ಕೊಪ್ಪಳ: ನಿಯಮ ಉಲ್ಲಂಘಿಸಿ ತುಂಗಭದ್ರಾ ಅಣೆಕಟ್ಟು ಆವರಣದಲ್ಲಿ ಇಂಜಿನಿಯರಿಂಗ್ ಪುತ್ರನ ನಿಶ್ಚಿತಾರ್ಥ
ಕೊಪ್ಪಳ, ಮೇ, 19: ಭಾರತ-ಪಾಕಿಸ್ತಾನ ನಡುವೆ ಯುದ್ಧ ಬಿಕ್ಕಟ್ಟು ಹಿನ್ನೆಲೆ ದೇಶದ ಕೆಲವು ಪ್ರದೇಶಗಳಿಗೆ ಹೋಗದಂತೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಹಾಗೆಯೇ ಮೇ 8ರಿಂದ ರಾಜ್ಯದಲ್ಲಿಯೂ ಪ್ರಮುಖ ಅಣೆಕಟ್ಟು, ದೇವಾಲಯಗಳು, ಹಲವು ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿತ್ತು. ಆದರೂ ಮೇ 10ರಂದು ತುಂಗಭದ್ರಾ ಅಣೆಕಟ್ಟಿನ ಕಾರ್ಯನಿರ್ವಾಹಕ ಇಂಜಿನಿಯರ್ ನಿಯಮ ಉಲ್ಲಂಘಿಟಿಸಿ ಅಣೆಕಟ್ಟು ಆವರಣದಲ್ಲಿ ತಮ್ಮ ಮಗನ ನಿಶಿತಾರ್ಥ ಮಾಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಿನ್ನೆಲೆ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ, ತುಂಗಭದ್ರಾ ಅಣೆಕಟ್ಟಿನ ಕಾರ್ಯನಿರ್ವಾಹಕ ಇಂಜಿನಿಯರ್ ತಮ್ಮ ಮಗನ ನಿಶ್ಚಿತಾರ್ಥ ಸಮಾರಂಭವನ್ನು ಮೇ 10 ರಂದು ಜಲಾಶಯದ ಆವರಣದಲ್ಲಿ ಆಯೋಜನೆ ಮಾಡಿದ್ದರು. ಈ ಮೂಲಕ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಘಟನೆ ಇದೀಗ ಬೆಳಕಿಗೆ ಬಂದಿದೆ.

ಹಿರಿಯ ಅಧಿಕಾರಿ ಗಿರೀಶ್ ಮೇಟಿ ಆಯೋಜನೆ ಮಾಡಿದ್ದ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸಿದ್ದರು. ಆದರೆ, ಯುದ್ಧ ಬಿಕ್ಕಟ್ಟು ಪರಿಸ್ಥಿತಿಯಿಂದಾಗಿ ಮೇ 8ರಿಂದ ಅಣೆಕಟ್ಟುಗಳು ಮತ್ತು ದೇವಾಲಯಗಳು ಸೇರಿದಂತೆ ಹಲವು ಪ್ರವಾಸಿ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.
ಮೇ 10ರಂದು ನಿಶ್ಚಿತಾರ್ಥ ನಡೆದಿದ್ದು, ಈ ವೇಳೆ ಶಾಮಿಯಾನ ಹಾಕಿಸಿ ಜನರಿಗೆ ಹೋಳಿಗೆ ಊಟ ಹಾಕಿಸಿರುವುದಾಗಿ ತಿಳಿದುಬಂದಿದೆ. ಜೊತೆಗೆ ತುಂಗಭದ್ರ ಜಲಾಶಯ ಹಿಂಭಾಗಕ್ಕೆ ಹೋಗದಂತೆ ಚೆಕ್ಪೋಸ್ಟ್ ನಿರ್ಮಾಣ ಮಾಡಲಾಗಿತ್ತು. ಆದರೂ ಚೆಕ್ಪೋಸ್ಟ್ ಮೂಲಕ ಜನರು ಹಾದು ಹೋಗಿರುವುದು ತಿಳಿದುಬಂದಿದೆ.
ನಿಯಮಗಳನ್ನು ಉಲ್ಲಂಘಿಸಿದ್ದರಿಂದ ಹಿರಿಯ ಅಧಿಕಾರಿ ಗಿರೀಶ್ ಮೇಟಿ ವಿರುದ್ಧ ಶಿಕ್ಷಾರ್ಹ ಕ್ರಮ ಕೈಗೊಳ್ಳಬೇಕು ಎನ್ನುವ ಒತ್ತಾಯಗಳು ಕೇಳಿಬಂದಿವೆ. ಈ ನಿಶ್ಚಿತಾರ್ಥ ಸಮಾರಂಭವನ್ನು ಸ್ಥಳೀಯ ಜನರು ನೋಡಿದ್ದು, ಜಾರಿಯಲ್ಲಿದ್ದ ನಿಯಮಗಳು ಸ್ಪಷ್ಟವಾಗಿ ಉಲ್ಲಂಘನೆಯಾಗಿದೆ ಅಂತಲೂ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಬಳಿಕ ಗಿರೀಶ್ ಮೇಟಿ ಅವರಿಗೆ ಅನೇಕ ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಅಣೆಕಟ್ಟು ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ನಾವು ಅದರ ಬಗ್ಗೆ ವಿವರವಾಗಿ ಪರಿಶೀಲನೆ ಮಾಡುತ್ತೇವೆ. ಯಾವುದೇ ಅಧಿಕಾರಿ ತಪ್ಪು ಮಾಡಿದ್ದರೆ, ಅವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ತುಂಗಭದ್ರ ಜಲಾಶಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications