ಮಮತಾ ಬಜೆಟ್ ಮಂಡಿಸುವಾಗ 'ಜೈ ಶ್ರೀರಾಮ್' ಘೋಷಣೆ ಕೂಗಿದ ಬಿಜೆಪಿ
ಕೋಲ್ಕತಾ, ಫೆಬ್ರವರಿ 5: ಪಶ್ಚಿಮ ಬಂಗಾಳ ವಿಧಾನಸಭೆಯ ಅಧಿವೇಶನದ ವೇಳೆ ಶುಕ್ರವಾರ 'ಜೈ ಶ್ರೀರಾಮ್' ಎಂಬ ಘೋಷಣೆಗಳನ್ನು ಕೂಗಿದ ಬಿಜೆಪಿ ಶಾಸಕರು, ಸದನದಿಂದ ಹೊರನಡೆದರು.
ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಶುಕ್ರವಾರ ಬಜೆಟ್ ಅಧಿವೇಶನ ಆರಂಭವಾಯಿತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯ ಬಜೆಟ್ ಮಂಡಿಸಿದರು. ಸಾಮಾನ್ಯವಾಗಿ ಹಣಕಾಸು ಸಚಿವರು ಬಜೆಟ್ ಮಂಡಿಸುತ್ತಾರೆ. ಆದರೆ ರಾಜ್ಯ ಹಣಕಾಸು ಸಚಿವ ಅಮಿತ್ ಮಿತ್ರಾ ಅನಾರೋಗ್ಯದ ಕಾರಣ ವಿಧಾನಸಭೆಗೆ ಹಾಜರಾಗಲಿಲ್ಲ. ಹೀಗಾಗಿ ಮಮತಾ ಬ್ಯಾನರ್ಜಿ ಬಜೆಟ್ ಓದಿದರು.
ವಿಧಾನಸಭೆ ಅಧಿವೇಶನದ ಮೊದಲ ದಿನದಂದು ಕಲಾಪಕ್ಕೆ ರಾಜ್ಯಪಾಲರನ್ನು ಆಹ್ವಾನಿಸದೆ ಇರುವುದನ್ನು ವಿರೋಧಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ಗದ್ದಲವೆಬ್ಬಿಸಿದರು. ಬಳಿಕ ಜೈ ಶ್ರೀರಾಮ್ ಎಂಬ ಘೋಷಣೆಗಳನ್ನು ಕೂಗಿ ಸದನದಿಂದ ಹೊರನಡೆದರು.

ಬಿಜೆಪಿ ಶಾಸಕರು ನಡೆಸಿದ ಗಲಾಟೆಯನ್ನು ಖಂಡಿಸಿದ ಬಂಗಾಳ ವಿಧಾನಸಭೆ ಸ್ಪೀಕರ್ ಬಿಮಾನ್ ಬ್ಯಾನರ್ಜಿ, 'ಇದು ಬಹಳ ಖೇದಕರ ಘಟನೆ. ಇದನ್ನು ನಾನು ಖಂಡಿಸುತ್ತೇನೆ. ಈ ರೀತಿ ನಡವಳಿಕೆಯನ್ನು ನಾನು ನೋಡಿರಲಿಲ್ಲ' ಎಂದು ಹೇಳಿದರು.
ಬಜೆಟ್ ಮಂಡನೆ ವೇಳೆ ಈ ರೀತಿ ಅಡ್ಡಿಪಡಿಸುವ ವರ್ತನೆಯನ್ನು ತಾವು ಕೂಡ ನೋಡಿರಲಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದರು. 'ಬಿಜೆಪಿಗೆ ಯಾವುದೇ ಚರ್ಚೆ ಅಥವಾ ಸಂವಾದಗಳನ್ನು ನಡೆಸುವುದು ಬೇಕಾಗಿಲ್ಲ' ಎಂದು ಅವರು ಆರೋಪಿಸಿದರು.
ಈ ನಡುವೆ 2021-22ನೇ ಸಾಲಿಗೆ 2,99,688 ಕೋಟಿ ರೂ ಮೊತ್ತದ ಬಜೆಟ್ ಅನ್ನು ಮಮತಾ ಮಂಡಿಸಿದರು. ಜನವರಿ 1ರಿಂದ ಜೂನ್ 30ರವರೆಗೆ ಎಲ್ಲ ಸಾರಿಗೆ ವಾಹನಗಳ ಪ್ರಯಾಣಿಕರ ಮೇಲಿನ ರಸ್ತೆ ತೆರಿಗೆಯನ್ನು ಮನ್ನಾ ಮಾಡಿರುವುದಾಗಿ ಪ್ರಕಟಿಸಿದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications