ಪಶ್ಚಿಮ ಬಂಗಾಳದ ಲಸಿಕಾ ಕೇಂದ್ರದಲ್ಲಿ ಕಾಲ್ತುಳಿತ, 20 ಮಂದಿಗೆ ಗಾಯ
ಕೋಲ್ಕತ್ತಾ, ಆಗಸ್ಟ್ 31: ಪಶ್ಚಿಮ ಬಂಗಾಳದ ಲಸಿಕಾ ಕೇಂದ್ರದಲ್ಲಿ ಕಾಲ್ತುಳಿತ ಉಂಟಾಗಿದ್ದು, 20 ಮಂದಿಗೆ ಗಂಭೀರ ಗಾಯಗಳಾಗಿವೆ.
ಉತ್ತರ ಬಂಗಾಳದ ಜಲಪೈ ಗುರಿಯ ದುಪ್ಗುರಿ ಬ್ಲಾಕ್ ನಲ್ಲಿ ಲಸಿಕಾ ಕೇಂದ್ರವಾಗಿ ಶಾಲೆಯೊಂದನ್ನು ಪರಿವರ್ತಿಸಲಾಗಿತ್ತು. ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಟೀ ಗಾರ್ಡನ್ ಜನರಿಂದ ಒಮ್ಮೆಲ್ಲೆ ನೂಕು ನೂಗಲು ಉಂಟಾದ್ದರಿಂದ ಈ ಘಟನೆ ಸಂಭವಿಸಿದೆ.
ಸುಮಾರು 2 ಸಾವಿರ ಜನರು ಲಸಿಕಾ ಕೇಂದ್ರದ ಬಳಿ ನೆರೆದಿದ್ದರು. ಅಲ್ಲಿ ಯಾವುದೇ ಪೊಲೀಸರನ್ನು ನಿಯೋಜಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಜಲ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರವೊಂದರ ಬಳಿ ಕಾಲ್ತುಳಿತ ಸಂಭವಿಸಿದ್ದು, ಸುಮಾರು 10 ಜನರು ಗಾಯಗೊಂಡಿದ್ದಾರೆ. ಸುಮಾರು 30 ಜನ ಗಾಯಗೊಂಡಿದ್ದರೂ ಪೊಲೀಸರು 20 ಜನ ಗಾಯಗೊಂಡಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ. ಗಾಯಾಳುಗಳ ಪೈಕಿ ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಆದಾಗ್ಯೂ, ಘಟನೆಯಲ್ಲಿ ಸುಮಾರು 30 ಮಂದಿ ಗಾಯಗೊಂಡಿದ್ದು, 8 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವುದಾಗಿ ಸ್ಥಳೀಯರು ಹೇಳುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.
ಅಪಾರ ಪ್ರಮಾಣದಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿದ ನಂತರ ಪರಿಸ್ಥಿತಿ ತಹಬದಿಗೆ ಬಂದಿದೆ. ಸ್ಥಳೀಯರು ಕೂಡಾ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾಗಿದ್ದಾರೆ. ಘಟನೆಯಲ್ಲಿ ಸುಮಾರು 20 ಜನರು ಗಾಯಗೊಂಡಿದ್ದಾರೆ.
ಆದರೆ ಅವರಲ್ಲಿ 15 ಜನರಿಗೆ ಪ್ರಾಥಮಿಕ ಉಪಚಾರದ ನಂತರ ವಾಪಸ್ ಕಳುಹಿಸಲಾಗಿದೆ. ಐವರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ಜಲ್ ಪೈಗುರಿ ಪೊಲೀಸ್ ಮಹಾನಿರ್ದೇಶಕ ದೆಬೊರ್ಷಿ ದತ್ತ ಹೇಳಿದ್ದಾರೆ.
ಕಳೆದ ವಾರವಷ್ಟೇ ಭಾರತದಲ್ಲಿ ಒಂದೇ ದಿನದಲ್ಲಿ 1 ಕೋಟಿ ಕೊರೊನಾ ಲಸಿಕೆ ವಿತರಣೆ ಮಾಡಲಾಗಿತ್ತು, ಇದೀಗ ಮತ್ತೊಂದು ದಾಖಲೆ ಸೃಷ್ಟಿಸಿದ್ದು ಮಂಗಳವಾರ ಸಂಜೆ 8 ಗಂಟೆಯವರೆಗೆ 1.21 ಕೋಟಿ ಕೊರೊನಾ ಲಸಿಕೆಯನ್ನು ವಿತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಗಸ್ಟ್ 27ರಂದು ಭಾರತದಲ್ಲಿ 1,08,99,699 ಕೊರೊನಾ ಲಸಿಕೆಯನ್ನು ನೀಡಲಾಗಿತ್ತು, ಇದುವರೆಗಿನ ಲಸಿಕೀಕರಣದಲ್ಲಿ ಇದು ಅತಿ ದೊಡ್ಡ ಸಂಖ್ಯೆಯಾಗಿತ್ತು. ಇದೀಗ ತನ್ನ ದಾಖಲೆಯನ್ನೇ ಭಾರತವು ಮುರಿದಿದೆ.
ರಾತ್ರಿ 8 ಗಂಟೆಯಷ್ಟೊತ್ತಿಗೆ ದೇಶದಲ್ಲಿ 1,21,99,230 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಆಗಸ್ಟ್ ತಿಂಗಳಲ್ಲಿ ಒಟ್ಟು 18 ಕೋಟಿ ಡೋಸ್ಗಳನ್ನು ನೀಡಲಾಗಿದೆ. ಜುಲೈಗಿಂತ ಶೇ.33ರಷ್ಟು ಹೆಚ್ಚು ಡೋಸ್ಗಳನ್ನು ನೀಡಲಾಗಿದೆ. ಜುಲೈನಲ್ಲಿ ಒಟ್ಟು 13.45 ಕೋಟಿ ಡೋಸ್ಗಳನ್ನು ನೀಡಲಾಗಿತ್ತು.
ಭಾರತದಲ್ಲಿ ಇದುವರೆಗೆ 50 ಕೋಟಿ ಮಂದಿ ಮೊದಲ ಡೋಸ್ ಪಡೆದಿದ್ದು, 15 ಕೋಟಿ ಮಂದಿ ಎರಡೂ ಡೋಸ್ಗಳನ್ನು ಪಡೆದಿದ್ದಾರೆ ಒಟ್ಟು ಇದುವರೆಗೆ 65 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications