ಪ.ಬಂಗಾಲದಲ್ಲಿ ದೇಗುಲದ ಬಳಿ ಕಾಲ್ತುಳಿದಂಥ ಘಟನೆ; ಇಬ್ಬರು ಸಾವು
ಕೋಲ್ಕತ್ತಾ (ಪಶ್ಚಿಮ ಬಂಗಾಲ), ಆಗಸ್ಟ್ 23: ಪಶ್ಚಿಮ ಬಂಗಾಲದ ಉತ್ತರ 24 ಪರಗಣ ಜಿಲ್ಲೆಯ ದೇವಸ್ಥಾನದ ಬಳಿ ಶುಕ್ರವಾರ ಕಾಲ್ತುಳಿತದಂಥ ಸನ್ನಿವೇಶ ಸೃಷ್ಟಿಯಾಗಿ, ಇಬ್ಬರು ಸಾವನ್ನಪ್ಪಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬದವರಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಕಛುವಾ ಲೋಕ್ ನಾಥ್ ದೇವಾಲಯದ ಬಳಿ ಈ ಘಟನೆ ಸಂಭವಿಸಿದೆ. ಈ ವರ್ಷ ದೇವಾಲಯದ ಬಳಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಬೆಳಂಬೆಳಗ್ಗೆ ಭಾರೀ ಮಳೆ ಶುರು ಆಯಿತು. ಬಿದಿರಿನಿಂದ ಮಾಡಿದ ರಚನೆ ಅಡಿಯಲ್ಲಿ ನಿಲ್ಲಲು ಏಕಾಏಕಿ ತೆರಳಿದ್ದಾರೆ. ಆ ವೇಳೆ ಆ ಬಿದಿರಿನ ರಚನೆ ಮಳೆಗೆ ಕುಸಿದಿದೆ.
Recommended Video
ಈ ಸ್ಥಳ ಕಿರಿದಾಗಿದ್ದು, ಜನರ ಸಂಖ್ಯೆ ಕೂಡ ಹೆಚ್ಚಾಗಿತ್ತು. ದೇವಸ್ಥಾನದ ಬಳಿಯೇ ಇರುವ ಕೆರೆಯಲ್ಲಿ ಕೆಲವರು ಈ ವೇಳೆ ಬಿದ್ದಿದ್ದಾರೆ. ಇದರಿಂದ ಗೊಂದಲ ಸೃಷ್ಟಿಯಾಗಿ ಕಾಲ್ತುಳಿತದಂಥ ಸನ್ನಿವೇಶ ಸೃಷ್ಟಿಯಾಗಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.

ರಕ್ಷಣಾ ಕಾರ್ಯಗಳು ವೇಗವಾಗಿ ನಡೆಯುತ್ತಿವೆ. ಮೃತರ ಕುಟುಂಬದವರಿಗೆ ಐದು ಲಕ್ಷ ನೀಡಲಾಗಿದೆ. ತೀವ್ರವಾಗಿ ಗಾಯಗೊಂಡವರಿಗೆ ಒಂದು ಲಕ್ಷ ಹಾಗೂ ಇತರ ಗಾಯಾಳುಗಳಿಗೆ ಐವತ್ತು ಸಾವಿರ ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ. ಈ ದೇಗುಲದಲ್ಲಿ ಪ್ರತಿ ವರ್ಷದ ಈ ದಿನ ಲೋಕ್ ನಾಥ್ ಬ್ರಹ್ಮಚಾರಿಯ ಜನ್ಮ ವರ್ಷಾಚರಣೆಗಾಗಿ ಲಕ್ಷಗಟ್ಟಲೆ ಜನರು ಸೇರುತ್ತಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications