ಮದುವೆ ಆಮಂತ್ರಣದಲ್ಲಿ ಮೋದಿ ಪರ ಪ್ರಚಾರ ಮಾಡಿದ ಕೊಪ್ಪಳದ ಯುವಕ
ಕೊಪ್ಪಳ, ಮಾರ್ಚ್ 05: ಇತ್ತೀಚಿನ ದಿನಗಳಲ್ಲಿ ಪ್ರಧಾನಿ ಮೋದಿ ಅವರ ಅಭಿಮಾನಿಗಳು ಮೋದಿ ಅವರ ಫೋಟೋ ಹಾಕಿ 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ಮತ ನೀಡುವಂತೆ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸುವುದು ಹೆಚ್ಚಾಗಿ ಕಂಡುಬರುತ್ತಿದೆ.
ಅಂತೆಯೇ ಇಂತಹುದೇ ಒಂದು ಪ್ರಸಂಗ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.ಯುವಕನೊಬ್ಬ ತನ್ನ ಮದುವೆ ಆಮಂತ್ರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಪ್ರಚಾರ ನಡೆಸಿದ್ದಾನೆ. 2019 ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅವರಿಗೆ ಮತ ನೀಡಿದರೆ ಅದೇ ನನ್ನ ಮದುವೆಗೆ ನಿಜವಾದ ಉಡುಗೊರೆ ನೀಡಿದಂತೆ ಎನ್ನುವ ಸಂದೇಶ ಸಾರಿದ್ದಾನೆ. ಈ ಮೂಲಕ ಚುನಾವಣಾ ಪ್ರಚಾರ ಲಗ್ನ ಪತ್ರಿಕೆಗೂ ಲಗ್ಗೆ ಇಟ್ಟಂತಾಗಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ರ್ಯಾವಣಿಕಿ ಗ್ರಾಮದ ಯುವಕ ಅಮರೇಶ ಪ್ರಧಾನಿ ಮೋದಿಯ ಅಪ್ಪಟ ಅಭಿಮಾನಿ. ಹೀಗಾಗಿ ತನ್ನ ವಿವಾಹ ಆಮಂತ್ರಣದಲ್ಲಿ ಮೋದಿ ಭಾವಚಿತ್ರ ಮುದ್ರಿಸಿದ್ದಾನೆ. ಈ ಮೂಲಕ ಮೋದಿಯನ್ನು ಮತ್ತೊಮ್ಮೆ ಬೆಂಬಲಿಸಬೇಕು ಎನ್ನುವ ಸಂದೇಶ ಸಾರಿದ್ದಾನೆ.

ಮೇ.7 ರಂದು ಯಲಬುರ್ಗಾ ತಾಲೂಕಿನ ಮಾರನಾಳ ಗ್ರಾಮದ ಯವತಿ ಅನ್ನಪೂರ್ಣಳ ಜೊತೆ ಅಮರೇಶನ ವಿವಾಹ ನಿಶ್ಚಯವಾಗಿದೆ. ಅಮರೇಶನಿಗೆ ಮತ್ತೊಮ್ಮೆ ಮೋದಿ ದೇಶದ ಪ್ರಧಾನಿಯಾಗಬೇಕೆನ್ನು ಆಸೆ. ಹೀಗಾಗಿ ಹೆಣ್ಣಿನ ಮನೆ ಕಡೆಯವರಿಗೂ ಒಪ್ಪಿಸಿ ತನ್ನ ಮದುವೆಯ ನೆಪದಲ್ಲಿ ಮೋದಿ ಪರ ಪ್ರಚಾರಕ್ಕೆ ಮುಂದಾಗಿದ್ದಾನೆ.ಈತನ ಲಗ್ನ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿ ಎನ್ನುವ ಟ್ಯಾಗ್ ಲೈನ್ ಜನರನ್ನು ಆಕರ್ಷಿಸುವಂತಿದೆ.
ಮೋದಿ ಆಡಳಿತ ಹಾಗೂ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಮೋದಿ ನಡೆ ಅಮರೇಶನಿಗೆ ಮೋದಿ ಬಗೆಗೆ ಇನ್ನಷ್ಟು ಅಭಿಮಾನ ಹೆಚ್ಚಲು ಕಾರಣವಾಗಿದೆಯಂತೆ.ಹೆಚ್ಚು ಕಡಿಮೆ 2 ಸಾವಿರಕ್ಕೂ ಅಧಿಕ ಲಗ್ನ ಪತ್ರಿಕೆಗಳನ್ನು ಅಮರೇಶ ಮುದ್ರಣ ಮಾಡಿಸಿದ್ದಾನೆ.

ಸಂಬಂಧಿಕರಿಗೆ, ಹಿತೈಷಿಗಳಿಗೆ, ಸ್ನೇಹಿತರಿಗೆ ಲಗ್ನ ಪತ್ರಿಕೆ ಕೊಡುವ ಜೊತೆಗೆ ಮೋದಿಗೆ ಮತ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾನೆ. ಒಟ್ಟಿನಲ್ಲಿ ಅಮರೇಶನ ಈ ಕಾರ್ಯ ಸದ್ಯ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಸದ್ದು ಮಾಡುತ್ತಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications