ಶಾಸಕನ ಹತ್ಯೆ: ಆರೋಪಪಟ್ಟಿಯಲ್ಲಿ ಬಿಜೆಪಿ ಉಪಾಧ್ಯಕ್ಷ ಮುಕುಲ್ ರಾಯ್ ಹೆಸರು
ಕೋಲ್ಕತಾ, ಡಿಸೆಂಬರ್ 5: ನಾಡಿಯಾ ಜಿಲ್ಲೆಯಲ್ಲಿ ನಡೆದ ತೃಣಮೂಲ ಕಾಂಗ್ರೆಸ್ ಶಾಸಕ ಸತ್ಯಜಿತ್ ಬಿಸ್ವಾಸ್ ಅವರ ಕೊಲೆ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರು ಪ್ರಮುಖ ಸಂಚುಕೋರ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಸಿಐಡಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ.
ರಣಾಘಾಟ್ನ ಎಸಿಜೆಎಂ ನ್ಯಾಯಾಲಯದಲ್ಲಿ ಶನಿವಾರ ಸಿಐಡಿ ಉಪ ದೋಷಾರೋಪಪಟ್ಟಿ ಸಲ್ಲಿಸಿದೆ. 'ಮುಕುಲ್ ರಾಯ್ ಅವರನ್ನು ಆರೋಪಿ ಎಂದು ಅದರಲ್ಲಿ ಹೆಸರಿಸಲಾಗಿದೆ. ಇದುವರೆಗೂ ಒಟ್ಟು ಐವರನ್ನು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ. ಇದರಲ್ಲಿ ಮುಕುಲ್ ರಾಯ್ ಮತ್ತು ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಅವರ ಹೆಸರು ಒಳಗೊಂಡಿದೆ' ಎಂದು ರಾಯ್ ಪರ ವಕೀಲ ಸುಮನ್ ರಾಯ್ ತಿಳಿಸಿದ್ದಾರೆ.
ಸತ್ಯಜಿತ್ ಬಿಸ್ವಾಸ್ ಅವರ ಕೊಲೆ ಪ್ರಕರಣ ಸಂಬಂಧ ಮುಕುಲ್ ರಾಯ್ ಅವರನ್ನು ಮಾರ್ಚ್ನಲ್ಲಿ ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಕಲ್ಕತ್ತಾ ಹೈಕೋರ್ಟ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

'ನನ್ನ ವಿರುದ್ಧ 44 ಪ್ರಕರಣಗಳಿವೆ. ನಾನು ಇದರ ಬಗ್ಗೆ ಚಿಂತೆ ಮಾಡುವುದಿಲ್ಲ. ಅವರು ನನ್ನನ್ನು ಬಂಧಿಸಲು ಸಾಧ್ಯವಿಲ್ಲ. ಆದರೆ ಪಶ್ಚಿಮ ಬಂಗಾಳದ ಪೊಲೀಸ್ ಸಚಿವರು ಯಾರೆಂದು ಕೇಳಲು ಬಯಸುತ್ತೇನೆ. ಆರೋಪಪಟ್ಟಿಯಲ್ಲಿ ನನ್ನ ಹೆಸರು ಇರಬೇಕು ಎಂದು ಹಠ ಹಿಡಿದಿದ್ದು ಆಕೆ (ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ) ಅಲ್ಲವೇ? ನನಗೆ ನ್ಯಾಯಾಂಗದ ಬಗ್ಗೆ ಸಂಪೂರ್ಣ ನಂಬಿಕೆ ಇದೆ' ಎಂದು ಈ ಬೆಳವಣಿಗೆ ಬಗ್ಗೆ ಮುಕುಲ್ ರಾಯ್ ಪ್ರತಿಕ್ರಿಯಿಸಿದ್ದಾರೆ.
ಮುಕುಲ್ ರಾಯ್, ಈ ಪ್ರಕರಣದಲ್ಲಿ ಹೆಸರು ದಾಖಲಾದ ಎರಡನೆಯ ಪ್ರಮುಖ ಬಿಜೆಪಿ ನಾಯಕರಾಗಿದ್ದಾರೆ. ಇದಕ್ಕೂ ಮುನ್ನ ರಾಣಾಘಾಟ್ನ ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಅವರ ಹೆಸರನ್ನು ಸಿಐಡಿ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿತ್ತು.
ಕೃಷ್ಣಗಂಜ್ ವಿಧಾನಸಭೆ ಕ್ಷೇತ್ರದ ಟಿಎಂಸಿ ಶಾಸಕ ಸತ್ಯಜಿತ್ ಬಿಸ್ವಾಸ್ ಅವರನ್ನು ಕಳೆದ ವರ್ಷದ ಫೆಬ್ರವರಿ 9ರಂದು ನಾಡಿಯಾ ಜಿಲ್ಲೆಯಲ್ಲಿ ಗುಂಡುಹಾರಿಸಿ ಕೊಲೆ ಮಾಡಲಾಗಿತ್ತು. ಫಲ್ಬರಿ ಪ್ರದೇಶದ ತಮ್ಮ ಮನೆ ಸಮೀಪದಲ್ಲಿನ ಸ್ಥಳೀಯ ಕ್ಲಬ್ ಒಂದರಲ್ಲಿ ಸರಸ್ವತಿ ಪೂಜೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ 41 ವರ್ಷದ ಬಿಸ್ವಾಸ್ ಅವರ ಮೇಲೆ ಹತ್ತಿರದಿಂದ ಗುಂಡು ಹಾರಿಸಲಾಗಿತ್ತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications