ಹನುಮ ಭಕ್ತನ ಸಾಹಸ: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ 46ರ ರಾಯಪ್ಪ
ಕೊಪ್ಪಳ, ಮಾರ್ಚ್ 30: ವಾಯುಪುತ್ರ ಹನುಮಂತನ ಜನ್ಮಸ್ಥಳ ಎಂದು ಖ್ಯಾತಿ ಪಡೆದಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ರಾಮನವಮಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಮನವಮಿಯ ಶುಭ ದಿನದಂದು ಅಂಜನಾದ್ರಿ ಬೆಟ್ಟದಲ್ಲಿ ಹನುಮನ ಭಕ್ತರೊಬ್ಬರು ವಿಶೇಷ ಸಾಹಸ ಮೆರೆದಿದ್ದಾರೆ.
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕು ಹುನ್ನೂರು ಗ್ರಾಮದ (46) ವಯಸ್ಸಿನ ರಾಯಪ್ಪ ದಪೇದಾರ್ ಎನ್ನುವವರು ಬರೋಬ್ಬರಿ 101 ಕೆ.ಜಿ ತೂಕದ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ್ದಾರೆ. 1 ಗಂಟೆ 10 ನಿಮಿಷದಲ್ಲಿ ಹನುಮನ ಭಕ್ತ ರಾಯಪ್ಪ ದಪೇದಾರ್ 575 ಮೆಟ್ಟಿಲುಗಳನ್ನ ಹತ್ತಿ ಸಾಹಸ ಮೆರೆದಿದ್ದಾರೆ.

ರಾಮನವಮಿಯ ದಿನದಂದು ರಾಯಪ್ಪ ದಪೇದಾರ್ ಈ ವಿಶೇಷ ಸಾಹಸ ಮಾಡಿದ್ದು, ಜೈ ಶ್ರೀರಾಮ್ ಎಂದು ಬರೆದಿರುವ 101 ಕೆ.ಜಿ ತೂಕದ ಜೋಳದ ಚೀಲ ಹೊತ್ತು ಒಂದೊಂದೆ ಮೆಟ್ಟಿಲುಗಳನ್ನು ಹತ್ತುತ್ತಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಾಮಾನ್ಯವಾಗಿ ಅಂಜನಾದ್ರಿ ಬೆಟ್ಟ 575 ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆಯುವುದರಲ್ಲಿ ಕೆಲವರು ಬಸವಳಿಯುತ್ತಾರೆ. ಅಂತಹದಲ್ಲಿ (46) ವಯಸ್ಸಿನ ರಾಯಪ್ಪ ದಪೇದಾರ್ ಅವರು ಈ ಬೇಸಿಗೆಯ ಬಿರು ಬಿಸಿಲಿನಲ್ಲಿ 101 ಕೆ.ಜಿ ತೂಕದ ಭಾರವನ್ನು ತಲೆ ಮೇಲೆ ಹೊತ್ತು 575 ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆದಿರುವುದು ಹನುಮಂತ-ರಾಮರ ಭಕ್ತರ ಮೆಚ್ಚುಗೆಗೆ ಪಾತ್ರವಾಗಿದೆ. ರಾಯಪ್ಪ ದಪೇದಾರ್ ಅವರ ಸಾಹಸಕ್ಕೆ ದೇವಾಲಯದ ಭಕ್ತರು, ದೇವಾಲಯದ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅನೇಕರು ಅಚ್ಚರಿಗೊಂಡಿದ್ದಾರೆ.

ಹಿಂದೂ ಧರ್ಮದಲ್ಲಿ ಶ್ರೀರಾಮನವಮಿ ಎಂದರೆ ವಿಶೇಷವಾದ ಹಬ್ಬದ ಸಂಭ್ರಮ. ಚೈತ್ರ ಮಾಸದ ಒಂಭತ್ತನೇ ದಿನ, ಅಂದರೆ ಯುಗಾದಿ ಹಬ್ಬದ ಬಳಿಕ ಆರಂಭವಾದ ಹೊಸ ವರ್ಷದ ಮೊದಲ ತಿಂಗಳಿನಲ್ಲಿ ಬರುವ ಹಬ್ಬ. ಮಹಾವಿಷ್ಣುವಿನ ಏಳನೇಯ ಅವತಾರವಾದ ಶ್ರೀರಾಮನು ಅಯ್ಯೋಧ್ಯಯಲ್ಲಿ ಜನಿಸಿದ ದಿನವನ್ನು ಶ್ರೀರಾಮನವಮಿ ಎಂದು ಆಚರಿಸಲಾಗುತ್ತದೆ. ಈ ಬಾರಿ ರಾಮನವಮಿಯನ್ನು ಮಾರ್ಚ್ 30 ಗುರುವಾರದಂದು ಆಚರಿಸಲಾಗುತ್ತದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications