ದೀದಿ ಕ್ಷೇತ್ರದಲ್ಲಿ ಬೆಂಗಾಳಿಯೇತರರ ಬೆಂಬಲಕ್ಕಾಗಿ ಟಿಎಂಸಿ ಮಾಸ್ಟರ್ ಪ್ಲ್ಯಾನ್
ಕೋಲ್ಕತ್ತಾ, ಸೆಪ್ಟೆಂಬರ್ 14: ಮುಂಬರುವ ಉಪಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಾನಿಪುರ ಕ್ಷೇತ್ರದಲ್ಲಿ ಜಯ ಗಳಿಸಲು ಬೇಕಾದ ಎಲ್ಲಾ ಪ್ರಚಾರ, ಕಾರ್ಯತಂತ್ರಗಳನ್ನು ತೃಣಮೂಲ ಕಾಂಗ್ರೆಸ್ ಮಾಡುತ್ತಿದೆ. ಹಾಗೆಯೇ ಉಳಿದ ಎರಡು ಕ್ಷೇತ್ರಗಳಾದ ಮುರ್ಷಿದಾಬಾದ್ನ ಜಂಗೀಪುರ ಹಾಗೂ ಸಮ್ಸೇರ್ಗಂಜ್ ಕ್ಷೇತ್ರದಲ್ಲಿಯೂ ಟಿಎಂಸಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ.
ಕಳೆದ ವರ್ಷದ ನಡೆದ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿಯ ಎದುರು ಸೋಲು ಕಂಡ ಬೆನ್ನಲ್ಲೇ ತನ್ನ ಸ್ವ ಕ್ಷೇತ್ರ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಈಗ ಉಪಚುನಾವಣೆಗೆ ಇಳಿದಿದ್ದಾರೆ. ಈ ನಡುವೆ ಭವಾನಿಪುರದಲ್ಲಿ ಬಂಗಾಳಿ ಜನರ ಮತ ಮಾತ್ರವಲ್ಲದೆ ಬಂಗಾಳಿಯೇತರರ ಮತಗಳನ್ನು ಪಡೆಯಲು ಕೂಡಾ ತೃಣಮೂಲ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದೆ.
ತಮ್ಮ ಕ್ಷೇತ್ರದ ಎತ್ತರದ ವಸತಿ ಕಟ್ಟಡಗಳಲ್ಲಿ ನೆಲೆಸಿರುವ ಎಲ್ಲಾ ಜನರಿಗೂ ಸರ್ಕಾರದ ಯೋಜನೆಯ ಫಲ ದೊರಕಿದೆಯೇ ಎಂದು ಖಚಿತ ಪಡಿಸಿಕೊಳ್ಳಲು ತೃ ಣಮೂಲ ಕಾಂಗ್ರೆಸ್ ತನ್ನ ಮಹಿಳಾ ಕಾರ್ಯಕರ್ತರ ಗುಂಪನ್ನು ಈ ಕಟ್ಟಡಗಳಿಗೆ ಕಳುಹಿಸುತ್ತಿದೆ. ಈ ಗುಂಪಿನಲ್ಲಿ ಇರುವ ಕೆಲವು ಮಹಿಳೆಯರಿಗೆ ಪ್ರತ್ಯೇಕವಾಗಿ ಈ ಕಟ್ಟಡಗಳ ನಿವಾಸಿಗಳ ಕುಂದು ಕೊರತೆಗಳನ್ನು ಆಲಿಸುವ ಜವಾಬ್ದಾರಿಯನ್ನು ನೀಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಟಿಎಂಸಿಯ ರಾಜ್ಯ ಸಭೆ ಸಂಸದ ಸುಕೆಂದು ಶೇಖರ ರಾಯ್, "ನಮ್ಮ ಪಶ್ಚಿಮ ಬಂಗಾಳ ತೃಣಮೂಲ ಕಾಂಗ್ರೆಸ್ ಸರ್ಕಾರ ಹೇಗೆ ಮನೆ-ಮನೆ ಬಾಗಿಲಿಗೆ ತಲುಪುತ್ತಿದೆಯೋ ಅದೇ ರೀತಿಯಲ್ಲಿ ನಮ್ಮ ಪಕ್ಷ ಟಿಎಂಸಿಯು ಮನೆ-ಮನೆ ಬಾಗಿಲಿಗೆ ತೆರಳಿ ಜನರ ಕುಂದು ಕೊರತೆಯನ್ನು ಆಲಿಸಲಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಹಾಗೂ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಈ ಗುಂಪು ಮನೆ-ಮನೆ ಭೇಟಿ ನೀಡಿ ಜನರಿಗೆ ಮಾಹಿತಿ ನೀಡಲಿದೆ," ಎಂದು ತಿಳಿಸಿದ್ದಾರೆ. ಇನ್ನು ಭವಾನಿಪುರದಲ್ಲಿ ಜನರ ಬೆಂಬಲವನ್ನು ಕೋರಿ ಪಕ್ಷವು ಸಣ್ಣ ರ್ಯಾಲಿಯನ್ನು ನಡೆಸಲು ಕೂಡಾ ಸಿದ್ದತೆ ನಡೆಸಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
ಇನ್ನೊಂದೆಡೆ ಬಿಜೆಪಿಯು ವಕೀಲೆಯಾದ ಪ್ರಿಯಾಂಕ ಟಿಬ್ರೆವಾಲ್ರನ್ನು ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿಯ ಎದುರು ಕಣಕ್ಕೆ ಇಳಿಸಿದೆ. ಪ್ರಿಯಾಂಕ ಟಿಬ್ರೆವಾಲ್ ಬಿಜೆಪಿ ಪಕ್ಷದಲ್ಲಿದ್ದ ತಮ್ಮ ಆರು ವರ್ಷಗಳ ಕಾಲದಲ್ಲಿ ಪ್ರಿಯಾಂಕ ಬಿಜೆಪಿಯ ಹಲವಾರು ಕಾರ್ಯಗಳನ್ನು ನಿರ್ವಹಿಸಿದ್ದಾರೆ. 2020 ರಲ್ಲಿ ಪಶ್ಚಿಮ ಬಂಗಾಳದ ಭಾರತೀಯ ಜನತಾ ಯುವ ಮೋರ್ಚಾದ ಉಪಾಧ್ಯಕ್ಷೆಯಾಗಿ ಪ್ರಿಯಾಂಕ ಟಿಬ್ರೆವಾಲ್ ಆಯ್ಕೆಯಾಗಿದ್ದಾರೆ. ಇನ್ನು 2021 ರಲ್ಲಿ ವಕೀಲೆ ಪ್ರಿಯಾಂಕ ಟಿಬ್ರೆವಾಲ್ ಇಂತಲಿ ಕ್ಷೇತ್ರದಲ್ಲಿ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಿದ್ದು ಆದರೆ ಟಿಎಂಸಿಯ ಸ್ವರ್ಣ ಕಮಲ್ ಸಹಾ ಎದುರು 58,257 ಮತಗಳ ಅಂತರದ ಸೋಲನ್ನುಡಿದ್ದಾರೆ. ಈಗ ಮಮತಾ ಬ್ಯಾನರ್ಜಿಯ ಎದುರು ಭವಾನಿಪುರದಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ವಕೀಲೆಯಾಗಿ ಬಿಜೆಪಿಯ ಪರವಾಗಿ ವಾದ ಮಾಡಿರುವ ಪ್ರಿಯಾಂಕ ಟಿಬ್ರೆವಾಲ್ ಇತ್ತೀಚೆಗೆ ಚುನಾವಣಾ ನಂತರ ನಡೆದ ಪಶ್ಚಿಮ ಬಂಗಾಳ ಹಿಂಸಾಚಾರದ ಬಗ್ಗೆ ಬಿಜೆಪಿ ಪರವಾಗಿ ಸರ್ಕಾರದ ವಿರುದ್ದವಾಗಿ ವಾದ ಮಾಡಿದ್ದಾರೆ. ಈಗ ಈ ಪ್ರಕರಣ ಸಿಬಿಐ ತನಿಖೆಗೆ ಒಳಪಡುತ್ತಿದೆ.
ಇನ್ನು ತೃಣಮೂಲ ಕಾಂಗ್ರೆಸ್ ಹೊಸದಾಗಿ ಬಂಗಾಳಿಯೇತರರ ಮತಕ್ಕೂ ಕಣ್ಣು ಇಟ್ಟಿರುವ ನಡುವೆ ಬಿಜೆಪಿಯು ಭವಾನಿಪುರ ಕ್ಷೇತ್ರದಲ್ಲಿ ತನ್ನ ಪ್ರಚಾರ ಕಾರ್ಯ ಆರಂಭ ಮಾಡಿದೆ. ಆದರೆ ಈ ನಡುವೆ ಕಾಂಗ್ರೆಸ್ ಮಾತ್ರ ತೃಣಮೂಲ ಕಾಂಗ್ರೆಸ್ ಎದುರು ತನ್ನ ಯಾವುದೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಹೈಕಮಾಂಡ್ ಆಜ್ಞೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಆದರೆ ಸಿಪಿಐಎಂ ಮಾತ್ರ ಬಿಜೆಪಿ, ಟಿಎಂಸಿ ಎರಡು ಕೂಡಾ ಈ ರಾಜ್ಯಕ್ಕೆ ಆಪತ್ತು, ಬದಲಾವಣೆ ಅಗತ್ಯ ಎಂದು ಹೇಳಿ ಟಿಎಂಸಿ ಎದುರು ತಮ್ಮ ಅಭ್ಯರ್ಥಿಯನ್ನು ಇಳಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರಲಿಲ್ಲ. ಬದಲಾಗಿ ನಂದಿಗ್ರಾಮ ಕ್ಷೇತ್ರದಲ್ಲಿ ಸ್ಪರ್ಧಿಸಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲನ್ನುಂಡಿದ್ದರು. ಆದರೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಭರ್ಜರಿ ಜಯಗಳಿಸಿದ ಹಿನ್ನೆಲೆ ಪಕ್ಷ ಮಮತಾ ಬ್ಯಾನರ್ಜಿಯನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಆದರೆ ತನ್ನ ಈ ಮುಖ್ಯಮಂತ್ರಿ ಸ್ಥಾನವನ್ನು ಮಮತಾ ಉಳಿಸಿಕೊಳ್ಳಬೇಕಾದರೆ ನವೆಂಬರ್ 5 ರ ಒಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ. ಈ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ಭವಾನಿಪುರದ ಶಾಸಕ ಸ್ಥಾನಕ್ಕೆ ಶೋಭನ್ದೇವ್ ಚಟ್ಟೋಪಾಧ್ಯಾಯ ರಾಜೀನಾಮೆ ನೀಡಿದ್ದಾರೆ. ಭವಾನಿಪುರದಿಂದ ಮಮತಾ ಬ್ಯಾನರ್ಜಿ ಸ್ಪರ್ಧೆಗೆ ಇಳಿದಿದ್ದಾರೆ. ಸೆಪ್ಟೆಂಬರ್ 30ಕ್ಕೆ ಉಪಚುನಾವಣೆ ನಡೆಯಲಿದೆ.
(ಒನ್ ಇಂಡಿಯಾ ಸುದ್ದಿ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications