ಕೊಪ್ಪಳದಲ್ಲಿ ಕೋವಿಡ್ - 19 ಪರೀಕ್ಷೆ ಲ್ಯಾಬ್ ಆರಂಭ
ಕೊಪ್ಪಳ, ಮೇ 26 : ಕೊಪ್ಪಳದಲ್ಲಿ ಕೋವಿಡ್ - 19 ಪರೀಕ್ಷೆಯ ಲ್ಯಾಬ್ ಉದ್ಘಾಟನೆಗೊಂಡಿದೆ. ಇಲ್ಲಿ ಪ್ರತಿದಿನ 40 ರಿಂದ 45 ಮಾದರಿಗಳನ್ನು ಪರೀಕ್ಷೆ ಮಾಡಬಹುದಾಗಿದೆ.
Recommended Video
ಕೊಪ್ಪಳ ಜಿಲ್ಲೆಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜೀವಶಾಸ್ತ್ರ ವಿಭಾಗದಲ್ಲಿ ಕೋವೀಡ್-19 ಪರೀಕ್ಷೆ ಪ್ರಯೋಗಾಲಯ ಸ್ಥಾಪನೆ ಮಾಡಲಾಗಿದೆ. ಮಂಗಳವಾರ ಸಂಸದ ಸಂಗಣ್ಣ ಕರಡಿ ಪ್ರಯೋಗಾಲಯವನ್ನು ಉದ್ಘಾಟನೆ ಮಾಡಿದರು.
ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ಮಂಜುನಾಥ ಪಿ.ಸಾಲ್ಮನಿ ಲ್ಯಾಬ್ ಬಗ್ಗೆ ಮಾಹಿತಿ ನೀಡಿದರು. "ಕೊವೀಡ್-19 ಸ್ಕ್ರೀನಿಂಗ್ (ಟ್ರೋನ್ಯಾಟ್) ಪರೀಕ್ಷೆ ಕೇವಲ ಕೊವೀಡ್ - 19 ನೆಗೆಟಿವ್ ಫಲಿತಾಂಶವನ್ನು ಮಾತ್ರ ದೃಢಿಕರಿಸುತ್ತದೆ. ಪಾಸಿಟಿವ್ ಫಲಿತಾಂಶವನ್ನು ಆರ್. ಟಿ. ಪಿ. ಸಿ. ಆರ್. ಪರೀಕ್ಷೆ ಮೂಲಕ ಪಡೆಯಬೇಕು" ಎಂದರು.

ಜೀವಶಾಸ್ತ್ರ ವಿಭಾಗದಲ್ಲಿ ವೈರಾಣು ಸಂಶೋಧನೆ ಹಾಗೂ ರೋಗ ನಿರ್ಣಯ ಪ್ರಯೋಗಲಯ ಮುಕ್ತಾಯದ ಹಂತದಲ್ಲಿದ್ದು, ಈ ಮಾಸಂತ್ಯಕ್ಕೆ ಕಾರ್ಯಾರಂಭ ಮಾಡಲಿದೆ. ವೈರಾಣು ಸಂಶೋಧನೆ ಹಾಗೂ ರೋಗ ನಿರ್ಣಯ ಪ್ರಾಯೋಗಲಯದಲ್ಲಿ ಆರ್. ಟಿ. ಪಿ. ಸಿ. ಆರ್. ವಿಧಾನ ಮೂಲಕ ಕೊವೀಡ್-19 ಪರೀಕ್ಷೆ ಮಾಡಲಾಗುತ್ತದೆ.
ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಂತೇಶ ಪಾಟೀಲ್ ಮೈನಳ್ಳಿ ಮುಂತಾದವರು ಲ್ಯಾಬ್ ಉದ್ಘಾಟನೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮತ್ತೊಂದು ಪ್ರಕರಣ ದಾಖಲು: ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ರಾಯಚೂರು ಜಿಲ್ಲೆಯ ಮಸ್ಕಿಯ ಕೆನರಾ ಬ್ಯಾಂಕ್ನಲ್ಲಿ ಅಗ್ರಿಕಲ್ಚರ್ ಫಿಲ್ಡ್ ಆಫಿಸರ್ ಆಗಿ ಇವರು ಕಾರ್ಯ ನಿರ್ವಹಿಸುತ್ತಿದ್ದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications