ಕೊನೆ ಆಸೆಯಂತೆ ಸ್ನೇಹಿತರನ್ನು ಭೇಟಿಯಾಗಿ ಮಾರನೇ ದಿನ ಕೊನೆಯುಸಿರೆಳೆದ ಬಾಲಕ
ಕೊಪ್ಪಳ, ಜುಲೈ 31: ಶನಿವಾರ ವಿಶ್ವದಾದ್ಯಂತ ಸ್ನೇಹಿತರ ದಿನವನ್ನಾಚರಿಸಲಾಗಿದೆ. ತಮ್ಮ ಕಷ್ಟ ಸುಖಗಳಲ್ಲಿ, ನೋವು -ನಲಿವುಗಳಲ್ಲಿ ಒಂದಾಗುವ ಸ್ನೇಹಿತರನ್ನು ನೆನೆದು, ಅವರೊಂದಿಗೆ ಸಮಯ ಕಳೆದು ಸಂಭ್ರಮಿಸಲಾಗಿದೆ. ಆದರೆ ಕೊಪ್ಪಳದಲ್ಲಿ ಸ್ನೇಹಿತರ ದಿನಚಾರನಣೆಯನ್ನಾಚರಿಸಿಕೊಂಡ ಬಾಲಕನೊಬ್ಬ ಮಾರನೆಯ ದಿನವೇ ಸಾವನ್ನಪ್ಪಿರುವ ಮನ ಕಲಕುವ ಘಟನೆ ನಡೆದಿದೆ.
ಈ ಮನಕಲಕುವ ಘಟನೆಗೆ ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದ್ದು, 7ನೇ ತರಗತಿ ಓದುತ್ತಿದ್ದ ಸುಹಾಸ್ ಸೌದ್ರಿ ಎಂಬ ಬಾಲಕ ಆನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಸುಹಾಸ್ ಬಾಲ್ಯದಿಂದಲೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ, ಕಳೆದ ಕೆಲವು ದಿನಗಳಿಂದ ಆತನ ಆರೋಗ್ಯ ಸ್ಥಿತಿ ಗಂಭೀರ ಹಂತ ತಲುಪಿತ್ತು. ಆತನ ಕಿಡ್ನಿ ಸಮಸ್ಯೆಗೆ ಪೋಷಕರು ಸಾಕಷ್ಟು ಚಿಕಿತ್ಸೆ ಕೊಡಿಸಿದ್ದರು. ಆದರೂ ಸಹ ಕಾಯಿಲೆ ಮಾತ್ರ ವಾಸಿಯಾಗಿರಲಿಲ್ಲ.
ಕಳೆದ ಒಂದು ತಿಂಗಳಿನಿಂದ ಸುಹಾಸ್ ಕಿಡ್ನಿ ಸಮಸ್ಯೆಯಿಂದ ತೀವ್ರ ಅನಾರೋಗ್ಯಕ್ಕೊಳಗಾಗಿ ಮನೆಯಲ್ಲಿಯಲ್ಲಿಯೇ ಇದ್ದ. ತನ್ನ ಅನಾರೋಗ್ಯದ ನಡುವೆಯೂ ಬಾಲಕ ಸುಹಾಸ್ ತನ್ನ ಸಹಪಾಠಿಗಳನ್ನು, ಶಿಕ್ಷಕರನ್ನು ಹಾಗೂ ಸ್ನೇಹಿತರನ್ನು ನೆನೆಸಿಕೊಳ್ಳುತ್ತಿದ್ದ. ಈ ಹಿನ್ನೆಲೆ ತನ್ನ ಮಗನ ಕೊನೆ ಆಸೆ ಈಡೇರಿಸಲು ಪೋಷಕರು ಶಾಲೆಗೆ ಕರೆದುಕೊಂಡು ಹೋಗಿದ್ದಾರೆ. ಸುಹಾಸ್ ಶಾಲಾ ಆವರಣದಲ್ಲಿ ಕಾರಿನಲ್ಲಿಯೇ ಮಲಗಿದ್ದ. ಆತನನ್ನು ನೋಡಿ ಇಡೀ ಶಾಲೆಯೇ ಕಣ್ಣೀರಿಟ್ಟಿತ್ತು. ಸುಹಾಸ್ ಸ್ನೇಹಿತರು ಆತನ ಪರಿಸ್ಥಿತಿಯನ್ನು ಕಂಡು ಕಣ್ಣೀರು ಹಾಕುತ್ತಲೇ ಫ್ರೆಂಡ್ಶಿಪ್ ಬ್ಯಾಂಡ್ ಕಟ್ಟಿದ್ದರು.

ಓದಿನಲ್ಲಿ ಟಾಪರ್ ಆಗಿದ್ದ ಸುಹಾಸ್ ಒಂದು ತಿಂಗಳ ಬಳಿಕ ಶಾಲೆಗೆ ಬಂದಿದ್ದರಿಂದ ಆತನ ಸ್ನೇಹಿತರು, ಶಿಕ್ಷಕರು, ಸಹಪಾಠಿಗಳು ಅನಾರೋಗ್ಯಕ್ಕೆ ತುತ್ತಾಗಿದ್ದ ಸುಹಾಸ್ನನ್ನು ಮಾತನಾಡಿಸಿದ್ದಾರೆ. ಆದೆ ತೀವ್ರ ಅನಾರೋಗ್ಯಕ್ಕೊಳಗಾಗಿದ್ದರಿಂದ ಬಾಲಕ ಸುಹಾಸ್ ಕಾರಿನಲ್ಲಿಯೇ ಮಲಗಿಕೊಂಡಿದ್ದ. ವಿದ್ಯಾರ್ಥಿಗಳು ಅಲ್ಲಿಗೆ ಬಂದು ಸುಹಾಸ್ನನ್ನು ಮಾತನಾಡಿಸಿ, ಆತನ ಸ್ಥಿತಿ ನೋಡಿ ಕಣ್ಣೀರಿಟಿದ್ದರು.

ಇನ್ನು ಸ್ನೇಹಿತರ ದಿನವಾಗಿದ್ದರಿಂದ ಕೆಲವು ಹುಡುಗರು ಸುಹಾಸ್ಗೆ ಫ್ರೆಂಡ್ಶಿಪ್ ಬ್ಯಾಂಡ್ ಕಟ್ಟಿ, ಸುಹಾಸ್ ಬೇಗನೇ ಗುಣಮುಖವಾಗಲಿ ಎಂದು ಹಾರೈಸಿದ್ದರು. ಆದರೆ,ವಿದಿಯಾಟ ಭಾನುವಾರ ಸುಹಾಸ್ ತನ್ನ ಕೊನೆಯುಸಿರೆಳೆದಿದ್ದಾನೆ. ಈ ಮೂಲಕ ಕುಟುಂಬದವರನ್ನು ದುಃಖಕ್ಕೆ ಮುಳುಗಿಸಿದ್ದಾನೆ. ನಿನ್ನೆಯಷ್ಟೆ ಗೆಳೆಯರ ದಿನವನ್ನಾಚರಿಸಿಕೊಂಡಿದ್ದ ಆತನ ಗೆಳೆಯರು ಕೂಡ ಸುಹಾಸ್ನನ್ನು ಕಳೆದುಕೊಂಡಿದ್ದಕ್ಕೆ ಕಣ್ಣೀರಿಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications