ಟಿಎಂಸಿ ಕಾರ್ಯಕರ್ತರಿಗೆ ನಾಯಿಗೆ ಬಡಿದಂತೆ ಬಡಿಯುತ್ತಾರೆ ಎಂದ ಮಾಜಿ ಪೊಲೀಸಮ್ಮ
ಕೋಲ್ಕತ್ತಾ (ಪಶ್ಚಿಮ ಬಂಗಾಲ), ಮೇ 5: ಪಶ್ಚಿಮ ಬಂಗಾಲದ ಘಟಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ತೃಣಮೂಲ್ ಕಾಂಗ್ರೆಸ್ ಕಾರ್ಯಕರ್ತರಿಗೆ ಧಮಕಿ ಹಾಕಿದ್ದಾರೆ. "ನೀವು ಜನರನ್ನು ಹೆದರಿಸುತ್ತಾ ಇದ್ದೀರಿ. ಸರಿಯಾದ ಮತದಾನಕ್ಕೆ ಅವಕಾಶ ನೀಡಲ್ಲ. ಜನರನ್ನು ಹೆದರಿಸಬೇಡಿ. ನಿಮ್ಮನ್ನು (ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು) ಮನೆಯಿಂದ ಹೊರಗೆಳೆದು ನಾಯಿಗೆ ಬಡಿದಂತೆ ಬಡಿಯುತ್ತಾರೆ" ಎಂದು ಘೋಷ್ ಹೇಳಿದ್ದಾರೆ.
ನಿಮ್ಮನ್ನು ಹೊಡೆಸಲು ಉತ್ತರಪ್ರದೇಶದಿಂದ ಒಂದು ಸಾವಿರ ಜನರನ್ನು ಕರೆಸುತ್ತೇನೆ ಎಂದು ಹೇಳಿದ್ದಾರೆ. ಘೋಷ್ ಅವರು ಒಂದು ಕಾಲಕ್ಕೆ ಮಮತಾ ಬ್ಯಾನರ್ಜಿಗೆ ಆಪ್ತರಾಗಿದ್ದರು. ಪಶ್ಚಿಮ ಮಿಡ್ನಾಪುರ್ ನಿಂದ ಹೊರಗೆ ವರ್ಗಾವಣೆ ಮಾಡಿದ ಮೇಲೆ ಎರಡು ವರ್ಷದ ಹಿಂದೆ ರಾಜೀನಾಮೆ ನೀಡಿದ್ದರು. ಆ ನಂತರ ಆಕೆ, ರಾಜ್ಯದ ಸಿಐಡಿಯಿಂದ ಹಫ್ತಾ ವಸೂಲಿ ಮಾಡಲಾಗುತ್ತಿದೆ ಎಂದು ಅರೋಪ ಮಾಡಿದ್ದರು.
ಘೋಷ್ ಮಾತಿಗೆ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ, ಜನರನ್ನು ಹೆದರಿಸುವುದನ್ನು ಬಿಡಿ ಎಂದಿದ್ದಾರೆ. "ನೀವು ಸೇವೆಯಲ್ಲಿದ್ದಾಗ ನನಗೆ ಕಳುಹಿಸಿದ್ದ ಟೆಕ್ಸ್ಟ್ ಮೆಸೇಜ್ ಗಳನ್ನು ಜನರ ಜತೆ ಹಂಚಿಕೊಂಡರೆ ನೀವು ಎಲ್ಲಿಯೂ ಇರಲ್ಲ. ನಿಮ್ಮ ಬಹಳ ಹಿಂದೆಯೇ ನಿಮ್ಮನ್ನು ಬಂಧಿಸಬೇಕಿತ್ತು'' ಎಂದು ಬ್ಯಾನರ್ಜಿ ಹೇಳಿದ್ದಾರೆ.

ಬಂಗಾಲದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಅವರು ಮಾಜಿ ಪೊಲೀಸ್ ಅಧಿಕಾರಿ ಭಾರತಿ ಘೋಷ್ ರನ್ನು ಬೆಂಬಲಿಸಿದ್ದಾರೆ. ಆಕೆ ಸರಿಯಾಗಿಯೇ ಹೇಳಿದ್ದಾರೆ ಎಂದಿದ್ದಾರೆ. ಇನ್ನು ತೃಣಮೂಲ ಕಾಂಗ್ರೆಸ್ ನಿಂದ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿದ್ದು, ಆಕೆ ಅಭ್ಯರ್ಥಿತನವನ್ನೇ ರದ್ದು ಮಾಡಬೇಕು ಎಂದು ಮನವಿ ಮಾಡಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications