ಬೆಲೆ ಏರಿಕೆ; ಕಾಂಗ್ರೆಸ್ ಕಡೆ ಕೈ ತೋರಿಸಿದ ಸಂಗಣ್ಣ ಕರಡಿ!
ಕೊಪ್ಪಳ, ಸೆಪ್ಟೆಂಬರ್ 01; ತೈಲ ಉತ್ಪನ್ನಗಳ ಬೆಲೆ ಏರಿಕೆ, ಸಿಲಿಂಡರ್ಗಳ ಬೆಲೆ ಏರಿಕೆಯಾಗಲು ಕಾಂಗ್ರೆಸ್ ಕಾರಣ ಎಂದು ಬಿಜೆಪಿ ಸಂಸದರೊಬ್ಬರು ಉಡಾಫೆ ಉತ್ತರ ನೀಡಿದ್ದಾರೆ. ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ಎಲ್ಪಿಜಿ ಸಿಲಿಂಡರ್ ಬೆಲೆ 25 ರೂ. ಏರಿಕೆಯಾಗಿದೆ.
ಕೊಪ್ಪಳದಲ್ಲಿ ಬುಧವಾರ ಮಾತನಾಡಿದ ಸಂಸದ ಸಂಗಣ್ಣ ಕರಡಿ, "ನಿಮ್ಮಪ್ಪ ಸಾಲ ಮಾಡಿದರೆ ಮಗನಾಗಿ ನೀನು ಸಾಲ ತೀರಿಸ್ತಿಯಾ, ಇಲ್ಲವಾ?. ನಾವು ಕೂಡಾ ಹಂಗೆ ಸಾಲ ತೀರಿಸುತ್ತಿದ್ದೇವೆ" ಎಂದು ಹೇಳಿದರು.
ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ ಸಂಸದರು ಉಡಾಫೆಯಾಗಿ ಉತ್ತರ ಕೊಟ್ಟರು. "ಸಾಲ ಮಾಡಿಯಾಗಿದೆ, ಈಗ ಸಾಲ ಹರಿಬೇಕಲ್ಲ" ಎಂದರು.

"ಯುಪಿಎ ಸರ್ಕಾರ ಇದ್ದಾಗ ತೈಲ ಕಂಪನಿಗಳಿಗೆ ಬಾಂಡ್ ಕೊಟ್ಟಿದ್ದರು. ನಮ್ಮ ಸರ್ಕಾರ 59 ಸಾವಿರ ಕೋಟಿ ರೂಪಾಯಿ ಹಾಗೂ 35 ಸಾವಿರ ಕೋಟಿ ರೂಪಾಯಿ ಸಾಲ ತುಂಬಿದೆ. ಇನ್ನೂ ಒಂದು ಲಕ್ಷ ಕೋಟಿ ಬಾಕಿ ಇದೆ" ಎಂದು ಸಂಸದರು ವಿವರಿಸಿದರು.
"ಬಡವರಿಗೆ ಏನು ಸಹಾಯ ಮಾಡಬೇಕೋ ಮಾಡಿದ್ದೇವೆ. ಜನರು ಸಾಲ ಮಾಡಬೇಕಾ ಕೇಳಿದರೆ ಏನು ಹೇಳೋದು. ನಾವು ದೇಶ ಒತ್ತೆ ಇಡಬೇಕಾ?, ಬಡವರ ಬಗ್ಗೆ ಮಾಧ್ಯಮದವರು ಕೇಳುವುದನ್ನು ಒಪ್ಪುತ್ತೇವೆ. ಆದರೆ ಸರ್ಕಾರ ನಡೆಸಬೇಕಲ್ಲ. ಕೋವಿಡ್ನಿಂದ ಸರ್ಕಾರಕ್ಕೆ ಏನೂ ಆದಾಯವಿಲ್ಲವಾಗಿದೆ" ಎಂದು ಸಂಸದರು ಹೇಳಿದರು.
ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗಿವೆ. ಈಗ ಎಲ್ಪಿಜಿ ಸಿಲಿಂಡರ್ಗಳ ಬೆಲೆಗಳು ಸಹ ಹೆಚ್ಚಾಗಿದ್ದು, ಸಾಮಾನ್ಯ ಜನರ ಬದುಕು ದುಸ್ಥರವಾಗಿದೆ. ಜನರು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಿಲಿಂಡರ್ ಬೆಲೆ ಏರಿಕೆ; ಸಬ್ಸಿಡಿ ರಹಿತ ಸಿಲಿಂಡರ್ಗಳ ಬೆಲೆ ಸೆಪ್ಟೆಂಬರ್ 1ರಿಂದಲೇ ಜಾರಿಗೆ ಬರುವಂತೆ 25 ರೂ. ಜಾಸ್ತಿಯಾಗಿದೆ. 15 ದಿನಗಳ ಹಿಂದೆ 25 ರೂ. ಏರಿಕೆಯಾಗಿತ್ತು. ಇದರಿಂದಾಗಿ ಜನರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಲ್ಪಿಜಿ ಸಿಲಿಂಡರ್ಗಳ ಬೆಲೆ ಜನವರಿ 1ರಿಂದ ಸೆಪ್ಟೆಂಬರ್ 1ರ ತನಕ 190 ರೂ. ಹೆಚ್ಚಳವಾಗಿದೆ. ಬೆಂಗಳೂರು ನಗರದಲ್ಲಿ ಸಿಲಿಂಡರ್ ಬೆಲೆ 887ಕ್ಕೆ ಏರಿಕೆಯಾಗಿದೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications