ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳವನ್ನು ಗುಜರಾತ್ ಮಾಡಲು ಬಿಡುವುದಿಲ್ಲ: ಮಮತಾ ಗುಡುಗು

|
Google Oneindia Kannada News

ಕೋಲ್ಕತಾ, ಜೂನ್ 10: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ನ ಕಾರ್ಯಕರ್ತರ ನಡುವೆ ತೀವ್ರ ಸಂಘರ್ಷ ನಡೆದು ಕನಿಷ್ಠ ನಾಲ್ಕು ಮಂದಿ ಮೃತಪಟ್ಟ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಎಲ್ಲೆಡೆ ಸುಳ್ಳು ಸುದ್ದಿ ಹರಡುತ್ತಿದೆ ಎಂದು ಮಮತಾ ಸೋಮವಾರ ಆರೋಪಿಸಿದ್ದಾರೆ.

ಏನೂ ಆಗಿಲ್ಲ, ತಲೆಕೆಡಿಸಿಕೊಳ್ಬೇಡಿ! ಕೇಂದ್ರಕ್ಕೆ ದೀದಿ ಸರ್ಕಾರದ ಪತ್ರ ಏನೂ ಆಗಿಲ್ಲ, ತಲೆಕೆಡಿಸಿಕೊಳ್ಬೇಡಿ! ಕೇಂದ್ರಕ್ಕೆ ದೀದಿ ಸರ್ಕಾರದ ಪತ್ರ

'ಬಂಗಾಳವು ಗುಜರಾತ್ ಅಲ್ಲ. ಉತ್ತರ ಪ್ರದೇಶದಲ್ಲಿ ಮಕ್ಕಳನ್ನು ಹತ್ಯೆ ಮಾಡಲಾಗುತ್ತಿದೆ. ಆ ರೀತಿ ಇಲ್ಲಿ ಆಗಲು ನಾನು ಬಿಡುವುದಿಲ್ಲ. ಬಿಜೆಪಿ ರಾಷ್ಟ್ರೀಯ ನಾಯಕರು ತಮ್ಮ ಸಂಚಿನ ಭಾಗವಾಗಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಶಕ್ತಿಗಳ ಒತ್ತಡಕ್ಕೆ ನಾವು ಮಣಿಯುವುದಿಲ್ಲ' ಎಂದು ಹೇಳಿದ್ದಾರೆ.

West Bengal CM Mamata Banerjee will not all Bengal to become Gujarat

ಮಮತಾ ಬ್ಯಾನರ್ಜಿಗೆ ಕಿಮ್ ಜಾಂಗ್ ಉನ್ ಎಂದ ಗಿರಿರಾಜ್ ಸಿಂಗ್! ಮಮತಾ ಬ್ಯಾನರ್ಜಿಗೆ ಕಿಮ್ ಜಾಂಗ್ ಉನ್ ಎಂದ ಗಿರಿರಾಜ್ ಸಿಂಗ್!

ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಅವರು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ದೀದಿಗೆ ಪ್ರಶಾಂತ್ ಕಿಶೋರ್ ನೆರವು: ಬಿಜೆಪಿ-ಜೆಡಿಯು ಮೈತ್ರಿಯಲ್ಲಿ ಹಿರಿದಾದ ಕಂದಕ ದೀದಿಗೆ ಪ್ರಶಾಂತ್ ಕಿಶೋರ್ ನೆರವು: ಬಿಜೆಪಿ-ಜೆಡಿಯು ಮೈತ್ರಿಯಲ್ಲಿ ಹಿರಿದಾದ ಕಂದಕ

'ನನ್ನ ಸರ್ಕಾರವನ್ನು ಉರುಳಿಸಲು ಯಾರಾದರೂ ಪ್ರಯತ್ನಿಸಿದರೆ ಅದನ್ನು ಸಹಿಸುವುದಿಲ್ಲ. 2021ರಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಯಾರಾದರೂ ಸರ್ಕಾರವನ್ನು ಒಡೆಯಲು ಪ್ರಯತ್ನ ಮಾಡಿದರೆ ಅವರನ್ನು ಸುಮ್ಮನೆ ಬಿಡುವುದಿಲ್ಲ. ಈ ಸುಳ್ಳು ಪ್ರಚಾರವನ್ನು ನಾನು ಸಹಿಸುವುದಿಲ್ಲ' ಎಂದು ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದ್ದಾರೆ.

English summary
West Bengal Chief Minister Mamata Banerjee said that, she will not tolerate anyone trying to topple her government. She accused BJP leaders for spreading lies on Bengal clashes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X