Just in: ಬಂಗಾಳ ಪೊಲೀಸರಿಂದ ಅಲ್ಖೈದಾದ ಶಂಕಿತ ಸದಸ್ಯರ ಬಂಧನ
ಕೋಲ್ಕತ್ತಾ, ಆಗಸ್ಟ್ 18: ಪಶ್ಚಿಮ ಬಂಗಾಳ ಪೊಲೀಸ್ನ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಘಟಕವು ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾದ ಇಬ್ಬರು ಶಂಕಿತ ಸದಸ್ಯರನ್ನು ಬಂಧಿಸಿದೆ.
ಶಾಸನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಾರಿಬರಿಯಲ್ಲಿ ಈ ಇಬ್ಬರು ಶಂಕಿತ ಸದಸ್ಯರನ್ನು ಬಂಧಿಸಲಾಗಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್ ಖೈದಾದೊಂದಿಗೆ ಸಂಬಂಧವಿಟ್ಟುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಬಂಧಿತ ವ್ಯಕ್ತಿಗಳನ್ನು ಗಂಗಾರಾಮ್ಪುರದ ನಿವಾಸಿ ಅಬ್ದುರ್ ರಕೀಬ್ ಸರ್ಕಾರ್ ಮತ್ತು ಅರಂಬಾಗ್ನ ನಿವಾಸಿ ಕಾಜಿ ಅಹಸನ್ ಉಲ್ಲಾ ಎಂದು ಗುರುತಿಸಲಾಗಿದೆ. ಬಂಧಿತರಿಂದ ಭಾರತದ ವಿರುದ್ಧ ಯುದ್ಧ ಸಾರುವ ಮೂಲಭೂತವಾದಿ ಸಾಹಿತ್ಯ ಕೃತಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರು ಭಾರತೀಯ ಉಪಖಂಡದಲ್ಲಿ (AQIS) ನಿಷೇಧಿಸಿರುವ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಸಕ್ರಿಯ ಸದಸ್ಯರಾಗಿ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಬಂಗಾಳ ಪೊಲೀಸ್ನ ವಿಶೇಷ ಕಾರ್ಯಪಡೆ ಹೇಳಿಕೊಂಡಿದೆ.
ಇಬ್ಬರು ಆರೋಪಿಗಳ ವಿರುದ್ಧ UAPA ಮತ್ತು IPC ಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆ ಪ್ರಾರಂಭಿಸಲಾಗುತ್ತಿದೆ ಎಂದಿದ್ದಾರೆ. ಜೊತೆಗೆ ಇತರ 17 ಎಫ್ಐಆರ್ ಅನ್ನು ಅವರ ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇತ್ತಿಚೆಗೆ ಅಮೆರಿಕ ಡ್ರೋನ್ ದಾಳಿಯಲ್ಲಿ ಅಲ್-ಖೈದಾ ಮುಖ್ಯಸ್ಥ ಅಯಮಾನ್ ಅಲ್-ಜವಾಹಿರಿಯನ್ನು ಹತ್ಯೆ ಮಾಡುವ ಮೂಲಕ 9/11 ದಾಳಿಗೆ ಪ್ರತೀಕಾರವನ್ನು ತೀರಿಸಿಕೊಂಡಿದೆ. ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ಈ ಕಾರ್ಯಾಚರಣೆ ನಡೆಸಿತ್ತು. ಡ್ರೋನ್ ದಾಳಿಗೆ ಅಮೆರಿಕ ತನ್ನ ಅಪಾಯಕಾರಿ ಹೆಲ್ಫೈರ್ ಆರ್ 9ಎಕ್ಸ್ ಕ್ಷಿಪಣಿಯನ್ನು ಬಳಸಿತ್ತು.
71 ವರ್ಷದ ಅಯಮಾನ್ ಅಲ್-ಜವಾಹಿರಿ ಜಾಗತಿಕ ಮಟ್ಟದಲ್ಲಿ ಅಲ್ ಖೈದಾ ಮುಖ್ಯಸ್ಥರಾಗಿ ಗುರುತಿಸಿಕೊಂಡಿದ್ದರು. ಒಸಾಮಾ ಬಿನ್ ಲಾಡೆನ್ ಅನ್ನು ಅಮೆರಿಕಾ ಕೊಂದ 11 ವರ್ಷಗಳ ನಂತರ ಗುಂಪಿನ ಹೊಣೆ ಹೊತ್ತುಕೊಂಡಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications