ಉಪ ಚುನಾವಣೆ: ಶತ್ರುಘ್ನ ಸಿನ್ಹಾ ವಿರುದ್ಧ ಅಗ್ನಿಮಿತ್ರಾ ಸ್ಪರ್ಧೆ
ಕೋಲ್ಕತಾ, ಮಾರ್ಚ್ 18: ಮಾಜಿ ಕೇಂದ್ರ ಸಚಿವ ಮತ್ತು ಪ್ರಸಿದ್ಧ ನಟ ಶತ್ರುಘ್ನ ಸಿನ್ಹಾ, ಅಸನ್ಸೋಲ್ನಿಂದ ಲೋಕಸಭೆಯ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಶತ್ರುಘ್ನ ಸಿನ್ಹಾ ವಿರುದ್ಧ ಬಿಜೆಪಿ ತನ್ನ ಅಭ್ಯರ್ಥಿಯನ್ನು ಹೆಸರಿಸಿದೆ. ಡಿಸೈನರ್ ಕಮ್ ರಾಜಕಾರಣಿ ಅಗ್ನಿಮಿತ್ರಾ ಪಾಲ್ ಅವರನ್ನು ಕಣಕ್ಕಿಳಿಸಿದೆ.
ಇನ್ನು ಮಾಜಿ ಕೇಂದ್ರ ಸಚಿವ ಮತ್ತು ಹೆಸರಾಂತ ಗಾಯಕ ಬಾಬುಲ್ ಸುಪ್ರಿಯೋ ಅವರು ಬ್ಯಾಲಿಗಂಜ್ ವಿಧಾನಸಭಾ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದಾರೆ.
Agnimitra Paul & Keya Ghosh will be BJP candidates for Lok Sabha by-election from Asansol & Assembly by-election from Ballygunge, respectively.
— ANI (@ANI) March 18, 2022
Beby Kumari (Bochahan) & SN Kadam (Kolhapur North) will be party's candidates from Bihar & Maharashtra Assembly by-polls, respectively pic.twitter.com/PEava7J24T
ಎರಡು ಬಾರಿ ಬಿಜೆಪಿ ಸಂಸದರಾಗಿದ್ದ ಸುಪ್ರಿಯೊ ಅವರು ಕಳೆದ ವರ್ಷ ಕೇಸರಿ ಪಕ್ಷವನ್ನು ತೊರೆದು ಟಿಎಂಸಿ ಸೇರಿದ್ದರು. ನಂತರ ಅಸನ್ಸೋಲ್ ಲೋಕಸಭಾ ಸ್ಥಾನ ತೆರವಾಗಿತ್ತು. ರಾಜ್ಯ ಸಚಿವ ಸುಬ್ರತಾ ಮುಖರ್ಜಿ ಅವರ ನಿಧನದ ನಂತರ ಬ್ಯಾಲಿಗಂಜ್ ವಿಧಾನಸಭಾ ಸ್ಥಾನ ತೆರವಾಗಿದೆ.

ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಕಾಂಗ್ರೆಸ್ನ ಶೋಚನೀಯ ಸೋಲಿನ ಬಗ್ಗೆ ಶುಕ್ರವಾರ ಮಾತನಾಡಿದ್ದ ಮಮತಾ ಬ್ಯಾನರ್ಜಿ, "ಬಿಜೆಪಿ ವಿರುದ್ಧ ಹೋರಾಡಲು ಬಯಸಿರುವ ಎಲ್ಲ ರಾಜಕೀಯ ಪಕ್ಷಗಳೂ ಜತೆಗೂಡಬೇಕು. ಕಾಂಗ್ರೆಸ್ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದೆ. ನಾವು ಕಾಂಗ್ರೆಸ್ ಅನ್ನು ಅವಲಂಬಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದರು.
Pabitra Margherita (Assam), Dr Sikandra Kumar (Himachal Pradesh), S Phangnon Konyak (Nagaland) and Dr Manik Saha (Tripura) has been chosen for the 2022 Rajya Sabha biennial elections: Arun Singh, BJP National General Secretary pic.twitter.com/36t93qg73j
— ANI (@ANI) March 18, 2022
ಹಾಲಿ ಶಾಸಕಿ ಅಗ್ನಿಮಿತ್ರಾ
ಪಶ್ಚಿಮ ಬಂಗಾಳ ಬಿಜೆಪಿಯ ಪ್ರಧಾನ ಕಾರ್ಯದರ್ಶಿ, ಹಾಲಿ ಶಾಸಕಿ ಅಗ್ನಿಮಿತ್ರಾ ಪಾಲ್ ಅವರು ಅಸಾನೋಲ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. 2021ರಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಸಯಾನಿ ಘೋಶ್ ವಿರುದ್ಧ ಜಯ ದಾಖಲಿಸಿದ್ದರು. ಇನ್ನು ಬ್ಯಾಲಿಗುಂಜ್ ಉಪ ಚುನಾವಣೆಗೂ ಅಭ್ಯರ್ಥಿಯನ್ನು ಬಿಜೆಪಿ ಹೆಸರಿಸಿದ್ದು, ಕೇಯಾ ಘೋಶ್ ಅವರು ಸ್ಪರ್ಧಿಸಲಿದ್ದಾರೆ.
ಉಪ ಚುನಾವಣೆ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಅಗ್ನಿಮಿತ್ರಾ, ''ಬಾಬುಲ್ ಸುಪ್ರಿಯೋ, ಶತ್ರುಘ್ನಸಿನ್ಹಾ ಇಬ್ಬರಿಗೂ ಯಾವುದೇ ಸ್ವಂತಿಕೆಯಿಲ್ಲ ಎಂಬುದು ಜನರಿಗೆ ಗೊತ್ತಾಗಿದೆ. ದೇಶದಲ್ಲಿ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ ವೈಯಕ್ತಿಕ ಸಿದ್ಧಾಂತವೂ ಇಲ್ಲ ವ್ಯಕ್ತಿಗಳನ್ನು ಪುರಸ್ಕರಿಸುವುದಿಲ್ಲ, ಕಾಂಗ್ರೆಸ್ ಪಕ್ಷದಲ್ಲಿದ್ದ ಶತ್ರುಘ್ನ ಸಿನ್ಹಾ ನಂತರ ಬಿಜೆಪಿ ಸೇರಿದರು ಈಗ ಟಿಎಂಸಿಯಲ್ಲಿದ್ದಾರೆ, ಮುಂದೆ ಎಎಪಿ ಸೇರಿದರೂ ಅಚ್ಚರಿಪಡಬೇಕಾಗಿಲ್ಲ,'' ಎಂದಿದ್ದಾರೆ.
ಏಪ್ರಿಲ್ 12ರಂದು ಈ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದ್ದು, ಏಪ್ರಿಲ್ 16ರಂದು ಫಲಿತಾಂಶ ಹೊರ ಬರಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications