ಟೈಮ್ಸ್ ನೌ ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಮತ್ತೆ ದೀದಿ
ಟೈಮ್ಸ್ ನೌ-ಸಿ ವೋಟರ್ ಸಮೀಕ್ಷೆಯಂತೆ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2021 ರಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯು ಮತ್ತೆ ಅಧಿಕಾರ ಹಿಡಿಯಲಿದೆ.
ಸಮೀಕ್ಷೆ ವರದಿಯಂತೆ ಬಿಜೆಪಿ ಹಾಗೂ ಮಿತ್ರಪಕ್ಷಗಳು 115 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಮಮತಾ ನೇತೃತ್ವದ ಟಿಎಂಸಿ ಹಾಗೂ ಮಿತ್ರ ಪಕ್ಷಗಳು 158 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಅಲ್ಪ ಬಹುಮತದೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಪಶ್ಚಿಮ ಬಂಗಾಳದ ಇತರೆ ಎಡಪಕ್ಷಗಳು 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿವೆ.
ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು 148 ಕ್ಷೇತ್ರಗಳಲ್ಲಿ ಜಯಗಳಿಸಿದವರು ಬಹುಮತ ಪಡೆಯುತ್ತಾರೆ.

ಬಿಜೆಪಿಯು 100 ಕ್ಕೂ ಹೆಚ್ಚು ಸೀಟು ಗಳಿಸಿದಲ್ಲಿ ಅದನ್ನು ಸಾಧನೆಯೆಂದೇ ಪರಿಗಣಿಸಬೇಕಾಗುತ್ತದೆ. ಪಶ್ಚಿಮ ಬಂಗಾಳದ 2016ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 3 ಸ್ಥಾನದಲ್ಲಿಯಷ್ಟೆ ಗೆದ್ದಿತ್ತು. ಆದರೆ ಕೇವಲ ಐದು ವರ್ಷದಲ್ಲಿ ನೂರಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ಕಡಿಮೆ ಸಾಧನೆಯೇನಲ್ಲ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಮತಾ ನೇತೃತ್ವದ ಟಿಎಂಸಿ ಪಕ್ಷವು 211 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 44 ಸ್ಥಾನಗಳಲ್ಲಿ ಜಯಿಸಿತ್ತು. ಕಾಂಗ್ರೆಸ್ ಈ ಬಾರಿ ಬೆರಳಂಕಿಯ ಸ್ಥಾನಗಳಲ್ಲಿಯಷ್ಟೆ ಬಂಗಾಳದಲ್ಲಿ ಜಯಿಸಲಿದೆ ಎನ್ನುತ್ತಿದೆ ಟೈಮ್ಸ್ ನೌ ಸಮೀಕ್ಷೆ.
ಟುಡೇಸ್ ಚಾಣಕ್ಯ, ರಿಪಬ್ಲಿಕ್-ಸಿಎನ್ಎಕ್ಸ್ ಇನ್ನೂ ಕೆಲವು ಸಮೀಕ್ಷೆಗಳಲ್ಲಿಯೂ ಬಿಜೆಪಿ ಪ್ರಬಲ ವಿಪಕ್ಷವಾಗಿ ಹೊರಹೊಮ್ಮುವುದೆಂಬ ಸಮೀಕ್ಷೆಯೇ ಹೊರಬಿದ್ದಿದೆ. ಜನ್ ಕೀ ಬಾತ್ ಹಾಗೂ ಪೀಪಲ್ಸ್ ಪೋಲ್ನಲ್ಲಿ ಮಾತ್ರ ಬಿಜೆಪಿಗೆ ಬಹುಮತ ದೊರಕುತ್ತದೆ ಎಂದು ಹೇಳಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications