಎಂದು ಗುರುತಿಸಲಾಗಿದೆ.
Protests on at #ParkCircus in #Kolkata over #NupurSharma’s comments on the Prophet. pic.twitter.com/JfmBzuUPJs
— Sreyashi Dey (@SreyashiDey) June 10, 2022
Protests on at #ParkCircus in #Kolkata over #NupurSharma’s comments on the Prophet. pic.twitter.com/JfmBzuUPJs
— Sreyashi Dey (@SreyashiDey) June 10, 2022
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications