ಬಂಗಾಳದಲ್ಲಿ ಸಿಎಂ V/s ರಾಜ್ಯಪಾಲ; ವಾಟ್ಸಾಪ್ ಸಂದೇಶವನ್ನೇ ಟ್ವೀಟ್ ಮಾಡಿದ ಗವರ್ನರ್
ಕೋಲ್ಕತ್ತಾ, ಜನವರಿ 31: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಮಾಡಿರುವ ವಾಟ್ಸಾಪ್ ಸಂದೇಶವನ್ನು ರಾಜ್ಯಪಾಲ ಜಗದೀಪ್ ಧಂಖರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ಈ ಇಬ್ಬರ ನಡುವಿನ ಕಾದಾಟ ಸದ್ದು ಮಾಡಿ ಸುದ್ದಿಯಾಗಿದೆ.
ರಾಜ್ಯಪಾಲರ ಪ್ರಕಾರ, ಅವರು ಮುಖ್ಯಮಂತ್ರಿಗೆ ಕಳುಹಿಸಿದ ಸಂದೇಶದಲ್ಲಿ, "ಸಾಂವಿಧಾನಿಕ ಪ್ರತಿನಿಧಿಗಳ ನಡುವಿನ ಸಂವಾದ ಮತ್ತು ಸಾಮರಸ್ಯವು ಪ್ರಜಾಪ್ರಭುತ್ವದ ಮೂಲತತ್ವ ಮತ್ತು ಆತ್ಮ ಮತ್ತು ಸಂವಿಧಾನದ ಆದೇಶವಾಗಿದೆ. ಇದು ಪರಸ್ಪರ ಗೌರವದಿಂದ ಅರಳುತ್ತದೆ," ಎಂದು ಉಲ್ಲೇಖಿಸಲಾಗಿದೆ.
"ನನ್ನ ಕಡೆಯಿಂದ ನಿಮಗೆ ಹೆಚ್ಚಿನ ವೈಯಕ್ತಿಕ ಗೌರವವನ್ನು ನೀಡುತ್ತೇನೆ. ಇದು ನಿಮ್ಮ ಆಲೋಚನೆ ಮತ್ತು ಸ್ವೀಕರಿಸುವ ಶೈಲಿಯನ್ನು ತೋರಿಸುತ್ತದೆ ಎಂಬ ಬಗ್ಗೆ ನನಗೆ ವಿಶ್ವಾಸವಿದೆ. ಸೋಮವಾರ ಬೆಳಗ್ಗೆ 10.25ಕ್ಕೆ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ನೀಡಿದ ಸಂದೇಶವನ್ನು ಓದಲಾಗಿದೆ ಎಂದು ರಾಜ್ಯಪಾಲ ಜಗದೀಪ್ ಧಂಖರ್ ತಮ್ಮ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯಪಾಲರನ್ನು ಟ್ವಿಟ್ಟರ್ ಖಾತೆಯಲ್ಲಿ ನಿರ್ಬಂಧಿಸಿದ ಮಮತಾ ಬ್ಯಾನರ್ಜಿ:
ಪಶ್ಚಿಮ ಬಂಗಾಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ನಿರ್ಬಂಧಿಸಿರುವುದಾಗಿ ತಿಳಿಸಿದ್ದರು. "ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ರಾಜ್ಯಪಾಲರು ನಮ್ಮ ಮೇಲೆ ಆರೋಪ ಮತ್ತು ದಾಳಿ ಮಾಡುತ್ತಾರೆ. ಅವರು ಒಬ್ಬರೇ ಸುಪ್ರೀಂ ಮತ್ತು ನಾವು ಬಂಧಿತ ಕಾರ್ಮಿಕರು ಎಂಬಂತೆ ಟ್ವೀಟ್ ಮಾಡುತ್ತಾರೆ. ನಾನು ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಹೀಗಾಗಿ ನಾನು ಇಂದು ಅವರನ್ನು ಟ್ವಿಟರ್ನಲ್ಲಿ ನಿರ್ಬಂಧಿಸಿದ್ದೇನೆ," ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಯಲ್ಲಿ ತಿಳಿಸಿದ್ದರು.
ರಾಜ್ಯಪಾಲರ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ:
ರಾಜ್ಯಪಾಲ ಜಗದೀಪ್ ಧಂಖರ್ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) "ಫೋನ್ ಟ್ಯಾಪಿಂಗ್" ಮತ್ತು "ಬೆದರಿಕೆ" ನೀಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದರು. "ನಾವು ಕಳೆದ ಒಂದು ವರ್ಷದಿಂದ ತಾಳ್ಮೆಯಿಂದ ಬಳಲುತ್ತಿದ್ದೇವೆ. ರಾಜ್ಯಪಾಲರು ಹಲವಾರು ಫೈಲ್ಗಳನ್ನು ಪೂರ್ಣಗೊಳಿಸಿಲ್ಲ. ಅವರು ಪ್ರತಿ ಫೈಲ್ ಅನ್ನು ಬಾಕಿ ಇರಿಸಿಕೊಳ್ಳುತ್ತಾರೆ. ಅವರು ನೀತಿ ನಿರ್ಧಾರಗಳ ಬಗ್ಗೆ ಹೇಗೆ ಮಾತನಾಡುತ್ತಾರೆ," ಎಂದು ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ ಮಾಡಿದ್ದರು.
ರಾಜ್ಯಪಾಲ ಜಗದೀಪ್ ಧಂಖರ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಪತ್ರಗಳನ್ನು ಬರೆದಿದ್ದೇನೆ. "ಪ್ರಧಾನಿಯವರು ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಏಕೆ ತೆಗೆದುಹಾಕಿಲ್ಲ? ಪೆಗಾಸಸ್ ಗವರ್ನರ್ ಭವನದಿಂದ ಓಡುತ್ತಿದ್ದು, ಅವರು ಫೋನ್ ಟ್ಯಾಪಿಂಗ್ ಮಾಡುತ್ತಿದ್ದಾರೆ," ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications