ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಂದಕರಿರಬೇಕು ಹಂದಿಯಂತೆ ಎಂದಿದ್ಯಾಕೆ ಕೃಷಿ ಸಚಿವ ಬಿ.ಸಿ. ಪಾಟೀಲ್?

|
Google Oneindia Kannada News

ಬೆಂಗಳೂರು, ಅ. 21: ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಇನ್ನೂ ಮೂರು ವರ್ಷ ಇರಲಿದ್ದು, ಮೂರುವರ್ಷ ನಂತರ ಚುನಾವಣೆ ನಡೆದಾಗ ಶಾಸಕಾಂಗ ಸಭೆ ಬಳಿಕ ಯಾರು ಮತ್ತೆ ಮುಖ್ಯಮಂತ್ರಿಗಳಾಗುತ್ತಾರೆ ಎನ್ನುವುದು ತೀರ್ಮಾನವಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳದ ಕೋಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಪಾಟೀಲ್ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಯತ್ನಾಳ್ ಪಕ್ಷದ ಶಾಸಕರಾಗಿ ಈ ರೀತಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುವುದು ಸರಿಯಲ್ಲ. ಇದು ಅಶಿಸ್ತು. ಮುಂದೆ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕದವರು ಆಗುತ್ತಾರೆಯೋ ದಕ್ಷಿಣ ಕರ್ನಾಟಕದವರು ಆಗುತ್ತಾರೆಯೋ ಎಂಬುದು ಮುಂದಿನ ಮೂರು ವರ್ಷಗಳ ಚುನಾವಣೆ ಬಳಿಕ ತೀರ್ಮಾನವಾಗಲಿದೆ. ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯೂ ಇಲ್ಲ, ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ಕೃಷಿ ಇಲಾಖೆಗೆ ತುಕ್ಕು ಹಿಡಿದಿತ್ತು!

ಕೃಷಿ ಇಲಾಖೆಗೆ ತುಕ್ಕು ಹಿಡಿದಿತ್ತು!

ಈ ಹಿಂದೆ ತುಕ್ಕು ಹಿಡಿದಿದ್ದ ಕೃಷಿ ಇಲಾಖೆಯನ್ನು ನಾನು ಬಂದ ಮೇಲೆ ಸರಿ ಮಾಡುವ ಕೆಲಸ ಮಾಡುತ್ತಿದ್ದೇನೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಇದನ್ನು ಸಹಿಸದೇ ಅನಾಮಧೇಯ ಪತ್ರ ಬರೆದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಎಚ್ಚರಿಸಿದರು.

ಕಾಲು ಹಿಡಿದು, ತಲೆಹಿಡಿಯುವ ಕೆಲಸ ಮಾಡಿಲ್ಲ: ಯತ್ನಾಳ್ಕಾಲು ಹಿಡಿದು, ತಲೆಹಿಡಿಯುವ ಕೆಲಸ ಮಾಡಿಲ್ಲ: ಯತ್ನಾಳ್

ನಿಂದಕರಿರಬೇಕು ಹಂದಿಯಂತೆ

ನಿಂದಕರಿರಬೇಕು ಹಂದಿಯಂತೆ

ನಿಂದಕರಿರಬೇಕು ಹಂದಿಯಂತೆ ಎಂಬ ಮಾತಿನಂತೆ ನಮ್ಮನ್ನು ನಿಂದಿಸುವವರು ಇದ್ದಾಗಲೇ ಅದನ್ನು ಸವಾಲಾಗಿ ಸ್ವೀಕರಿಸಿ ಸರಿಯಾಗಿ ಕೆಲಸ ಮಾಡಲು ಸಾಧ್ಯ. ತಾವು ಕೃಷಿ ಸಚಿವರಾಗಿ ಬಂದ ಮೇಲೆ ಇಲಾಖೆಗೆ ಚುರುಕು ಮುಟ್ಟಿದೆ. ಇದು ಕೆಲವರಿಗೆ ನೋವಾಗಿರಬಹುದು. ಆದರೆ ಇಂತಹ ಅನಾಮಧೇಯ ಪತ್ರಕ್ಕೆಲ್ಲ ಹೆದರುವುದಿಲ್ಲ ಎಂದರು.

ನಿಯಮಾನುಸಾರ ನೆರೆ ಪರಿಹಾರ

ನಿಯಮಾನುಸಾರ ನೆರೆ ಪರಿಹಾರ

ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ನಿಯಮಾನುಸಾರ ನೆರೆ ಪರಿಹಾರ ಸಿಗಲಿದೆ. ಬೆಳೆ ನಷ್ಟ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು, ಪರಿಶೀಲಿಸಿ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದೆ. ಹುಟ್ಟು ಸಾವು ಸಹಜವಾದರೂ ಮನುಷ್ಯ ಬದುಕಿನ ಬಗ್ಗೆ ಆಶಾದಾಯವಾಗಿರಬೇಕು. ಚೆನ್ನಾಗಿ ಇರುತ್ತೇವೆ ಎಂಬ ಆಶಾಭಾವನೆಯೊಂದಿಗೆ ಬದುಕಬೇಕು ಎಂದು ಸಚಿವರು ಸ್ಫೂರ್ತಿಯ ಮಾತುಗಳನ್ನಾಡಿದರು.

ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ಸಿಎಂ ಯಡಿಯೂರಪ್ಪ ಏನಂದ್ರು ಗೊತ್ತಾ?ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ಸಿಎಂ ಯಡಿಯೂರಪ್ಪ ಏನಂದ್ರು ಗೊತ್ತಾ?

ಕಿಡಿ ಹೊತ್ತಿಸಿದ ಶಾಸಕ ಯತ್ನಾಳ್ ಮಾತು

ಕಿಡಿ ಹೊತ್ತಿಸಿದ ಶಾಸಕ ಯತ್ನಾಳ್ ಮಾತು

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತು ಬಿಜೆಪಿಯಲ್ಲಿ ಕಿಡಿ ಹೊತ್ತಿಸಿದೆ. ತಮ್ಮ ಮಾತಿಗೆ ಬದ್ಧವಿರುವುದಾಗಿ ಅವರು ಇವತ್ತೂ ಹೇಳಿದ್ದಾರೆ. ಶಾಸಕ ಯತ್ನಾಳ್ ಅವರ ಮಾತನ್ನು ಇತರ ಬಿಜೆಪಿ ಸಚಿವರು ಖಂಡಿಸಿದ್ದಾರೆ.

Recommended Video

ಮೋದಿ ಕೊಟ್ರು ವಿಶೇಷ ಸಲಹೆ | Oneindia Kannada

English summary
Agriculture Minister B.C. Patil's reaction to the BJP Senior MLA Basanagouda Patil Yatnal's public statement on Chief Minister's change in Karnataka. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X