ಕೊಪ್ಪಳ; ನರೇಗಾ ಕೂಲಿಕಾರರಿಗೆ ಸ್ಥಳದಲ್ಲೇ ಕೋವಿಡ್ ಲಸಿಕೆ
ಕೊಪ್ಪಳ, ಜೂನ್ 23; ಕೊಪ್ಪಳದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರಿಗೆ ಸ್ಥಳದಲ್ಲೇ ಕೋವಿಡ್-19 ಲಸಿಕೆಯನ್ನು ನೀಡಲಾಯಿತು. 248 ಜನರು ಸ್ಥಳದಲ್ಲಿಯೇ ಕೋವ್ಯಾಕ್ಸಿನ್ ಲಸಿಕೆಯನ್ನು ಪಡೆದರು.
ಕೊಪ್ಪಳ ತಾಲೂಕು ಪಂಚಾಯತಿ ವತಿಯಿಂದ ಗುಳದಳ್ಳಿ ಗ್ರಾಮ ಪಂಚಾಯತಿಯ ಗಬ್ಬೂರ ಗ್ರಾಮದಲ್ಲಿ ನರೇಗಾ ಕೂಲಿಕಾರರಿಗೆ ಕೋವಿಡ್ ಲಸಿಕೆಯನ್ನು ನೀಡಲಾಯಿತು. ಉದ್ಯೋಗ ಹುಡುಕಿಕೊಂಡು ಗುಳೆ ಹೊಗದೇ ಸ್ಥಳೀಯವಾಗಿ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ಎಂದು ಮನವಿ ಮಾಡಲಾಯಿತು.
ತಾಲೂಕ ಪಂಚಾಯತಿ ಸಹಾಯಕ ನಿರ್ದೇಶಕರಾದ (ಗ್ರಾಮೀಣ ಉದ್ಯೋಗ) ಸೌಮ್ಯ ಕೆ. ಮಾತನಾಡಿ, "ಕೂಲಿ ಕೆಲಸಕ್ಕಿಂತ ದೇಹದ ಆರೋಗ್ಯ ಮುಖ್ಯವಾಗಿದ್ದು, ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆಯಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರು ಪ್ರಮುಖ ಘಟ್ಟದಲ್ಲಿ ಬರುವುದರಿಂದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಲ್ಲಿ ಕೋವಿಡ್ನಿಂದ ಪಾರಾಗಬಹುದು" ಎಂದರು.

ನರೇಗಾ ಯೋಜನೆಯಡಿ ಪ್ರಸ್ತುತ ಪ್ರತಿ ದಿನಕ್ಕೆ ಕೂಲಿ 289 ರೂ. ನಿಗದಿ ಮಾಡಲಾಗಿದೆ ಮತ್ತು ಉಪಕರಣಗಳ ಬಳಕೆಗಾಗಿ (ಗುದ್ದಲಿ, ಸಲಿಕೆ ಹರಿತಕ್ಕಾಗಿ) 10 ರೂ. ಹೆಚ್ಚುವರಿಯಾಗಿ ಪಾವತಿಸಲು ಅವಕಾಶವಿದೆ.
ಉದ್ಯೋಗಕ್ಕಾಗಿ ಜನರು ಸ್ಥಳೀಯ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿದರೆ ಸಾಮುದಾಯಿಕ ಕಾಮಗಾರಿಗಳಾದ ಕೆರೆ ಹೂಳೆತ್ತುವುದು, ಚೆಕ್ ಡ್ಯಾಂ ಹೂಳೆತ್ತುವದು, ಕೃಷಿಹೊಂಡ ನಿರ್ಮಾಣ ಮತ್ತು ಬದು ನಿರ್ಮಾಣ ಮುಂತಾದ ಕಾಮಗಾರಿಗಳಲ್ಲಿ ಪಾಲ್ಗೊಳ್ಳಬಹುದುದ.
ಕೆಲಸ ನಿರ್ವಹಿಸಿದ ಬಳಿಕ ಕೂಲಿಯನ್ನು ನೇರವಾಗಿ ತಮ್ಮ ಬ್ಯಾಂಕ್ ಖಾತೆಗೆ ಪಡೆಯಬಹುದು. ನಗರ ಪ್ರದೇಶಗಳಲ್ಲಿ ಲಾಕ್ಡೌನ್ ಆದ ಕಾರಣ ಬಹಳಷ್ಟು ಕೂಲಿಕಾರರು ಗ್ರಾಮಗಳಿಗೆ ವಾಪಸ್ ಆಗಿದ್ದು, ಗ್ರಾಮ ಪಂಚಾಯತಿಯಿಂದ ಕೂಲಿ ಕೆಲಸ ನೀಡಲಾಗಿದೆ.
ಈ ವರ್ಷದ ಏಪ್ರಿಲ್ನಿಂದ ಜೂನ್ ತನಕ 24595 ಮಾನವ ದಿನಗಳ ಕೆಲಸವನ್ನು ಮಾಡಿಸುವ ಗುರಿ ಇದೆ. ಒಟ್ಟು 32,501 ಮಾನವ ದಿನಗಳನ್ನು ಸೃಜಿಸಲಾಗಿದ್ದು, 2,251 ಕೂಲಿಕಾರರಿಗೆ ಕೂಲಿ ಕೆಲಸ ಒದಗಿಸಲಾಗಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications