ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪಳ: ಕಾಪಿ ಮಾಡಲು ಬಿಡಲಿಲ್ಲವೆಂದು ಸುತ್ತಿಗೆಯಿಂದ ಹಲ್ಲೆ

By ಕೊಪ್ಪಳ ಪ್ರತಿನಿಧಿ
|
Google Oneindia Kannada News

ಕೊಪ್ಪಳ, ಮಾರ್ಚ್‌ 02: ತಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ನಕಲು ಮಾಡಲು ಅವಾಕಶ ಮಾಡಿಕೊಡಲಿಲ್ಲ ಎಂದು ಕಾಲೇಜು ಪ್ರಾಂಶುಪಾಲ ಮತ್ತು ಸಿಬ್ಬಂದಿಗಳು ಗಂಗಾವತಿಯ ವೈಜೆಆರ್‌ಪಿಯು ಕಾಲೇಜಿನ ನಿರ್ದೇಶಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಕೊಪ್ಪಳ: ಸಿಗ್ನಲ್ ಜಂಪ್ ಮಾಡಿದ್ದಕ್ಕೆ ಮನಸೋಇಚ್ಛೆ ಥಳಿಸಿದ ಪಿಎಸ್‌ಐಕೊಪ್ಪಳ: ಸಿಗ್ನಲ್ ಜಂಪ್ ಮಾಡಿದ್ದಕ್ಕೆ ಮನಸೋಇಚ್ಛೆ ಥಳಿಸಿದ ಪಿಎಸ್‌ಐ

ಗಂಗಾವತಿ ವಿದ್ಯಾನಿಕೇತನ ಕಾಲೇಜಿನ ಪ್ರಾಂಶುಪಾಲ ಶರತ್‌ ಚಂದ್ರ ಹಾಗೂ ಅದೇ ಕಾಲೇಜಿನ ಸಿಬ್ಬಂದಿ ತಮ್ಮ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಅವಕಾಶ ನೀಡಲಿಲ್ಲವೆಂದು ಪರೀಕ್ಷೆ ನಡೆಯುತ್ತಿದ್ದ ವೈಜೆಆರ್ ಪಿಯುಸಿ ಕಾಲೇಜಿನ ನಿರ್ದೇಶಕ ರಾಮಚಂದ್ರ ಮೇಲೆ ಹಲ್ಲೆ ನಡೆಸಿದ್ದಾರೆ.

ನಿನ್ನೆ ಸಂಜೆ ರಾಮಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದು, ಸುತ್ತಿಗೆಯಿಂದ ಅವರ ತಲೆಗೆ ಬಲವಾಗಿ ಹೊಡೆಯಲಾಗಿದೆ, ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ರಾಮಕೃಷ್ಣ ಅವರನ್ನು ಗಂಗಾವತಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Gangavathi YJR pu college director Ramachandra hitted by Vidyanikethan college principle and staff for not allowing Vidyaniketan 2nd PU students to malpractice. case booked in Gangavathi police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X