ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಕಾರಿನ ಮೇಲೆ ಕಲ್ಲು ತೂರಾಟ

ನಂದಿಗ್ರಾಮ, ಏಪ್ರಿಲ್ 1: ಪಶ್ಚಿಮ ಬಂಗಾಳದಲ್ಲಿ ನಂದಿಗ್ರಾಮ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರ ಬೆಂಗಾವಲಿನ ಮೇಲೆ ಗುರುವಾರ ಮಧ್ಯಾಹ್ನ ಕಲ್ಲು ತೂರಾಟ ನಡೆದಿದೆ. ಈ ದಾಳಿಯಲ್ಲಿ ಸುವೇಂದು ಅಧಿಕಾರಿ ಅದೃಷ್ಟವಶಾತ್ ಪಾರಾಗಿದ್ದಾರೆ.

ನಂದಿಗ್ರಾಮದ ಸತೇಂಗಬರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸುವೇಂದು ಅಧಿಕಾರಿ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಲ್ಲುಗಳನ್ನು ಎಸೆಯಲಾಗಿದೆ. ಆದರೆ ಅವರು ಯಾವುದೇ ಹಾನಿಯಾಗದೆ ತಪ್ಪಿಸಿಕೊಂಡಿದ್ದಾರೆ. ನಂದಿಗ್ರಾಮ ಸೇರಿದಂತೆ ಬಂಗಾಳದ 30 ಕ್ಷೇತ್ರಗಳಿಗೆ ಎರಡನೆಯ ಹಂತದ ಮತದಾನ ನಡೆಯುವ ಸಂದರ್ಭದಲ್ಲಿಯೇ ಈ ದಾಲಿ ನಡೆದಿದೆ.

ಸುವೇಂದು ಅವರ ಕಾರಿನ ಹಿಂದೆ ಸಾಗುತ್ತಿದ್ದ ಮಾಧ್ಯಮದ ವಾಹನವೊಂದಕ್ಕೆ ಕಲ್ಲುಗಳು ಬಿದ್ದಿದ್ದು, ಕಾರಿಗೆ ತೀವ್ರ ಹಾನಿಯಾಗಿದೆ. ಇದಕ್ಕೂ ಮೊದಲು ನಂದಾನಾಯಕ್ ಬಾರ್ ಪ್ರೈಮರಿ ಶಾಲೆಗೆ ಬೆಳಿಗ್ಗೆ ಮೋಟಾರ್ ಸೈಕಲ್‌ನಲ್ಲಿ ತೆರಳಿದ್ದ ಸುವೇಂದು ಅಧಿಕಾರಿ, ನಂದಿಗ್ರಾಮದಲ್ಲಿ ಮೊದಲ ಬಾರಿ ತಮ್ಮ ಮತ ಚಲಾಯಿಸಿದರು.

West Bengal Assembly Election 2021: Stones Hurled At Suvendu Adhikaris Convoy In Nandigram

'ನಂದಿಗ್ರಾಮದ ಜನರು ಬಿಜೆಪಿ ಪರವಾಗಿ ಮತ ಚಲಾಯಿಸಲು ಬರುತ್ತಿದ್ದಾರೆ. ಈ ಪ್ರದೇಶದ ಜನರ ಜತೆ ನನಗೆ ಬಹಳ ಹಳೆ ಬಾಂಧವ್ಯ ಇದೆ' ಎಂದು ಸುವೇಂದು ಹೇಳಿದ್ದಾರೆ.

ಪಶ್ಚಿಮ ಮಿಡ್ನಾಪುರದಲ್ಲಿನ ಕೇಶ್ಪುರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಿಶ್ರಂಜನ್ ಕೊನಾರ್ ಅವರ ಬೆಂಗಾವಲಿನ ಮೇಲೆ ಕುಡ ಗುರುವಾರ ದಾಳಿ ನಡೆದಿರುವುದು ವರದಿಯಾಗಿದೆ.

Recommended Video

      ಇಂದಿನಿಂದ ಸಾರಿಗೆ ನೌಕರರ ಚಳುವಳಿ ಆರಂಭ, ಏ.7ಕ್ಕೆ ಬಸ್‌ ಸಂಚಾರ ಸ್ಥಗಿತ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+