ಉಪಚುನಾವಣೆ: ಮಮತಾ ವಿರುದ್ದ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ಸಾಧ್ಯತೆ
ಕೋಲ್ಕತ್ತಾ, ಸೆಪ್ಟೆಂಬರ್ 06: ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಳಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರೀಕ್ಷೆಯಂತೆಯೇ ಭವಾನಿಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.ಆದರೆ ಸೆಪ್ಟೆಂಬರ್ 30ಕ್ಕೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭವಾನಿಪುರ ಕ್ಷೇತ್ರದಲ್ಲಿ ತನ್ನ ಯಾವುದೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದಿರುವ ಸಾಧ್ಯತೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಕೋವಿಡ್-19 ಪ್ರಕರಣ ಕಡಿಮೆಯಾಗಿರುವ ಹಿನ್ನೆಲೆ ಚುನಾವಣಾ ಆಯೋಗ ಚುನಾವಣೆ ನಡೆಸಲು ಮುಂದಾಗಿದೆ. ಈ ಹಿನ್ನೆಲೆ ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯನ್ನು ಘೋಷಣೆ ಮಾಡಿದೆ. ಈ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಈ ಮೂರು ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷೆಯಂತೆಯೇ ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ತೃಣಮೂಲ ಕಾಂಗ್ರೆಸ್ ಸ್ಪರ್ಧೆಗೆ ಇಳಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಭವಾನಿಪುರದಲ್ಲಿ ಸ್ಪರ್ಧಿಸಿರಲಿಲ್ಲ. ಬದಲಾಗಿ ನಂದಿಗ್ರಾಮ ಕ್ಷೇತ್ರದಲ್ಲಿ ಸ್ಪರ್ಧಿಸಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲನ್ನುಂಡಿದ್ದರು. ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದರೂ ಕೂಡಾ ಟಿಎಂಸಿ ಭರ್ಜರಿ ವಿಜಯವನ್ನು ಕಂಡಿತ್ತು. ಈ ಹಿನ್ನೆಲೆ ಮಮತಾ ಬ್ಯಾನರ್ಜೀಯನ್ನೇ ಮತ್ತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಟಿಎಂಸಿ ಪಕ್ಷವು ಆಯ್ಕೆ ಮಾಡಿತ್ತು. ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ಶಾಸಕರಾಗಿರುವುದು ಅನಿವಾರ್ಯವಾಗಿದೆ. ಹಾಗೆಯೇ ನವೆಂಬರ್ 5ರ ಒಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ.

ಈ ಹಿನ್ನೆಲೆಯಿಂದಾಗಿ ಮಮತಾ ಬ್ಯಾನರ್ಜಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ಭವಾನಿಪುರದ ಶಾಸಕ ಸ್ಥಾನಕ್ಕೆ ಶೋಭನ್ದೇವ್ ಚಟ್ಟೋಪಾಧ್ಯಾಯ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್ 30ಕ್ಕೆ ಉಪಚುನಾವಣೆ ನಿಗದಿಯಾಗಿದೆ. ಈ ನಡುವೆ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಲಾಗಿದೆ. ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿಯನ್ನು ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಮಾಡುವ ಹಿನ್ನೆಲೆ ಕಾಂಗ್ರೆಸ್ ಈಗ ಈ ಭವಾನಿಪುರ ಕ್ಷೇತ್ರದಲ್ಲಿ ತನ್ನ ಯಾವುದೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದಿರುವ ಸಾಧ್ಯತೆ ಇದೆ.
ಈ ನಡುವೆ ಬಿಜೆಪಿಯ ಕಾಲೆಳೆದಿರುವ ತೃಣಮೂಲ ಕಾಂಗ್ರೆಸ್ನ ನಾಯಕ ಮದನ್ ಮಿತ್ರಾ, "ಭವಾನಿಪುರ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನು ಸ್ಪರ್ಧೆಗೆ ಇಳಿಸುವ ಮೂಲಕ ಬಿಜೆಪಿ ಸುಮ್ಮನ್ನೇ ತನ್ನ ಹಣವನ್ನು ಖರ್ಚು ಮಾಡಬಾರದು," ಎಂದು ವ್ಯಂಗ್ಯವಾಡಿದ್ದಾರೆ.
"ಭವಾನಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ ನಿಮ್ಮ ಅಭ್ಯರ್ಥಿಯನ್ನು ಹಾಕುವ ಮೂಲಕ ನಿಮ್ಮ ಹಣವನ್ನು ಸುಮ್ಮನೇ ಹಾಳು ಮಾಡಬೇಡಿ," ಎಂದು ಬಿಜೆಪಿಗೆ ತೃಣಮೂಲ ಕಾಂಗ್ರೆಸ್ನ ನಾಯಕ ಮದನ್ ಮಿತ್ರಾ ಟಾಂಗ್ ನೀಡಿದ್ದಾರೆ.
ಇನ್ನುಳಿದ ಎರಡು ಕ್ಷೇತ್ರಗಳಾದ ಮುರ್ಷಿದಾಬಾದ್ನ ಜಂಗೀಪುರ ಕ್ಷೇತ್ರ ಹಾಗೂ ಸಮ್ಸೇರ್ಗಂಜ್ ಕ್ಷೇತ್ರದಲ್ಲೂ ಟಿಎಂಸಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮುರ್ಷಿದಾಬಾದ್ನ ಜಂಗೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಜಾಕಿರ್ ಹುಸೇನ್, ಸಮ್ಸೇರ್ಗಂಜ್ ಕ್ಷೇತ್ರದಿಂದ ಅಮಿರುಲ್ ಇಸ್ಲಾಂ ಕಣಕ್ಕೆ ಇಳಿಸಲಾಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಟ್ವೀಟ್ ಮಾಡಿದೆ. ಈ ಎರಡೂ ಕ್ಷೇತ್ರಗಳ ಶಾಸಕರು ಕೋವಿಡ್ನಿಂದಾಗಿ ಸಾವನ್ನಪ್ಪಿದ್ದಾರೆ. ಹೀಗಾಗಿ ಉಪಚುನಾವಣೆ ನಡೆಯುತ್ತಿದೆ.
(ಒನ್ ಇಂಡಿಯಾ ಸುದ್ದಿ)
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications