ಬಂಗಾಳದಲ್ಲಿ ಫ್ಯಾಸಿಸ್ಟ್ ಆಡಳಿತ: ತೇಜಸ್ವಿ ಸೂರ್ಯ
ಕೋಲ್ಕತಾ, ಅಕ್ಟೋಬರ್ 8: 'ಇಂದು ಪ್ರಜಾಪ್ರಭುತ್ವದ ಕರಾಳ ದಿನಗಳಲ್ಲಿ ಒಂದು. ತೃಣಮೂಲ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರ ಮತ್ತು ಗೂಂಡಾಗಳನ್ನು ಬಳಸಿಕೊಳ್ಳುತ್ತಿರುವ ರೀತಿ ಅಕ್ಷಮ್ಯ. ಇದು ನಮ್ಮ ಸಮಾವೇಶದ ಆರಂಭವಷ್ಟೇ' ಎಂದು ಪಶ್ಚಿಮ ಬಂಗಾಳದಲ್ಲಿ ನಬನ್ನಾ ಚಲೋ ಮೆರವಣಿಗೆ ಆಯೋಜಿಸಿದ್ದ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನಡೆದ ಹಿಂಸಾಚಾರದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಮೋರ್ಚಾದ ಅಧ್ಯಕ್ಷಗಿರಿ ಸಿಕ್ಕ ಬಳಿಕ ಇದು ನನ್ನ ಮೊದಲ ಜಾಥಾ. ಈ ರೀತಿಯ ಹಿಂಸಾಚಾರ ಮತ್ತು ದೌರ್ಜನ್ಯಗಳು ಪಶ್ಚಿಮ ಬಂಗಾಳದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾವು ಜಯಗಳಿಸಿದ ಬಳಿಕವಷ್ಟೇ ನಿಲ್ಲುತ್ತವೆ ಎಂದು ಹೇಳಿದರು.
ಬಂಗಾಳ ಪೊಲೀಸರು ಜಲಫಿರಂಗಿಯನ್ನು ರಾಸಾಯನಿಕಗಳನ್ನು ಬಳಸಿದ್ದಾರೆ. ಪೊಲೀಸರು ಬಳಸಿದ ನೀಲಿ ಬಣ್ಣದ ರಾಸಾಯನಿಕದ ಬಗ್ಗೆ ವಿಶೇಷ ತನಿಖೆ ನಡೆಯಬೇಕು ಎಂದು ನಾವು ಒತ್ತಾಯಿಸುತ್ತೇವೆ. ಜಗತ್ತಿನಲ್ಲಿ ಯಾವ ಪೊಲೀಸರೂ ಅಂತಹ ರಾಸಾಯನಿಕ ಬಳಸುವುದಿಲ್ಲ. ಬಂಗಾಳ ಸರ್ಕಾರವು ಫ್ಯಾಸಿಸ್ಟ್ ವ್ಯಕ್ತಿಗಳಿಂದ ನಡೆಯುತ್ತಿದೆ ಎಂಬುದನ್ನು ಇದು ತೋರಿಸುತ್ತದೆ ಎಂದು ತೇಜಸ್ವಿ ವಾಗ್ದಾಳಿ ನಡೆಸಿದರು.

ನಮ್ಮ ಮೆರವಣಿಗೆ ಮೇಲೆ ಟಿಎಂಸಿ ಗೂಂಡಾಗಳು ಮಹಡಿ ಮೇಲಿಂದ ಕಚ್ಚಾ ಬಾಂಬ್ಗಳನ್ನು ಎಸೆದರು. ನಮ್ಮ ಶಾಂತಯುತ ಮೆರವಣಿಗೆ ಮೇಲೆ ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಸಿಡಿಸಲಾಯಿತು. ಈ ದುರಾಡಳಿತಕ್ಕೆ ಅಂತ್ಯಹಾಡುವ ಸಮಯ ಬಂದಿದೆ ಎಂದು ಹೇಳಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications