Breaking: ಸಚಿವ ಸ್ಥಾನದಿಂದ ಬಂಧಿತ ಆರೋಪಿ ಪಾರ್ಥ ಚಟರ್ಜಿ ವಜಾ
ನವದೆಹಲಿ, ಜುಲೈ 28: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿಯಲ್ಲಿ ಅವ್ಯವಹಾರ ಹಗರಣದ ಆರೋಪಿ ಪಾರ್ಥ ಚಟರ್ಜಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರಕಾರ, ಪಾರ್ಥ ಚಟರ್ಜಿ ಅವರು ಜುಲೈ 28 ರಿಂದ ಜಾರಿಗೆ ಬರುವಂತೆ ತಮ್ಮ ಇಲಾಖೆಗಳ ಉಸ್ತುವಾರಿ ಕರ್ತವ್ಯಗಳಿಂದ ಮುಕ್ತರಾಗಿದ್ದಾರೆ ಎಂದಿದೆ.
ಪಶ್ಚಿಮ ಬಂಗಾಳ ಸಚಿವ ಸಂಪುಟದಲ್ಲಿ ಪಾರ್ಥ ಚಟರ್ಜಿ ಅವರು ಕಾಮರ್ಸ್ ಮತ್ತು ಇಂಡಸ್ಟ್ರಿ, ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್, ಸಂಸದೀಯ ವ್ಯವಹಾರ, ಪಬ್ಲಿಕ್ ಎಂಟರ್ ಪ್ರೈಸಸ್ ಮತ್ತು ಇಂಡಸ್ಟ್ರಿಯಲ್ ರೀಕನ್ಸ್ಟ್ರಕ್ಷನ್ (ಕೈಗಾರಿಕಾ ಪುನರ್ನಿರ್ಮಾಣ) ಖಾತೆ ಹೊಂದಿದ್ದರು.

ಶಾಲಾ ಸೇವಾ ಆಯೋಗದ (ಎಸ್ಎಸ್ಸಿ) ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಗಳು ಬಂದಿದ್ದವು. ಕಾಂಗ್ರೆಸ್ ಕೂಡ ಮಂಗಳವಾರ ಪಾರ್ಥ ಚಟರ್ಜಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸಿತ್ತು.
ಸ್ವಪಕ್ಷದಲ್ಲೇ ಸಚಿವರ ವಿರುದ್ಧ ಆಕ್ರೋಶ ಉಂಟಾಗಿತ್ತು. ಸಚಿವ ಪಾರ್ಥ ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಕ್ತಾರ ಕುನಾಲ್ ಘೋಷ್ ಒತ್ತಾಯಿಸಿದ್ದರು.
ಬಂಧಿತ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತ ಮುಖರ್ಜಿ ಮನೆಯಿಂದ ನಗದು ವಶಪಡಿಸಿಕೊಂಡಿರುವುದು ಪಕ್ಷಕ್ಕೆ "ಅಪಮಾನ" ಮತ್ತು "ನಮ್ಮೆಲ್ಲರಿಗೂ ಅವಮಾನ" ತಂದಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಕ್ತಾರ ಕುನಾಲ್ ಘೋಷ್ ಅಸಮಾಧಾನ ವ್ಯಕ್ತಪಡಿಸಿದ್ದರು.

ರಾಜ್ಯ ಕ್ಯಾಬಿನೆಟ್ನಿಂದ ಚಟರ್ಜಿ ಅವರನ್ನು ವಜಾಗೊಳಿಸುವಂತೆ ಪ್ರತಿಪಕ್ಷಗಳು ಒತ್ತಡ ಹಾಕುತ್ತಿದ್ದ ನಡುವೆ, ಟಿಎಂಸಿ ಸಾರ್ವಜನಿಕ ಗ್ರಹಿಕೆಯನ್ನು ಗಮನಿಸಬೇಕು ಮತ್ತು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕುನಾಲ್ ಘೋಷ್ ಹೇಳಿದ್ದರು.
ಈ ಹಿನ್ನೆಲೆಯಲ್ಲಿ ಪಾರ್ಥ ಚಟರ್ಜಿ ಅವರನ್ನು ರಾಜ್ಯ ಸಚಿವ ಸಂಪುಟದಿಂದ ಕೈಬಿಡಬಹುದು ಎಂಬ ಊಹಾಪೋಹಗಳು ಇದ್ದವು.
Recommended Video
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications