ಪ.ಬಂಗಾಲದಲ್ಲಿ ಹಿಂಸಾಚಾರ; ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಕೆ
ಕೋಲ್ಕತ್ತಾ (ಪಶ್ಚಿಮ ಬಂಗಾಲ), ಜೂನ್ 9: ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಶನಿವಾರ ನಡೆದ ಹೊಡೆದಾಟದಲ್ಲಿ ಬಿಜೆಪಿಯ ಇಬ್ಬರು ಹಾಗೂ ತೃಣಮೂಲ ಕಾಂಗ್ರೆಸ್ ನ ಒಬ್ಬ ಕಾರ್ಯಕರ್ತ ಮೃತಪಟ್ಟಿದ್ದಾರೆ. ಇನ್ನೊಬ್ಬರು ಕೂಡ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದ್ದು, ಐವರು ನಾಪತ್ತೆಯಾಗಿದ್ದಾರೆ.
ಈ ಹಿಂಸಾಚಾರದ ಬಗ್ಗೆ ವರದಿ ಕೇಳಿರುವ ಪಕ್ಷದ ರಾಷ್ಟ್ರಾಧ್ಯಕ್ಷರೂ ಆಗಿರುವ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಆಗಲು ಪಕ್ಷದ ನಾಯಕ ಮುಕುಲ್ ರಾಯ್ ಸೇರಿ ಇತರರ ನಿಯೋಗ ದೆಹಲಿಗೆ ತೆರಳಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಪ.ಬಂಗಾಲದಲ್ಲಿ ಅದ್ಭುತವಾದ ಗೆಲುವು ಸಾಧಿಸಿದ ನಂತರ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಜತೆಗಿನ ಹೊಡೆದಾಟ ಹೆಚ್ಚಾಗಿದೆ.
ಕಳೆದ ಹತ್ತು ದಿನದೊಳಗೆ ಮೂರು ಹೊಡೆದಾಟ ಘಟನೆಗಳು ವರದಿ ಆಗಿವೆ. ಬುರ್ದವಾನ್ ಜಿಲ್ಲೆಯಲ್ಲಿ ಮೇ ಮೂವತ್ತರಂದು ಬಿಜೆಪಿ ಕಾರ್ಯಕರ್ತರೊಬ್ಬರನ್ನು ಟಿಎಂಸಿ ಕಡೆಯವರು ಹತ್ಯೆ ಮಾಡಿದ್ದಾರೆಂದು ಆರೋಪಿಸಲಾಯಿತು. ಅದಾಗಿ ಎರಡು ದಿನಕ್ಕೆ ತೃಣಮೂಲ್ ಕಾಂಗ್ರೆಸ್ ಬೆಂಬಲಿಗನನ್ನು ಕೂಚ್ ಬೆಹರ್ ನಲ್ಲಿ ಕೊಲ್ಲಲಾಯಿತು. ಅದಕ್ಕೆ ಎರಡು ದಿನ ಮೊದಲು ಕೋಲ್ಕತ್ತಾದಲ್ಲಿ ಒಬ್ಬಾತನನ್ನು ಗುಂಡಿಟ್ಟು ಕೊಲ್ಲಲಾಗಿತ್ತು.

ಈ ಘಟನೆಗಳ ಬಗ್ಗೆ ಕೇಂದ್ರ ಗೃಹ ಸಚಿವರು ರಾಜ್ಯದಿಂದ ವರದಿ ಕೇಳಿದ್ದಾರೆ. ಕೇಂದ್ರ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಲಿದೆ. ಜನರಲ್ಲಿ ಘಟನೆ ಬಗ್ಗೆ ಸಿಕ್ಕಾಪಟ್ಟೆ ಸಿಟ್ಟಿದೆ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗೀಯ ಹೇಳಿದ್ದಾರೆ.
ಟಿಎಂಸಿಯ ಕಾರ್ಯಕರ್ತರಿಂದ ಖಯೂಂ ಮೊಲ್ಲಾ ಹತ್ಯೆಗೀಡಾದರೆ, ಪ್ರದೀಪ್ ಮೊಂಡಲ್ ಮತ್ತು ಸುಕಾಂತ ಮೊಂಡಲ್ ಬಿಜೆಪಿ ಕಾರ್ಯಕರ್ತರಿಂದ ಹತ್ಯೆಗೆ ಈಡಾಗಿದ್ದಾರೆ. ಈ ಮಧ್ಯೆ ಸಿಪಿಎಂ ಪಕ್ಷದ ಕಾರ್ಯಕರ್ತನೊಬ್ಬನ ಹತ್ಯೆಯಾಗಿದ್ದು, ಅದರ ವಿರುದ್ಧ ಪಕ್ಷವು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications