'ನಾಲ್ಕಲ್ಲ, ಎಂಟು ಹೆಣ ಉರುಳಬೇಕಿತ್ತು': ಬಿಜೆಪಿ ಮುಖಂಡನ ವಿವಾದಾತ್ಮಕ ಹೇಳಿಕೆ
ಕೋಲ್ಕತಾ, ಏಪ್ರಿಲ್ 12: ಪಶ್ಚಿಮ ಬಂಗಾಳದಲ್ಲಿ ಶನಿವಾರ ಸಿತಲ್ಕುಚಿಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣ ಮತ್ತಷ್ಟು ರಾಜಕೀಯ ವಿವಾದ ಸೃಷ್ಟಿಸಿದೆ. ಕಿಡಿಗೇಡಿಗಳು ಸುಮ್ಮನಿರದೆ ಇದ್ದರೆ ಸಿತಲ್ಕುಚಿಯಲ್ಲಿ ನಡೆದ ಘಟನೆ ಮರುಕಳಿಸುತ್ತದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ, ಬಿಜೆಪಿಯ ಮತ್ತೊಬ್ಬ ಮುಖಂಡ ರಾಹುಲ್ ಸಿನ್ಹಾ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಕೂಚ್ ಬೆಹಾರ್ನ ಸಿತಲ್ಕುಚಿಯಲ್ಲಿ ನಾಲ್ಕಲ್ಲ, ಎಂಟು ಮಂದಿಯನ್ನು ಸಿಐಎಸ್ಎಫ್ ಪಡೆಗಳು ಹತ್ಯೆ ಮಾಡಬೇಕಿತ್ತು ಎಂದು ಅವರು ಹೇಳಿದ್ದಾರೆ.
ಹಬ್ರಾ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿರುವ ರಾಹುಲ್ ಸಿನ್ಹಾ ಚುನಾವಣಾ ಸಮಾವೇಶದ ವೇಳೆ ಮಾತನಾಡುವ ಸಂದರ್ಭದಲ್ಲಿ, 'ಸಿತಲ್ಕುಚಿಯಲ್ಲಿ ನಾಲ್ಕಲ್ಲ, ಎಂಟು ಮಂದಿಯನ್ನು ಗುಂಡಿಕ್ಕಿ ಸಾಯಿಸಬೇಕಿತ್ತು' ಎಂದಿದ್ದಾರೆ.
'ಕೇಂದ್ರ ಪಡೆಗಳು ಸಿತಲ್ಕುಚಿಯಲ್ಲಿ ನಾಲ್ಕು ಮಂದಿಯ ಬದಲು ಎಂಟು ಮಂದಿಯನ್ನು ಸಾಯಿಸಬೇಕಿತ್ತು. ಆದರೆ ಕೇಂದ್ರ ಪಡೆಗಳು ನಾಲ್ಕು ಮಂದಿಯನ್ನು ಸಾಯಿಸಿದ್ದು ಏಕೆಂದರೆ ಅದರ ಪರಿಣಾಮ ಗೊತ್ತಿರಲಿ ಎಂದು. ಬಿಜೆಪಿಯನ್ನು ಬೆಂಬಲಿಸಿದ ಕಾರಣಕ್ಕೆ ಮತಗಟ್ಟೆಯಲ್ಲಿ ಸಾರ್ವಜನಿಕವಾಗಿ 18 ವರ್ಷದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಹಾಗೆ ಕೊಂದವರ ನಾಯಕಿ ಮಮತಾ ಬ್ಯಾನರ್ಜಿ' ಎಂದು ಆರೋಪಿಸಿದ್ದಾರೆ.

ಶನಿವಾರ ನಡೆದ ನಾಲ್ಕನೆಯ ಹಂತದ ಚುನಾವಣೆಯಲ್ಲಿ ಸನ್ನಿವೇಶಕ್ಕೆ ತಕ್ಕಂತೆಯೇ ಕೇಂದ್ರ ಪಡೆಗಳು ಪ್ರತಿಕ್ರಿಯೆ ನೀಡಿವೆ. ಈ ರೀತಿ ಮತ್ತೆ ಸಂಭವಿಸಿದರೆ ಅದಕ್ಕೂ ಕೇಂದ್ರ ಪಡೆಗಳು ಪ್ರತಿಕ್ರಿಯೆ ನೀಡುತ್ತವೆ ಎಂದಿದ್ದಾರೆ.
'ಜನರು ಮತದಾನ ಮಾಡುವುದನ್ನು ತಡೆಯಲು ಕೆಟ್ಟ ಮಾರ್ಗ ಅನುಸರಿಸುತ್ತಿರುವವರ ನಾಯಕಿ ಮಮತಾ ಬ್ಯಾನರ್ಜಿ. ಹೀಗಾಗಿ ಮಮತಾರ ದಿನಗಳು ಮುಗಿಯಿತು. ತಮ್ಮ ಶಕ್ತಿ ಪ್ರದರ್ಶನದ ಮೂಲಕ ಜನರು ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಈಡೇರಿಸುವುದಕ್ಕೆ ಗೂಂಡಾಗಳು ಅಡ್ಡಿಪಡಿಸುತ್ತಿದ್ದಾರೆ. ಸಿತಕ್ಕುಚಿಯಲ್ಲಿ ಅದೇ ನಡೆದಿರುವುದು. ಅದು ಮತ್ತೆ ನಡೆದರೆ, ಅವರು ಪುನಃ ಉತ್ತರ ನೀಡುತ್ತಾರೆ' ಎಂದು ಸಿನ್ಹಾ ಎಚ್ಚರಿಕೆ ನೀಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications