ಜೈಶ್ರೀರಾಮ್ ಹೇಳುವಂತೆ ಅಂಧ ಮುಸ್ಲಿಂ ವೃದ್ಧನಿಗೆ ಹಲ್ಲೆ, ಗಡ್ಡಕ್ಕೆ ಬೆಂಕಿ
ಕೊಪ್ಪಳ, ಡಿಸೆಂಬರ್ 1: ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಇತ್ತೀಚೆಗೆ 62 ವರ್ಷದ ದೃಷ್ಟಿದೋಷವುಳ್ಳ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಾರೆ ಎಂದು ಡಿಎಚ್ ವರದಿ ಮಾಡಿದೆ.
ಗಂಗಾವತಿ ಪಟ್ಟಣ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ದೂರುದಾರ ಹುಸೇನ್ ಸಾಬ್ ಅವರು, ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ನನ್ನನ್ನು ಬಲವಂತವಾಗಿ ಬೈಕ್ಗೆ ಹತ್ತಿಸಿಕೊಂಡು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ನವೆಂಬರ್ 25 ರ ಮಧ್ಯರಾತ್ರಿ ತನ್ನ ಮೇಲೆ ಹಲ್ಲೆ ನಡೆಸಿದ ನಂತರ ದುಷ್ಕರ್ಮಿಗಳು ತಮ್ಮ ಹಣವನ್ನು ಕಿತ್ತುಕೊಂಡು ಗಡ್ಡಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಮುಸ್ಲಿಂ ಸಮುದಾಯದ ಜನರು ತಿಳಿದ ನಂತರ ನವೆಂಬರ್ 30 ರಂದು ಎಫ್ಐಆರ್ ದಾಖಲಿಸಲಾಗಿದೆ. ಯುವಕರು ತನ್ನನ್ನು ನಿಂದಿಸಿದ್ದು ಮಾತ್ರವಲ್ಲದೆ ತಮ್ಮ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರು. ಅವರು ನನ್ನನ್ನು ಕೊಲ್ಲುವ ಉದ್ದೇಶ ಹೊಂದಿದ್ದರು. ಬಿಯರ್ ಬಾಟಲಿಯಿಂದ ನನ್ನ ಮೇಲೆ ಹಲ್ಲೆ ನಡೆಸಿ ನನ್ನ ತಲೆಯನ್ನು ಕಲ್ಲಿನಿಂದ ಒಡೆದು ಹಾಕಲು ಯತ್ನಿಸಿದರು. ನೆರೆಹೊರೆಯಲ್ಲಿದ್ದ ಜನರು ನನ್ನ ರಕ್ಷಣೆಗೆ ಬಂದರು ಎಂದು ಹುಸೇನ್ ಸಾಬ್ ದೂರಿನಲ್ಲಿ ತಿಳಿಸಿದ್ದಾರೆ.
ಆದರೆ, ಪೊಲೀಸ್ ಅಧಿಕಾರಿಗಳು, ಹಣವನ್ನು ಕಳ್ಳತನ ಮಾಡುವುದಕ್ಕಾಗಿ ಈ ಕೃತ್ಯ ನಡೆದಿದೆ ಎಂದು ಹೇಳಿದ್ದಾರೆ. "ವೃದ್ಧನ ಬೆನ್ನಿನ ಮೇಲೆ ಗೀರುಗಳು ಮತ್ತು ಮುಖದ ಮೇಲೆ ಇತರ ಗಾಯದ ಗುರುತುಗಳಿದ್ದರೂ ಬಾಟಲಿಯಿಂದ ಅವನ ಮೇಲೆ ಹಲ್ಲೆ ಮಾಡಿದ ಯಾವುದೇ ಲಕ್ಷಣಗಳಿಲ್ಲ. ಇದು ಕೋಮು ಕಾರಣಗಳಿಗಿಂತ ಹಣದ ಮೇಲಿನ ಹಲ್ಲೆಯಂತೆ ಕಾಣುತ್ತದೆ. ನಾವು ಏನನ್ನೂ ತಳ್ಳಿಹಾಕಿಲ್ಲ, ತನಿಖೆ ನಡೆಯುತ್ತಿದೆ ಎಂದು ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications