ಮದುವೆ ಆಮಂತ್ರಣದಲ್ಲಿ ಮೋದಿ ಪರ ಪ್ರಚಾರ ಮಾಡಿದ ಕೊಪ್ಪಳದ ಯುವಕ
ಕೊಪ್ಪಳ, ಮಾರ್ಚ್ 05: ಇತ್ತೀಚಿನ ದಿನಗಳಲ್ಲಿ ಪ್ರಧಾನಿ ಮೋದಿ ಅವರ ಅಭಿಮಾನಿಗಳು ಮೋದಿ ಅವರ ಫೋಟೋ ಹಾಕಿ 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ಮತ ನೀಡುವಂತೆ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸುವುದು ಹೆಚ್ಚಾಗಿ ಕಂಡುಬರುತ್ತಿದೆ.
ಅಂತೆಯೇ ಇಂತಹುದೇ ಒಂದು ಪ್ರಸಂಗ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.ಯುವಕನೊಬ್ಬ ತನ್ನ ಮದುವೆ ಆಮಂತ್ರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಪ್ರಚಾರ ನಡೆಸಿದ್ದಾನೆ. 2019 ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅವರಿಗೆ ಮತ ನೀಡಿದರೆ ಅದೇ ನನ್ನ ಮದುವೆಗೆ ನಿಜವಾದ ಉಡುಗೊರೆ ನೀಡಿದಂತೆ ಎನ್ನುವ ಸಂದೇಶ ಸಾರಿದ್ದಾನೆ. ಈ ಮೂಲಕ ಚುನಾವಣಾ ಪ್ರಚಾರ ಲಗ್ನ ಪತ್ರಿಕೆಗೂ ಲಗ್ಗೆ ಇಟ್ಟಂತಾಗಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ರ್ಯಾವಣಿಕಿ ಗ್ರಾಮದ ಯುವಕ ಅಮರೇಶ ಪ್ರಧಾನಿ ಮೋದಿಯ ಅಪ್ಪಟ ಅಭಿಮಾನಿ. ಹೀಗಾಗಿ ತನ್ನ ವಿವಾಹ ಆಮಂತ್ರಣದಲ್ಲಿ ಮೋದಿ ಭಾವಚಿತ್ರ ಮುದ್ರಿಸಿದ್ದಾನೆ. ಈ ಮೂಲಕ ಮೋದಿಯನ್ನು ಮತ್ತೊಮ್ಮೆ ಬೆಂಬಲಿಸಬೇಕು ಎನ್ನುವ ಸಂದೇಶ ಸಾರಿದ್ದಾನೆ.

ಮೇ.7 ರಂದು ಯಲಬುರ್ಗಾ ತಾಲೂಕಿನ ಮಾರನಾಳ ಗ್ರಾಮದ ಯವತಿ ಅನ್ನಪೂರ್ಣಳ ಜೊತೆ ಅಮರೇಶನ ವಿವಾಹ ನಿಶ್ಚಯವಾಗಿದೆ. ಅಮರೇಶನಿಗೆ ಮತ್ತೊಮ್ಮೆ ಮೋದಿ ದೇಶದ ಪ್ರಧಾನಿಯಾಗಬೇಕೆನ್ನು ಆಸೆ. ಹೀಗಾಗಿ ಹೆಣ್ಣಿನ ಮನೆ ಕಡೆಯವರಿಗೂ ಒಪ್ಪಿಸಿ ತನ್ನ ಮದುವೆಯ ನೆಪದಲ್ಲಿ ಮೋದಿ ಪರ ಪ್ರಚಾರಕ್ಕೆ ಮುಂದಾಗಿದ್ದಾನೆ.ಈತನ ಲಗ್ನ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿ ಎನ್ನುವ ಟ್ಯಾಗ್ ಲೈನ್ ಜನರನ್ನು ಆಕರ್ಷಿಸುವಂತಿದೆ.
ಮೋದಿ ಆಡಳಿತ ಹಾಗೂ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಮೋದಿ ನಡೆ ಅಮರೇಶನಿಗೆ ಮೋದಿ ಬಗೆಗೆ ಇನ್ನಷ್ಟು ಅಭಿಮಾನ ಹೆಚ್ಚಲು ಕಾರಣವಾಗಿದೆಯಂತೆ.ಹೆಚ್ಚು ಕಡಿಮೆ 2 ಸಾವಿರಕ್ಕೂ ಅಧಿಕ ಲಗ್ನ ಪತ್ರಿಕೆಗಳನ್ನು ಅಮರೇಶ ಮುದ್ರಣ ಮಾಡಿಸಿದ್ದಾನೆ.

ಸಂಬಂಧಿಕರಿಗೆ, ಹಿತೈಷಿಗಳಿಗೆ, ಸ್ನೇಹಿತರಿಗೆ ಲಗ್ನ ಪತ್ರಿಕೆ ಕೊಡುವ ಜೊತೆಗೆ ಮೋದಿಗೆ ಮತ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾನೆ. ಒಟ್ಟಿನಲ್ಲಿ ಅಮರೇಶನ ಈ ಕಾರ್ಯ ಸದ್ಯ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಸದ್ದು ಮಾಡುತ್ತಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications