'ನಮ್ಮ ತಂಟೆಗೆ ಬಂದ್ರೆ ಮುಗಿಸಿಬಿಡ್ತೀವಿ!' ಹೂಂಕರಿಸಿದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ, ಜೂನ್ 06: "ನಮ್ಮ ತಂಟೆಗೆ ಯಾರಾದರೂ ಬಂದರೆ ಅವರನ್ನು ನಾಶ ಮಾಡಿಬಿಡುವೆವು" ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೂಂಕರಿಸಿದ್ದಾರೆ.
ಇತ್ತಿವೆಗೆ ಶಾಪ ಹಾಕುವ, ಗುಡುಗುವ, ಅಸಹನೆಯಿಂದ ವರ್ತಿಸುವುದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಮಮತಾ ಬ್ಯಾನರ್ಜಿ ಅವರ ರಾಜಕೀಯ ಬದುಕಿಗೆ ಅವರ ಇಂಥ ಹೇಳಿಕೆಗಳೇ ಬಹುದೊಡ್ಡ ಪರಿಣಾಮ ಬೀರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.
ಈದ್ ಆಚರಣೆಯ ಸಮಯದಲ್ಲಿ ಅಂದರೆ, ಹಬ್ಬದ ಸಮಯದಲ್ಲಿ ಇಂಥ ಮಾತುಗಳನ್ನಾಡಿದ ಮಮತಾ ಬ್ಯಾನರ್ಜಿ ಅವರ ನಡೆ ತೀವ್ರ ಟೀಕೆಗೆ ಗುರಿಯಾಗಿದೆ. "ನಮ್ಮ ತಂಟೆಗೆ ಬಂದ್ರೆ ಅಂಥವರನ್ನು ನಾಶ ಮಾಡ್ತೀವಿ. ಅದೇ ನಮ್ಮ ಘೋಷವಾಕ್ಯ" ಎನ್ನುವ ಮೂಲಕ ಧಮಕಿ ಹಾಕುವ ಧಾಟಿಯಲ್ಲಿ ಮಮತಾ ಬ್ಯಾನರ್ಜಿ ಮಾತನಾಡಿರುವುದು ಅವರ ಹುದ್ದೆಗೆ ಶ್ರೇಯಸ್ಕರವಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

ಮಮತಾ ಬ್ಯಾನರ್ಜಿ ಹೇಳಿದ್ದೇನು?
"ಹಿಂದುಗಳು ತ್ಯಾಗಕ್ಕೆ ಹೆಸರಾದವರು, ಮುಸ್ಲಿಮರು ಸಮಗ್ರತೆಗೆ ಹೆಸರಾದವರು, ಕ್ರೈಸ್ತರು ಪ್ರೀತಿ, ಸಿಕ್ಖರು ಬಲಿದಾನಕ್ಕೆ ಹೆಸರಾದವರು. ಇದು ನಮ್ಮ ಹಿಂದುಸ್ಥಾನ, ನಾವು ಅದನ್ನು ಕಾಪಾಡುತ್ತೇವೆ. ಯಾರಾದರೂ ನಮ್ಮ ತಂಟೆಗೆ ಬಂದರೆ ಅಂಥವರನ್ನು ನಾಶ ಮಾಡುತ್ತೇವೆ. ಇದೇ ನಮ್ಮ ಘೋಷ ವಾಕ್ಯ" - ಮಮತಾ ಬ್ಯಾನರ್ಜಿ

ನಿದ್ದೆ ಕೆಡಿಸಿದ ಜೈ ಶ್ರೀರಾಮ್
ಇತ್ತೀಚೆಗಷ್ಟೇ ಟಿಎಂಸಿ ಮುಖಂಡೆ ಮಮತಾ ಬ್ಯಾನರ್ಜಿ ಅವರು ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಕೆಲವರು ರಸ್ತೆಯಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದರು. ಇದರಿಂದ ಕೋಪಗೊಂಡ ಮಮತಾ ಬ್ಯಾನರ್ಜಿ ಕಾರಿನಿಂದ ಇಳಿದು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಅವರೆಲ್ಲರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದರು. ಇದಾದ ನಂತರ ಬಹುಸಂಖ್ಯಾತ ಹಿಂದುಗಳ ಕೆಂಗಣ್ಣಿಗೆ ಮಮತಾ ಬ್ಯಾನರ್ಜಿ ಗುರಿಯಾಗಿದ್ದು, ಅವರಿಗೆ ಪೋಸ್ಟ್ ಕಾರ್ಡ್ ಮೂಲಕ ಜೈ ಶ್ರೀರಾಮ್ ಒಕ್ಕಣೆಯ ಹತ್ತು ಲಕ್ಷ ಪತ್ರಗಳನ್ನು ಕಳಿಸುವ ಅಭಿಯಾನ ನಡೆಯುತ್ತಿದೆ!

ಬಿಜೆಪಿ ಕಚೇರಿಗೆ ನುಗ್ಗಿ ಟಿಎಂಸಿ ಚಿನ್ಹೆ ಬಿಡಿಸಿ...
ಮೇ 30 ರಂದು ಪಶ್ಚಿಮ ಬಂಗಾಳದ ನೈಹತಿ ಎಂಬಲ್ಲಿಯ ಬಿಜೆಪಿ ಆಫೀಸಿಗೆ ನುಗ್ಗಿದ ಮಮತಾ ಬ್ಯಾನರ್ಜಿ , ಕಚೇರಿಯ ಬಾಗಿಲು ಮುರಿದು, ಕಚೇರಿಯ ಗೋಡೆಯ ಮೇಲೆ ತೃಣಮೂಲ ಕಾಂಗ್ರೆಸ್ ಚಿನ್ಹೆಯನ್ನು ಬರೆದು ಬಂದಿದ್ದರು! ಈ ವಿಡಿಯೋ ಸಹ ವೈರಲ್ ಆಗಿತ್ತು. ಈ ಕಚೇರಿ ತೃಣಮೂಲ ಕಾಂಗ್ರೆಸ್ ನದ್ದೇ ಆಗಿದ್ದು, ಬಿಜೆಪಿ ಅದನ್ನು ವಶಕ್ಕೆ ಪಡೆದಿತ್ತು. ಆದ್ದರಿಂದ ಈಗ ನಮ್ಮ ಕಚೇರಿಯನ್ನು ನಾವೇ ವಾಪಸ್ ಪಡೆಯುತ್ತಿದ್ದೇವೆ" ಎಂದಿದ್ದರು.

ಇದು ಹೀಗೇ ಸಾಗಿದರೆ ದೀದಿ ಕತೆ ಏನು?
ಹಾಗೆ ನೋಡುವುದಕ್ಕೆ ಹೋದರೆ ಮಮತಾ ಬ್ಯಾನರ್ಜಿ ತಾವೇ ತೋಡಿದ ಹಳ್ಳಕ್ಕೆ ತಾವೇ ಬೀಳುತ್ತಿದ್ದಾರೆ! ಅಲ್ಪಲಸಂಖ್ಯಾತರ ಮತಕ್ಕಾಗಿ ಬಹುಸಂಖ್ಯಾತ ಹಿಂದುಗಳನ್ನು ಅವಮಾನಕರವಾಗಿ ನಡೆಸಿಕೊಳ್ಳುತ್ತಿರುವ ಅವರ ಮರ್ತನೆಯೇ ಅವರಿಗೆ ಮುಳುವಾಗಿದೆ. ಅದಕ್ಕೆ ಸಾಕ್ಷಿ ಲೋಕಸಭೆ ಚುನಾವಣೆಯಲ್ಲಿ 42 ಕ್ಷೇತ್ರಗಳಲ್ಲಿ ಕೇವಲ 22 ಕ್ಷೇತ್ರಗಳಲ್ಲಿ ಗೆದ್ದು, ಬಿಜೆಪಿಗಿಂತ ನಾಲ್ಕೇ ನಾಲ್ಕು ಸ್ಥಾನಗಳಲ್ಲಿ ಮುಂದಿರುವುದು. ಕಳೆದ ಲೋಕಸಭೆ ಚುನಾವಣುಲ್ಲಿ ಎರಡು ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ 18 ಸ್ಥಾನಗಳಲ್ಲಿ ಗೆದ್ದರೆ, ಕಳೆದ ಬಾರಿ 34 ಸ್ಥಾನಗಳಲ್ಲಿ ಗೆದ್ದಿದ್ದ ಟಿಎಂಸಿ ಈ ಮಾರಿ 22 ಸ್ಥಾನಗಳಲ್ಲಿ ಗೆದ್ದಿದೆ. ಅತಿಯಾದ ಆತ್ಮವಿಶ್ವಾಸವೇ ಮಮತ ಆಬ್ಯಾನರ್ಜಿ ಅವರಿಗೆ ಮುಳುವಾಗಿದೆ ಎಂಬುದಕ್ಕೆ ಇದೇ ಸ್ಪಷ್ಟ ನಿದರ್ಶನ.

ಪ್ರಧಾನಿಗೂ ಗೌರವ ನೀಡದ ದೀದಿ
ಮಮತಾ ಬ್ಯಾನರ್ಜಿ ಅವರು ತಮ್ಮ ಅಸಹನೆಯ ವರ್ತನೆಯಿಂದಾಗಿ ಚುನಾವಣೆ ಪ್ರಚಾರದ ಸಮಯದಲ್ಲಿ ದೇಶದ ಅತ್ಯುನ್ನತ ಹುದ್ದೆಯಲ್ಲಿರು ಪ್ರಧಾನಿಯವರಿಗೂ ಗೌರವ ನೀಡಿರಲಿಲ್ಲ. ಅವರ ಕರೆಯನ್ನು ಸ್ವೀಕರಿಸಿದೆ, ಫೋನಿ ಚಂಡಮಾರುತ ಪೀಡಿತರಿಗೆ ನೆರವಾಗಲು ಮುಂದಾದರೆ ಅದಕ್ಕೂ ಒಪ್ಪದೆ, ಈಶ್ವರಚಂದ್ರ ವಿದ್ಯಾಸಾಗರ ಅವರ ಪ್ರತಿಮೆ ನಿರ್ಮಿಸುವುದಕ್ಕೆ ಅನುದಾನ ನೀಡಲು ಮುಂದಾದಾಗಲೂ 'ಬೇಕಾಗಿಲ್ಲ' ಎಂದು ಉದ್ಧಟತನ ಮೆರೆದಿದ್ದರು. ಅವರ ಈ ಎಲ್ಲಾ ವರ್ತನೆಗಳೇ ಇಂದು ಅವರ ರಾಜಕಿಯ ಬದುಕಿಗೆ ಮುಳುವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications