ರಾಜಕೀಯ ಹೊಡೆದಾಟದ ನಡುವೆ ಮಗುವಿಗೆ ಗುಂಡಿಕ್ಕಿದ ದುಷ್ಕರ್ಮಿಗಳು
ಕೋಲ್ಕತಾ, ಆಗಸ್ಟ್ 31: ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಜಗಳದ ನಡುವೆ ಮೂರು ವರ್ಷದ ಮುಗ್ಧ ಮಗುವೊಂದು ಗುಂಡೇಟಿನಿಂದ ತೀವ್ರ ಗಾಯಗೊಂಡ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಮಾಲ್ಡಾದಲ್ಲಿ ಪಂಚಾಯತ್ ಸಮಿತಿಯ ರಚನೆ ವೇಳೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಆ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ.
ಮಾಣಿಕ್ಚಾಕ್ ಗ್ರಾಮದಿಂದ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಪುತುಲ್ ಮಂಡಲ್ ಅವರ ಮಗ ಮೃಣಾಲ್ ಮಂಡಲ್ ಗಾಯಗೊಂಡ ನತದೃಷ್ಟ ಮಗು.

ಆಗಸ್ಟ್ 28 ಮತ್ತು 29ರಂದು ಮಾಣಿಕ್ಚಾಕ್ ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಬಳಿಕ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿತ್ತು.
18 ಸೀಟುಗಳನ್ನು ಹೊಂದಿರುವ ಈ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಹತ್ತು ಸೀಟುಗಳನ್ನು ಗೆದ್ದಿದ್ದರೆ, ಟಿಎಂಸಿ ಆರರಲ್ಲಿ ಜಯಭೇರಿ ಬಾರಿಸಿತ್ತು. ಇನ್ನು ಸಿಪಿಐ (ಎಂ) ಮತ್ತು ಕಾಂಗ್ರೆಸ್ ತಲಾ ಒಂದು ಸೀಟುಗಳಲ್ಲಿ ಗೆದ್ದಿದ್ದವು.
ಬಿಜೆಪಿಯಿಂದ ಗೆದ್ದಿದ್ದ ಪುತುಲ್, ಹಣದ ಆಮಿಷಕ್ಕೆ ಒಳಗಾಗಿ ಟಿಎಂಸಿಗೆ ಸೇರಲು ಮುಂದಾಗಿದ್ದರು ಎಂದು ಆರೋಪಿಸಲಾಗಿದೆ.
ಗ್ರಾಮ ಪಂಚಾಯಿತಿಯ ಪ್ರಧಾನ್ ಅವರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಬಿಜೆಪಿ ಮತ್ತು ಟಿಎಂಸಿ ತಲಾ 9 ಮತಗಳನ್ನು ಪಡೆದಿದ್ದರಿಂದ ಟೈ ಆಗಿತ್ತು. ಬಳಿಕ ಟಾಸ್ ಹಾರಿಸಿದಾಗ ಬಿಜೆಪಿ ಜಯಗಳಿಸಿತ್ತು.
ಇದಾದ ಬಳಿಕ ಎರಡೂ ಪಕ್ಷಗಳ ನಡುವೆ ಹಿಂಸಾಚಾರ ಉಂಟಾಗಿತ್ತು. ಕೆಲವು ಅಪರಿಚಿತ ದುಷ್ಕರ್ಮಿಗಳು ಪುತುಲ್ ಅವರ ಮನೆಯ ಮೇಲೆ ದಾಳಿ ನಡೆಸಿದ್ದರು. ಆಗ ಅವರ ಹಾರಿಸಿದ ಗುಂಡು ಪುತುಲ್ ಅವರ ಮೂರು ವರ್ಷದ ಮಗ ಮೃಣಾಲ್ನ ತಲೆಗೆ ಹೊಕ್ಕಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications