2ಬಿ ಮೀಸಲಾತಿ ರದ್ದು: ಕೊಪ್ಪಳದಲ್ಲಿ ಮುಸ್ಲಿಂ ಸಮುದಾಯದಿಂದ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ
ಕೊಪ್ಪಳ, ಮಾರ್ಚ್, 27: ಮುಸ್ಲಿಂ ಸಮುದಾಯದ 2B ಮೀಸಲಾತಿ ರದ್ದು ಮಾಡಲು ಸರ್ಕಾರ ನಿರ್ಧಾರ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಮುಸ್ಲಿಂ ಸಮುದಾಯ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದೆ.
#Muslim community protested in #Koppal demanding to reinstate 2B reservation which was taken away by state govt. #Karnataka govt has put them in EWS category. #Karnataka #KarnatakaElection2023 pic.twitter.com/G78DRSPIhG
— Imran Khan (@KeypadGuerilla) March 27, 2023
ನಗರದ ಗಡಿಯಾರ ಕಂಬದಿಂದ ಅಶೋಕ ವೃತ್ತದವರೆಗೂ ಪ್ರತಿಭಟನೆ ನಡೆಸಿದ್ದು, ಈ ವೇಳೆ ಸಾವಿರಾರು ಸಂಖ್ಯೆಯ ಮುಸ್ಲಿಂ ಸಮುದಾಯದ ಮುಖಂಡರು ಭಾಗಿಯಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಈ ಮೀಸಲಾತಿಯನ್ನು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಕ್ಕೆ ತಲಾ ಶೇ. 2ರಷ್ಟು ಹಂಚಿಕೆ ಮಾಡಲು ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. 2ಬಿಯಲ್ಲಿದ್ದ ಮುಸ್ಲಿಂ ಸಮುದಾಯವನ್ನು ಶೇ.10ರಷ್ಟು ಮೀಸಲಾತಿ ಇರುವ ಇಡಬ್ಲ್ಯೂಎಸ್ ಕೋಟಾಕ್ಕೆ ಸ್ಥಳಾಂತರಿಸುತ್ತಿರುವುದಾಗಿ ಘೋಷಣೆ ಮಾಡಲಾಗಿದೆ.
ಚುನಾವಣೆ ಸಮಯದಲ್ಲಿಯೇ ವಿವಾದಾತ್ಮಕ ವಿಷಯವಾದ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಗೆ ಒಪ್ಪಿಗೆ ನೀಡಿದ್ದು, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ನಿರ್ಧರಿಸಿದೆ. ಹೊಸ ಮೀಸಲಾತಿ ಸೂತ್ರದ ಪ್ರಕಾರ, ಮಾದಿಗ ಸಂಬಂಧಿತ ಜಾತಿಗಳಿಗೆ ಶೇ. 6ರಷ್ಟು, ಹೊಲೆಯ ಸಂಬಂಧಿತ ಜಾತಿಗಳಿಗೆ ಶೇ.5.5, ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಶೇಕಡಾ 4.5, ಇತರೆ ಅಲೆಮಾರಿ ಸಮುದಾಯಗಳಿಗೆ ಶೇ. 1ಎಷ್ಟು ಮೀಸಲಾತಿಯನ್ನು ಹಂಚಿಕೆ ಮಾಡುವ ನಿರ್ಣಯವನ್ನು ಸರ್ಕಾರ ಕೈಗೊಂಡಿದೆ.
ಸರ್ಕಾರವು ಈಗಾಗಲೇ ಎಸ್ಸಿ ಕೋಟಾವನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಎಸ್ಟಿ ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದೆ. ಅದನ್ನು ಸಂವಿಧಾನದ 9ನೇ ವಿಧಿಯಲ್ಲಿ ಸೇರಿಸಲು ಕೇಂದ್ರಕ್ಕೆ ಉಲ್ಲೇಖಿಸಲಾಗಿದೆ. ಜೊತೆಗೆ, ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಧ್ಯಯನ ಮಾಡಿದ್ದ ಸಚಿವ ಸಂಪುಟ ಉಪಸಮಿತಿ ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕುರಿತು ಇರುವ ಶಿಫಾರಸುಗಳನ್ನು ಅಂಗೀಕರಿಸಲು ನಿರ್ಧರಿಸಿದೆ.

ಮುಸ್ಲಿಮರಿಗೆ 2ಬಿ ಕೆಟಗರಿಯಲ್ಲಿ ನೀಡಲಾಗುತ್ತಿದ್ದ 4ರಷ್ಟು ಮೀಸಲಾತಿಯನ್ನು ರದ್ದುಪಡಿಸಿದ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಎಎಪಿ ನಿರ್ಧರಿಸಿದೆ.
ಒಳಮೀಸಲಾತಿ ಶಿಫಾರಸುಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ಇತ್ತಿಚೆಗಷ್ಟೇ ತಿಳಿಸಿದ್ದರು. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿ ಎಲ್ಲಾ ಪರಿಶಿಷ್ಟ ಜಾತಿಗಳಿಗೆ ಅವರ ಜನಸಂಖ್ಯೆಯ ಆಧಾರದ ಮೇಲೆ ನ್ಯಾಯ ಒದಗಿಸಲು ಒಳ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಸಂವಿಧಾನದ 341 (2) ನೇ ವಿಧಿಯ ಅಡಿಯಲ್ಲಿ ವರ್ಗಗಳನ್ನು ಮಾಡಲಾಗಿದೆ ಎಂದಿದ್ದರು.
ಒಳಮೀಸಲಾತಿ ಕೋರಿ ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಲೇ ಇದೆ. 101 ಎಸ್ಸಿ ಜಾತಿಗಳಲ್ಲಿ, ಬಂಜಾರ, ಕುರುಮ ಮತ್ತು ಭೋವಿಯಂತಹ ಕೆಲವು ಸಮುದಾಯಗಳನ್ನು ಎಸ್ಸಿ ಪಟ್ಟಿಯಿಂದ ತೆಗೆದುಹಾಕುವ ಆತಂಕವಿದೆ. ಆದರೆ ಅವರನ್ನು ಎಸ್ಸಿ ಕೋಟಾದಲ್ಲಿ ಮುಂದುವರಿಸಲಾಗುವುದು. ಮತ್ತೊಂದು ಕಾಡು ಕುರುಬರು, ಜೇನು ಕುರುಬರು ಮತ್ತು ಗೊಂಡ ಕುರುಬ ಜನಾಂಗದವರನ್ನು ಪರಿಶಿಷ್ಟ ಪಂಗಡದ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂಬ ಬೇಡಿಕೆಗೆ ಸಂಪುಟ ಒಪ್ಪಿಗೆ ನೀಡಿದೆ. ನಾವು ಮೈಸೂರು ವಿಶ್ವವಿದ್ಯಾನಿಲಯದಿಂದ ಈ ಸಮುದಾಯಗಳ ಕುರಿತು ಮಾನವಶಾಸ್ತ್ರೀಯ ಅಧ್ಯಯನ ವರದಿ ಕೇಳಿದ್ದೇವೆ ಎಂದು ಹೇಳಿದ್ದರು.
ಎಲ್ಲಾ ವಿವರಗಳನ್ನು ನೀಡುವ ಮೂಲಕ ಕೇಂದ್ರಕ್ಕೆ ಶಿಫಾರಸು ಮಾಡಲು ಮುಂದಿನ ಕ್ರಮ ಕೈಗೊಳ್ಳಲು ನಾವು ಕಾನೂನು ಇಲಾಖೆಗೆ ಸಲಹೆ ನೀಡಿದ್ದೇವೆ. ಪರಿಶಿಷ್ಟ ಪಂಗಡದ ಅಡಿಯಲ್ಲಿ ಸೇರಿಸಲು ಕಾಡು ಗೊಲ್ಲರು ಮತ್ತು ಕೋಲಿ ಸಮಾಜದ ಹೆಚ್ಚಿನ ವಿವರಗಳನ್ನು ಕೇಂದ್ರ ಸರ್ಕಾರವೂ ಕೋರಿದೆ. ವಿವರಗಳನ್ನು ನೀಡಲು ಸಂಬಂಧಿಸಿದ ಇಲಾಖೆಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.
ಆದರೆ ಇದೀಗ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿ ರದ್ದು ಮಾಡಲು ಮುಂದಾಗಿದ್ದು, ಸರ್ಕಾರದ ಈ ನಿರ್ಧಾರದ ವಿರುದ್ಧ ಮುಸ್ಲಿಂ ಸಮುದಾಯ ಕೆಂಡಕಾರುತ್ತಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications