ಬಜೆಟ್; ಆಟಿಕೆ ಉದ್ಯಮಕ್ಕೆ ವಿಶೇಷ ನೀತಿ, ಕೊಪ್ಪಳಕ್ಕೆ ಕೊಡುಗೆ?
ಕೊಪ್ಪಳ, ಜನವರಿ 25 : ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ತಿಂಗಳ ರೇಡಿಯೋ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದಂತೆ ದೇಶದಲ್ಲಿಯೇ ಆಟಿಕೆಗಳ ತಯಾರಿಕೆಗೆ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ. 2021ರ ಬಜೆಟ್ನಲ್ಲಿ ಈ ಕುರಿತ ನೀತಿ ಘೋಷಣೆಯಾಗುವ ನಿರೀಕ್ಷೆ ಇದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಆಟಿಕೆ ಉದ್ಯಮಕ್ಕೆ ಪೂರಕವಾಗುವ ವಾತಾವರಣನ್ನು ಸೃಷ್ಟಿಸಲು, ಆಟಿಕೆ ತಯಾರಿಕೆ ವಲಯಕ್ಕೆ ಹೊಸ ಉದ್ಯಮಗಳನ್ನು ಆಕರ್ಷಿಸಲು ಹಲವು ಘೋಷಣೆ ಮಾಡಲು ಸಾಧ್ಯತೆ ಇದೆ.
ಆಟಿಕೆಗಳ ತಯಾರಿಕೆಗೆ ಉತ್ತೇಜನ ನೀಡಿದರೆ ಭಾರತದಿಂದ ಆಟಿಕೆಗಳನ್ನು ರಫ್ತು ಮಾಡಲು ಪ್ರೋತ್ಸಾಹ ನೀಡಿದಂತೆ ಆಗುತ್ತದೆ. ಆಟಿಕೆಗಳ ರಫ್ತಿನಲ್ಲಿ ಭಾರತದ ಪಾಲು ಪ್ರಸ್ತುತ ಶೇ 5ರಷ್ಟು ಮಾತ್ರವಿದೆ. ಆಟಿಕೆ ರಫ್ತಿನ ವಲಯದಲ್ಲಿ ದೊಡ್ಡ ಅವಕಾಶವಿದೆ ಎಂಬುದನ್ನು ಸರ್ಕಾರ ತಿಳಿದಿದೆ.

ಶ್ರೀಲಂಕಾ, ಮಲೇಷ್ಯಾ, ಜರ್ಮನಿ, ಅಮೆರಿಕದಿಂದಲೂ ಭಾರತಕ್ಕೆ ಆಟಿಕೆಗಳು ಆಮದಾಗುತ್ತವೆ. ಭಾರತದ ಆಟಿಕೆ ಉದ್ಯಮ ಅಸಂಘಟಿತ ವಲಯದಲ್ಲಿಯೇ ಇದ್ದು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಸುಮಾರು 4 ಸಾವಿರ ಉದ್ಯಮಗಳು ಆಟಿಕೆ ತಯಾರಿಕೆಯಲ್ಲಿ ತೊಡಗಿವೆ.
ಕೊಪ್ಪಳದಲ್ಲಿ ಕ್ಲಸ್ಟರ್; ದೇಶದಲ್ಲೇ ಮೊದಲ ಬಾರಿಗೆ ಆಟಿಕೆಗಳ ಕ್ಲಸ್ಟರ್ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳದಲ್ಲಿ 'ಕೊಪ್ಪಳ ಟಾಯ್ ಕ್ಲಸ್ಟರ್' ನಿರ್ಮಾಣವಾಗಲಿದೆ. ಇದಕ್ಕಾಗಿ ಕರ್ನಾಟಕ ಸರ್ಕಾರ ಈಗಾಗಲೇ ಶಂಕು ಸ್ಥಾಪನೆ ಮಾಡಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಗ್ರಾಮದಲ್ಲಿ ಜನವರಿ 9ರಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 'ಕೊಪ್ಪಳದ ಆಟಿಕೆಗಳ ಕ್ಲಸ್ಟರ್' ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಿದ್ದಾರೆ. ಬಜೆಟ್ನಲ್ಲಿಯೂ ಆಟಿಕೆ ಉತ್ಪಾದನೆ ನೀತಿ ಘೋಷಣೆಯಾದರೆ ಕೊಪ್ಪಳಕ್ಕೂ ಬಜೆಟ್ನಲ್ಲಿ ಕೊಡುಗೆ ಸಿಗುವ ನಿರೀಕ್ಷೆ ಇದೆ.
ಭಾರತದ ಮಟ್ಟಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದಲ್ಲಿ ನಿರ್ಮಾಣವಾಗುತ್ತಿದೆ. ಪಾರಂಪರಿಕ ಕಿನ್ನಾಳ ಆಟಿಕೆಗೆ ಹೆಸರಾದ ಕೊಪ್ಪಳ ಜಿಲ್ಲೆ ಇದೀಗ ಆಟಿಕೆ ಉತ್ಪಾದನೆ ಕೇಂದ್ರವಾಗಿ ರೂಪುಗೊಳ್ಳುತ್ತಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.
ಕೊಪ್ಪಳದ ಟಾಯ್ ಕ್ಲಸ್ಟರ್ ಅನ್ನು ಎಕಸ್ ಸಂಸ್ಥೆಯವರು ಅಭಿವೃದ್ಧಿ ಪಡೆಸುತ್ತಿದ್ದಾರೆ. ಈ ಸಂಸ್ಥೆಯ ಅಧ್ಯಕ್ಷ ಅರವಿಂದ ಮೆಳ್ಳಗೇರಿ ಅವರು ನಮ್ಮ ಕರ್ನಾಟಕದವರೇ.
ಈ ಆಟಿಕೆ ಕ್ಲಸ್ಟರ್ 2021ರ ಡಿಸೆಂಬರ್ ವೊಳಗೆ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಮುಂದಿನ 5 ವರ್ಷಗಳಲ್ಲಿ ಸುಮಾರು ಐದು ಸಾವಿರ ಕೋಟಿ ರೂಪಾಯಿ ಬಂಡವಾಳ ಆಕರ್ಷಿಸುವ ಸಾಧ್ಯತೆ ಇದ್ದು, 25 ಸಾವಿರ ನೇರ ಹಾಗೂ 1 ಲಕ್ಷ ಪರೋಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications