ನೂಪೂರ್ ಶರ್ಮಾ ವಿರುದ್ಧ ನಿರ್ಣಯ ಅಂಗೀಕರಿಸಿದ ಬಂಗಾಳ ವಿಧಾನಸಭೆ
ಕೋಲ್ಕತ್ತಾ, ಜೂ. 20: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಹೇಳಿಕೆಯನ್ನು ಖಂಡಿಸುವ ನಿರ್ಣಯವನ್ನು ಬಂಗಾಳ ವಿಧಾನಸಭೆ ಅಂಗೀಕರಿಸಿತು. ರಾಜ್ಯ ಸರ್ಕಾರ ನಿರ್ಣಯವನ್ನು ಅಂಗೀಕರಿಸಿದಾಗ ಬಿಜೆಪಿ ನಾಯಕರು ವಾಕ್ಸಮರ ನಡೆಸಿದರು.
ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಮತ್ತು ಮುಖ್ಯ ಸಚೇತಕ ಮನೋಜ್ ತಿಗ್ಗಾ ಸೇರಿದಂತೆ 7 ಬಿಜೆಪಿ ಶಾಸಕರನ್ನು ಪಶ್ಚಿಮ ಬಂಗಾಳದ ಶಾಸಕಾಂಗ ಸಭೆಯಿಂದ ಅಮಾನತುಗೊಳಿಸಿದ ಕೇವಲ 4 ದಿನಗಳ ನಂತರ ಈ ನಿರ್ಣಯ ಬಂದಿದ್ದು, ಬಳಿಕ ಅಮಾನತು ಹಿಂಪಡೆಯಲಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಸುವೆಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಆರಂಭಿಸಿದರು.
ರಾಜ್ಯ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, "ಬಿಜೆಪಿ ಪ್ರಚೋದನೆ ಮತ್ತು ದ್ವೇಷದ ರಾಜಕೀಯವನ್ನು ಮಾಡುತ್ತಿದೆ. ರಾಜ್ಯದಲ್ಲಿ ಹಿಂಸಾಚಾರ ನಡೆದಾಗ ನಾವು ಕ್ರಮ ಕೈಗೊಂಡಿದ್ದೇವೆ. ಆದರೆ ಈ ಮಹಿಳೆಯನ್ನು (ನೂಪುರ್ ಶರ್ಮಾ) ಇನ್ನೂ ಬಂಧಿಸಲಾಗಿಲ್ಲ ಹೇಗೆ? ಆಕೆಯನ್ನು ಬಂಧಿಸುವುದಿಲ್ಲ ಎಂದು ನನಗೆ ತಿಳಿದಿದೆ" ಎಂದರು. ನೂಪೂರ್ ಶರ್ಮಾ ಪ್ರವಾದಿ ಮುಹಮ್ಮದ್ ಅವರ ವಿವಾದಾತ್ಮಕ ಹೇಳಿಕೆಗಳ ಕುರಿತು ತಮ್ಮ ಜೀವ ಬೆದರಿಕೆಯ ಕಾರಣ ಕೋಲ್ಕತ್ತಾ ಪೊಲೀಸರ ಮುಂದೆ ಹಾಜರಾಗಲು ನಾಲ್ಕು ವಾರಗಳ ಕಾಲಾವಕಾಶವನ್ನು ಕೇಳಿದ್ದಾರೆ. ಅವರು ಸೋಮವಾರ ಪೊಲೀಸರ ಮುಂದೆ ಹಾಜರಾಗಬೇಕಿತ್ತು.

ದೇಶದಲ್ಲಿ ಬಿಜೆಪಿಯು ನಿರುದ್ಯೋಗದ ಪ್ರಮುಖ ಸಮಸ್ಯೆಯನ್ನು ಪರಿಹರಿಸುತ್ತಿಲ್ಲ. ಬಿಜೆಪಿಯು ಅಗ್ನಿಪಥ್ ಮೂಲಕ ಅವರ ಕಾರ್ಯಕರ್ತರ ಪಡೆಯನ್ನು ರಚಿಸಲು ಪ್ರಯತ್ನಿಸುತ್ತಿದೆ. ನಾವು ಸೇನಾ ಯೋಧರಿಗೆ ನಮಸ್ಕರಿಸುತ್ತೇವೆ. ಅವರು ರಕ್ಷಣೆಯಲ್ಲಿ ಕೆಲಸ ಮಾಡುತ್ತಾರೆ ಮತ್ತು ತರಬೇತಿಯ ಸಮಯದಲ್ಲಿ ಶಸ್ತ್ರಾಸ್ತ್ರಗಳನ್ನು ಬಳಸುವ ಕೌಶಲ್ಯವನ್ನು ಕಲಿಯುತ್ತಾರೆ. ಆದರೆ ಯೋಜನೆಯಡಿ ನೇಮಕಗೊಳ್ಳುವವರು 4 ವರ್ಷಗಳ ನಂತರ, ಅವರು ಹೊರಗುಳಿಯುತ್ತಾರೆ ಎಂದು ಬ್ಯಾನರ್ಜಿ ಹೇಳಿದ್ದಾರೆ.
ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಬಿಜೆಪಿಯವರು 17,000 ಉದ್ಯೋಗಗಳ ಬಗ್ಗೆ ಮಾತನಾಡುತ್ತಾರೆ. ಇದು ಯಾವಾಗ ಸಂಭವಿಸುತ್ತದೆ? ನಾವು ಇಷ್ಟು ಉದ್ಯೋಗಗಳನ್ನು ನೀಡಬಲ್ಲೆವು. ಹೀಗಾಗಿ ನಾವು ಬಿಜೆಪಿ ಮುಂದೆ ತಲೆಬಾಗಬೇಕಾಗಿಲ್ಲ ಎಂದು ಹೇಳಿದರು.

ಸುವೆಂದು ಅಧಿಕಾರಿ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಮಂದರ್ಮೋನಿ ಈಗ ದಾದಾಮೋನಿ. ದಾಡೋಮೋನಿ (ಸುವೆಂದು) ಪುರುಲಿಯಾ ಜನರ ಉದ್ಯೋಗಗಳನ್ನು ಕಿತ್ತುಕೊಂಡು ಮಿಡ್ನಾಪುರದ ಜನರಿಗೆ ಉದ್ಯೋಗ ನೀಡಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದರು. ಆಗ ಆಡಳಿತಾರೂಢ ಬಿಜೆಪಿಯ ವಕ್ತಾರರಾಗಿದ್ದ ನೂಪೂರ್ ಶರ್ಮಾ ಅವರು ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಹೇಳಿಕೆ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕತಾರ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಸೇರಿದಂತೆ ಹಲವು ದೇಶಗಳು ಹೇಳಿಕೆ ಹಿನ್ನೆಲೆ ಬಗ್ಗೆ ಟೀಕಾಪ್ರಹಾರ ನಡೆಸಿದ್ದವು. ಬಳಿಕೆ ನೂಪೂರ್ ಶರ್ಮಾರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ಆಕೆಯ ಹೇಳಿಕೆಗಳು ದೇಶಾದ್ಯಂತ ಪ್ರತಿಭಟನೆಗಳನ್ನು ಪ್ರಚೋದಿಸಿತು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications