ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ: ಬಿಜೆಪಿಯ 'ರಥಯಾತ್ರೆ' ವಾಹನದ ಮೇಲೆ ದಾಳಿ

|
Google Oneindia Kannada News

ಕೋಲ್ಕತ್ತಾ, ಮಾರ್ಚ್ 16: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಸೇರಿದ 'ರಥಯಾತ್ರೆ' ಪ್ರಚಾರ ವಾಹನದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ಘಟನೆ ಸಂಭವಿಸಿದೆ, ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ರ‍್ಯಾಲಿ ಮುಗಿದ ಬಳಿಕ ಈ ಘಟನೆ ಸಂಭವಿಸಿದೆ. ಸ್ಥಳದಲ್ಲಿ ಸಾಕಷ್ಟು ಪೊಲೀಸರಿದ್ದರು. ಈ ದಾಳಿಯ ಹಿಂದೆ ಟಿಎಂಸಿ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ ಗೆಲ್ಲಬಹುದೆಂಬ ಹತಾಶೆಯಲ್ಲಿ ಮಮತಾ ನಾಟಕವಾಡುತ್ತಿದ್ದಾರೆ: ರಾಜನಾಥ್ ಸಿಂಗ್ಬಿಜೆಪಿ ಗೆಲ್ಲಬಹುದೆಂಬ ಹತಾಶೆಯಲ್ಲಿ ಮಮತಾ ನಾಟಕವಾಡುತ್ತಿದ್ದಾರೆ: ರಾಜನಾಥ್ ಸಿಂಗ್

ಬಿಜೆಪಿಯ ರಥಯಾತ್ರೆ ವಾಹನವು ಎಲ್ಲಾ 9 ಮತ ಕ್ಷೇತ್ರಗಳಿಗೂ ತೆರಳಿ ಪುರುಲಿಯಾಗೆ ವಾಪಸ್ ಆಗುವ ವೇಳೆ ದಾಳಿ ನಡೆದಿದೆ. ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ ಎಂದು ಅಮಿತ್ ಮಾಳವೀಯ ತಿಳಿಸಿದ್ದಾರೆ.

 West Bengal: BJPs Rath Vandalised In Purulia

ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಟಿಎಂಸಿ ಹೇಳಿದೆ. ಒಂದೊಮ್ಮೆ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ ಅಂದೇ ಮಾನವಹಕ್ಕುಗಳ ಅಂತ್ಯವಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಬಂಕುರದಲ್ಲಿ ಮಾತನಾಡುತ್ತಾ, ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿರುವ ಎಲ್ಲಾ ಬ್ಯಾಂಕುಗಳಿಗೆ ಬೀಗ ಬೀಳಲಿದೆ. ಹಾಗೆಯೇ ನಿಮ್ಮ ಎಲ್ಲಾ ಹಕ್ಕುಗಳನ್ನು ಕಳೆದುಕೊಳ್ಳಲಿದ್ದೀರಿ ಎಂದಿದ್ದಾರೆ.

English summary
The bus part of Bharatiya Janata Party's (BJP) 'rath yatra' was vandalised on Tuesday in West Bengal's Purulia. The incident reportedly took place soon after Trinamool MP Abhishek Banerjee's rally in Manbazar town of Purlia district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X