ಸೂಲಿಬೆಲೆಗೆ ದೇಶದ್ರೋಹಿ ಎಂದಿಲ್ಲ: ಕೇಂದ್ರ ಸಚಿವ ಸದಾನಂದ ಗೌಡ ಸ್ಪಷ್ಟನೆ
ಗಂಗಾವತಿ, ಅಕ್ಟೋಬರ್ 5: ದೇಶದ್ರೋಹಿ ಎಂಬ ಹೇಳಿಕೆ ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಉದ್ದೇಶಿಸಿ ಹೇಳಿದ್ದಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿವಿ ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.
ಶನಿವಾರ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
'ಅನವಶ್ಯಕವಾಗಿ ಮಾತನಾಡುವವರು, ಸುಳ್ಳು ಸುದ್ದಿಗಳನ್ನು ಹರಡುವವರನ್ನು ಕುರಿತು ದೇಶದ್ರೋಹಿ ಎಂದು ಹೇಳಿದ್ದೇನೆಯೇ ವಿನಾ ಚಕ್ರವರ್ತಿ ಸೂಲಿಬೆಲೆ ಅವರಿಗೆ ಅಲ್ಲ. ನನ್ನ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆಯಿರಲಿ' ಎಂದು ಹೇಳಿದರು.

ರಾಜ್ಯದಿಂದ ಬಿಜೆಪಿಯ 25 ಸಂಸದರು ಇದ್ದರೂ ನೆರೆ ಪರಿಹಾರಕ್ಕಾಗಿ ಏನನ್ನೂ ಮಾಡಿಲ್ಲ ಎಂಬ ಆರೋಪ ಮನಸ್ಸಿಗೆ ನೋವುಂಟು ಮಾಡಿತ್ತು. ಕೇಂದ್ರ ಸರ್ಕಾರವು ಪ್ರವಾಹ ಸಮಸ್ಯೆಯ ಪರಿಹಾರಕ್ಕಾಗಿ 1,200 ಕೋಟಿ ರೂ. ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹಣ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು.
ಮಳೆ ಬರುವ ಸಂದರ್ಭದಲ್ಲಿ ನೀಡುವ ಪರಿಹಾರದ ಹಣ ಯಾವುದಕ್ಕೂ ಉಪಯೋಗವಾಗುವುದಿಲ್ಲ. ಮಳೆ ನಿರಂತರವಾಗಿ ಮುಂದುವರಿದಿದ್ದರಿಂದ ಪರಿಹಾರ ಘೋಷಣೆ ಮಾಡಿರಲಿಲ್ಲ. ಎರಡು ತಿಂಗಳು ವಿಳಂಬವಾಗಿ ಪರಿಹಾರ ನೀಡಲಾಗಿದೆ ಎಂದರೆ ಮಳೆ ನಿಂತ ಮೇಲೆ ಪರಿಹಾರಕ್ಕೆ ಬಳಕೆಯಾಗುತ್ತದೆ ಎಂದು. ದೇಶದ 9 ರಾಜ್ಯಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಇವುಗಳ ಪೈಕಿ ಕರ್ನಾಟಕಕ್ಕೆ ಮೊದಲು ಪರಿಹಾರವನ್ನು ನೀಡಲಾಗಿದೆ. ಈ ವಾಸ್ತವಗಳನ್ನು ಅರ್ಥ ಮಾಡಿಕೊಂಡ ಬಳಿಕ ಟೀಕೆ ಮಾಡಲಿ ಎಂದು ವಿರೋಧಿಗಳಿಗೆ ಹೇಳಿದರು.
ಅನಂತಕುಮಾರ್ ಅವರ ನಿಧನದ ಬಳಿಕ ಯಾವ ಸಂಸದರೂ ಕೇಂದ್ರ ನಾಯಕರೊಂದಿಗೆ ಉತ್ತಮ ಸಂಪರ್ಕ ಹೊಂದಿಲ್ಲ ಎಂಬ ಆರೋಪಕ್ಕೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಎರಡು ದಿನಗಳ ಹಿಂದಷ್ಟೇ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿಯಾಗಿದ್ದೆ. ಒಂದೇ ದಿನದಲ್ಲಿ ಪರಿಹಾರ ಘೋಷಣೆ ಮಾಡಿದ್ದಾರೆ ಎಂದರೆ ನೀವೇ ಅರ್ಥಮಾಡಿಕೊಳ್ಳಬೇಕು. ಇದು ನಮ್ಮ ಕರ್ತವ್ಯ. ಇದರಲ್ಲಿ ಪ್ರಶಂಸೆ ತೆಗೆದುಕೊಳ್ಳುವುದೇನೂ ಇಲ್ಲ ಎಂದರು.
-
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications