ಬುದ್ಧಿಜೀವಿಗಳನ್ನು 'ಕೋತಿಗಳು' ಎಂದ ಪಶ್ಚಿಮ ಬಂಗಾಳ ಬಿಜೆಪಿ ಮುಖಂಡ
ಕೋಲ್ಕತಾ, ಜನವರಿ 21: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರು 'ಮಮತಾ ಬ್ಯಾನರ್ಜಿ ಅವರ ನಾಯಿಗಳು' ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಟೀಕಿಸಿದ ಬೆನ್ನಲ್ಲೇ, ಅವರ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯಾಂತನ್ ಬಸು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.
ಖಾನ್ ಅವರ 'ನಾಯಿ' ಉಪಮೆ ವಿಚಾರದಲ್ಲಿ ತಕರಾರು ಇರುವವರು ಬುದ್ಧಿಜೀವಿಗಳನ್ನು 'ಕೋತಿಗಳು' ಎಂದು ಕರೆಯಬಹುದು ಎಂದು ಲೇವಡಿ ಮಾಡಿದ್ದಾರೆ.
ಪ್ರತಿಭಟನಾಕಾರರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ನಿಂದ ತಲಾ 500 ರೂ. ಪಡೆದಿದ್ದಾರೆ ಎಂದು ಸಹ ಅವರು ಆರೋಪಿಸಿದ್ದಾರೆ.

ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಖಾರಗ್ಪುರದಲ್ಲಿ ಸೋಮವಾರ ಮಾತನಾಡಿದ ಅವರು, 'ಬುದ್ಧಿಜೀವಿಗಳನ್ನು ನಾಯಿಗಳೆಂದು ಕರೆಯುವುದರ ಬಗ್ಗೆ ಸಮಸ್ಯೆ ಇದ್ದರೆ, ನೀವು ಅವರನ್ನು ಕೋತಿಗಳು ಎಂದು ಕರೆಯಬಹುದು. ಈ ಕಾನೂನು (ಸಿಎಎ) ಜನಸಾಮಾನ್ಯರಿಗಾಗಿ ಇರುವುದು. ಸಿಎಎ ಪರ ಸಮಾವೇಶಗಳು ನಡೆಯುವಾಗ ಎಲ್ಲಿ ಸಾಮಾನ್ಯ ಜನರು ಇರುತ್ತಾರೋ ನಾವು ಅಲ್ಲಿಗೆ ಭೇಟಿ ನೀಡುತ್ತೇವೆ. ನಾಯಿಗಳು ಮತ್ತು ಕೋತಿಗಳಿಂದ ತುಂಬಿರುವ ಸ್ಥಳಗಳಿಗೆ ಭೇಟಿ ನೀಡುವುದರಿಂದ ಯಾವ ಪ್ರಯೋಜನವೂ ಇಲ್ಲ' ಎಂದು ಹೇಳಿದ್ದಾರೆ.
'ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ಟಿಎಂಸಿಯಿಂದ 500 ರೂ ಪಡೆದಿದ್ದಾರೆ. ಸರಿಯಾದ ಸಮಯಕ್ಕೆ ದುಡ್ಡು ಬಾರದ ಕಾರಣದಿಂದ ಅವರು ಪ್ರತಿಭಟನೆಯನ್ನು ನಿಲ್ಲಿಸಿದ್ದಾರೆ' ಎಂದು ಬಸು ಟೀಕಿಸಿದ್ದಾರೆ.
ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಪ್ರತಿಭಟನೆ ನಡೆಸಲು ರಸ್ತೆಗಿಳಿದಿರುವ ಬುದ್ಧಿಜೀವಿಗಳು ಮತ್ತು ಪ್ರಸಿದ್ಧ ವ್ಯಕ್ತಿಗಳು ಮಮತಾ ಬ್ಯಾನರ್ಜಿ ಅವರ ನಾಯಿಗಳು ಎಂದು ಬಿಜೆಪಿ ಸಂಸದ ಸೌಮಿತ್ರಾ ಖಾನ್ ಭಾನುವಾರ ಟೀಕಿಸಿದ್ದರು.
ಬಸು ಮತ್ತು ಸೌಮಿತ್ರಾ ಅವರ ಹೇಳಿಕೆಯನ್ನು ಖಂಡಿಸಿರುವ ಟಿಎಂಸಿ ಸಚಿವ ತಪಸ್ ರಾಯ್, ಈ ಹೇಳಿಕೆಗಳಿಂದ ಅಚ್ಚರಿಯೇನೂ ಆಗಿಲ್ಲ ಎಂದಿದ್ದಾರೆ. 'ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಅವರೇ ಹೆಚ್ಚು ಅವಹೇಳನಾಕಾರಿ ಹೇಳಿಕೆಗಳನ್ನು ನೀಡುತ್ತಾರೆ. ಹೀಗಿರುವಾಗ ಪಕ್ಷದ ಇತರರು ಅದನ್ನೇ ಅನುಸರಿಸುವುದರಲ್ಲಿ ಅಚ್ಚರಿಯೇನಿಲ್ಲ. ಬಂಗಾಳಿ ಸಂಸ್ಕೃತಿಯನ್ನು ನಾಶಪಡಿಸಲು ಮುಂದಾಗಿರುವ ಬಿಜೆಪಿ ನಾಯಕರಿಂದ ಬೇರೇನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ' ಎಂದು ಕಿಡಿಕಾರಿದ್ದಾರೆ.
-
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
ಕೇರಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 9 ರಿಂದ ಮತದಾನ ಆರಂಭ , ಮೇ 4ಕ್ಕೆ ಫಲಿತಾಂಶ -
Kerala: ಕೇರಳಂ ವಿಧಾನಸಭೆ ಚುನಾವಣೆ 2026: ಎಲ್ಡಿಎಫ್–ಯುಡಿಎಫ್ ನಡುವೆ ಪೈಪೋಟಿ, ಹೇಗಿದೆ ರಾಜಕೀಯ ಕಣ -
ಮುಟ್ಟಿನ ರಜೆ ಮಹಿಳೆಯರ ಹಕ್ಕು: ಸುಪ್ರೀಂ ಕೋರ್ಟ್ ನಿಲುವನ್ನು ತೀವ್ರವಾಗಿ ಖಂಡಿಸಿದ CPI -
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Kerala Assembly Election 2026: ಕೇರಳಂ ವಿಧಾನಸಭೆ ಚುನಾವಣೆ 2026: ಒಂದೇ ಹಂತದಲ್ಲಿ 140 ಸ್ಥಾನಗಳಿಗೆ ಚುನಾವಣೆ -
ಇಂದು ಸಂಜೆ 4 ಗಂಟೆಗೆ 5 ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗ ಸಜ್ಜು -
Assam Assembly Election 2026: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ, ಮತ ಎಣಿಕೆ ದಿನಾಂಕಗಳ ವಿವರ -
Puducherry Election 2026: ವಿಧಾನಸಭಾ ಚುನಾವಣೆಗೆ ಸಜ್ಜಾದ ಪುದುಚೇರಿ ರಾಜಕೀಯ ಅಖಾಡ: ಏಪ್ರಿಲ್ 9ಕ್ಕೆ ಮತದಾನ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ












Click it and Unblock the Notifications