ಕರ್ತವ್ಯಲೋಪ: ಕೊಪ್ಪಳದಲ್ಲಿ 8 ಪಿಡಿಒಗಳ ಅಮಾನತು
ಕೊಪ್ಪಳ, ಏಪ್ರಿಲ್ 21: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಒ ಸಭೆಗೆ ಗೈರು ಹಾಜರಾದ 5 ಪಿಡಿಒಗಳು ಮತ್ತು ಹಣಕಾಸು ವಹಿವಾಟಿನಲ್ಲಿ ಕರ್ತವ್ಯ ಲೋಪ ಎಸಗಿದ ಓರ್ವ ಹಾಗೂ ಸರ್ಕಾರದ ಆದೇಶ ಪಾಲಿಸದ ಇಬ್ಬರು ಪಿಡಿಒ ಸೇರಿದಂತೆ ಎಂಟು ಪಿಡಿಒಗಳನ್ನು ಕೊಪ್ಪಳ ಜಿ.ಪಂ ಸಿಇಒ ರಘುನಂದನ್ ಮೂರ್ತಿ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಎರಡನೇ ಅಲೆಯ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಡಿಸಿ ಹಾಗೂ ಸಿಇಒ ಅವರ ಅಧ್ಯಕ್ಷತೆಯಲ್ಲಿ ಎಲ್ಲ ಗ್ರಾ.ಪಂ ಪಿಡಿಒಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಭೆ ಆಯೋಜಿಸಲಾಗಿತ್ತು.
ಈ ಪೈಕಿ ಕೊಪ್ಪಳ ತಾಲೂಕಿನ ಅಗಳಕೇರಾ ಗ್ರಾ.ಪಂ ಪಿಡಿಒ ಬಸವರಾಜ ಕಿರ್ದಿ, ಇಂದರಗಿ ಗ್ರಾ.ಪಂನ ಬಿ.ಕೃಷ್ಣಾರಡ್ಡಿ, ಯಲಬುರ್ಗಾ ತಾಲೂಕಿನ ಹಿರೇ ವಂಕಲಕುಂಟಾ ಪಿಡಿಒ ಜುಮಾಲ್ ಸಾಬ, ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾ.ಪಂ ಪಿಡಿಒ ಮಹೇಶಗೌಡ, ಕುಷ್ಟಗಿ ತಾಲೂಕಿನ ಕೇಸೂರು ಗ್ರಾ.ಪಂ ಪಿಡಿಒ ನಾಗರತ್ನಾ ಅವರು ಸಭೆಗೆ ಗೈರು ಹಾಜರಾಗಿ ನಿರ್ಲಕ್ಷ ತೋರಿದ್ದರು.

ಅಲ್ಲದೇ ಸಭೆಗೆ ಗೈರು ಹಾಜರಾದ ಕುರಿತಂತೆ ಸಿಇಒ ನೋಟಿಸ್ ನೀಡಿದ್ದರೂ ಅದಕ್ಕೆ ಸಮರ್ಪಕ ಉತ್ತರ ಕೊಡದ ಹಿನ್ನೆಲೆಯಲ್ಲಿ ಐವರನ್ನು ಕರ್ತವ್ಯ ನಿರ್ಲಕ್ಷತನ ತೋರಿ ಅಮಾನತು ಮಾಡಲಾಗಿದೆ.
ಇನ್ನು ಗ್ರಾ.ಪಂ ವ್ಯಾಪ್ತಿಯಲ್ಲಿನ ನಿವೇಶನಗಳಿಗೆ ಗ್ರಾ.ಪಂನಿಂದ 9 ಮತ್ತು 11 ಫಾರಂ ನೀಡದೇ ಸರ್ಕಾರದ ಕರ್ತವ್ಯದಲ್ಲಿ ಲೋಪ ಎಸಗಿದ ಕೊಪ್ಪಳ ತಾಲೂಕಿನ ಮತ್ತೂರು ಗ್ರಾ.ಪಂನ ಸೋಮಶೇಖರ, ಕರ್ತವ್ಯಕ್ಕೆ ಅನಧಿಕೃತ ಗೈರಾದ ಹಾಸಗಲ್ ಗ್ರಾ.ಪಂನ ಪ್ರಕಾಶ ಸಜ್ಜನ್ ಹಾಗೂ 14 ಮತ್ತು 15 ನೇ ಹಣಕಾಸು ಯೋಜನೆಯಡಿ ಹಣ ದುರುಪಯೋಗ ಮಾಡಿಕೊಂಡ ಅಗಳಕೇರಾ ಗ್ರಾ.ಪಂ ಈ ಹಿಂದಿನ ಪಿಡಿಒ ಆಗಿದ್ದ ಗೌಸುಸಾಬ ಮುಲ್ಲಾ ಅವರನ್ನು ಅಮಾನತು ಮಾಡಲಾಗಿದೆ.
Recommended Video
ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 8 ಪಿಡಿಒಗಳನ್ನು ಜಿ.ಪಂ ಸಿಇಒ ಅವರು ಅಮಾನತು ಮಾಡುವುದರ ಮೂಲಕ ನಿರ್ಲಕ್ಷ್ಯತನ ತೋರುವ ಅಧಿಕಾರಿಗಳ ಮೇಲೆ ಅಮಾನತಿನ ಅಸ್ತ್ರ ಬೀಸುವ ಮೂಲಕ ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications