'ರಸಗುಲ್ಲಾ ನೀಡ್ತೀವಿ, ಮತಗಳನ್ನಲ್ಲ' ಮೋದಿ ಮಾತಿಗೆ ಮಮತಾ ದೀದಿ ಉತ್ತರ
Recommended Video
ಕೋಲ್ಕತ್ತಾ (ಪಶ್ಚಿಮ ಬಂಗಾಲ), ಏಪ್ರಿಲ್ 25: "ನಾವು ರಸಗುಲ್ಲಾ ಮತ್ತು ಉಡುಗೊರೆಗಳನ್ನು ಕೊಟ್ಟು ಅತಿಥಿಗಳನ್ನು ಆಹ್ವಾನಿಸುತ್ತೇವೆ. ಆದರೆ ಒಂದು ಮತ (ಬಿಜೆಪಿಗೆ) ಸಹ ನೀಡುವುದಿಲ್ಲ" ಎಂದು ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿ ಹೆಸರನ್ನು ಎತ್ತದೆ ಚುಚ್ಚಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ವಿಶೇಷ ಸಂದರ್ಭಗಳಲ್ಲಿ ಅತಿಥಿ ಸತ್ಕಾರ ಮಾಡುವುದು ಬಂಗಾಳದ ಸಂಸ್ಕೃತಿ. ಹಾಗಂತ ನಾವು ಮತ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಹೂಗ್ಲಿ ಜಿಲ್ಲೆಯಲ್ಲಿ ಚುನಾವಣೆ ಪ್ರಚಾರ ಮಾಡುವ ವೇಳೆ ಅವರು ಮಾತನಾಡಿದ್ದಾರೆ. ಟೀವಿ ಸಂದರ್ಶನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಮಮತಾ ದೀದಿ ನನಗೆ ಪ್ರತಿ ವರ್ಷ ಉಡುಗೊರೆಗಳನ್ನು ಕಳಿಸುತ್ತಾರೆ ಎಂದಿದ್ದರು.
ಜನರು ಅಚ್ಚರಿ ಪಡುತ್ತಾರೆ ಮತ್ತು ಚುನಾವಣೆ ಸಂದರ್ಭದಲ್ಲಿ ಇದನ್ನು ಹೇಳಬಾರದು. ಆದರೆ ಮಮತಾ ದೀದಿ ಪ್ರತಿ ವರ್ಷ ಉಡುಗೊರೆ ಕಳುಹಿಸುತ್ತಾರೆ. ಅವರು ಈಗಲೂ ಒಂದೆರಡು ಕುರ್ತಾವನ್ನು ತಾವೇ ಆರಿಸಿ, ಕಳುಹಿಸುತ್ತಾರೆ ಎಂದು ನಟ ಅಕ್ಷಯ್ ಕುಮಾರ್ ಜತೆಗಿನ ಸಂದರ್ಶನದಲ್ಲಿ ಹೇಳಿದ್ದರು.

ಜತೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪ್ರತಿ ವರ್ಷ ಹೊಸ ಬಗೆಯ ಸಿಹಿ ತಿನಿಸು ಕಳಿಸುತ್ತಾರೆ. ಅದು ಒಂದು ಸಲ ಮಮತಾ ದೀದಿ ಅವರಿಗೆ ಗೊತ್ತಾಯಿತು. ಅವರು ಕೂಡ ವರ್ಷಕ್ಕೆ ಒಂದು ಅಥವಾ ಎರಡು ಬಾರಿ ಸಿಹಿ ತಿನಿಸು ಕಳುಹಿಸಲು ಆರಂಭಿಸಿದರು ಎಂದಿದ್ದಾರೆ.
ಇದಕ್ಕೂ ಮುನ್ನ ಚುನಾವಣೆ ಪ್ರಚಾರಗಳಲ್ಲಿ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು 'ಸ್ಪೀಡ್ ಬ್ರೇಕರ್ ದೀದಿ', ಸ್ಟಿಕ್ಕರ್ ದೀದಿ ಎಂದು ಮೂದಲಿಸಿದ್ದರು. ಪ್ರಧಾನಿ ನೀಡಿದ ಹೇಳಿಕೆಯು ಬಿಜೆಪಿ ಹಾಗೂ ಟಿಎಂಸಿ ಮಧ್ಯೆ ಇರುವ ರಹಸ್ಯ ನಂಟಾನ್ನು ಬಿಚ್ಚಿಡುತ್ತದೆ ಎಂದು ಕಾಂಗ್ರೆಸ್ ಹೇಳಿದೆ.












Click it and Unblock the Notifications