ಕಾರು ಜಪ್ತಿಗೆ ಬಂದರೂ ಕೀ ಕೊಡದ ಕೊಪ್ಪಳ ಡಿಸಿ: ಏನಿದು ಪ್ರಕರಣ ತಿಳಿಯಿರಿ
ಕೊಪ್ಪಳ, ಏಪ್ರಿಲ್, 19: ಕೊಪ್ಪಳ ಜಿಲ್ಲಾಧಿಕಾರಿ ನಳೀನ್ ಅತುಲ್ ನ್ಯಾಯಾಂಗ ನಿಂದನೆಗೆ ಗುರಿಯಾಗಿದ್ದಾರೆ. ಪ್ರಕರಣವೊಂದದರ ವಿಚಾರಣೆ ನಡೆಸಿದ್ದ ಗಂಗಾವತಿಯ ಕೋರ್ಟ್ ಡಿಸಿ ಕಾರನ್ನು ಜಪ್ತಿ ಮಾಡಲು ಆದೇಶ ಹೊರಡಿಸಿತ್ತು. ಆದರೆ ಕಾರು ಜಪ್ತಿ ಮಾಡಲು ಕೋರ್ಟ್ ಅಧಿಕಾರಿಗಳು ಹೋದ ವೇಳೆ ಕೀ ಕೊಡಲು ಹಿಂದೇಟು ಹಾಕಿದ್ದಾರೆ. ಹಾಗಾದ್ರೆ ಏನಿದು ಪ್ರಕರಣ ಎಂದು ಇಲ್ಲಿ ತಿಳಿಯಿರಿ.
ಗಂಗಾವತಿ ನಗರಸಭೆ ವಾಲ್ಮೀಕಿ ವೃತ್ತದಿಂದ ಜಯನಗರ ಬಡಾವಣೆವರೆಗೆ ರಸ್ತೆ ಅಗಲೀಕರಣ ಮಾಡಲಾಗಿದೆ. ಈ ವೇಳೆ ಗಂಗಾವತಿಯ ಕಲ್ಮಠ ಹಾಗೂ ವೀರುಪಾಕ್ಷಪ್ಪ ಅವರ ಭೂಮಿ ಒತ್ತುವರಿ ಮಾಡಿ ರಸ್ತೆ ಅಗಲೀಕರಣ ಮಾಡಲಾಗಿದೆ. ಮಾಲೀಕರ ಗಮನಕ್ಕೆ ತರದೆ, ರಸ್ತೆ ಅಗಲೀಕರಣ ಮಾಡಲಾಗಿದೆ. ಅಲ್ಲದೆ, ಪರಿಹಾರ ಕೊಡದ ಹಿನ್ನೆಲೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಸುದೀರ್ಘ 6 ವರ್ಷಗಳ ಕಾಲ ವಿಚಾರಣೆ ನಡೆಸಿದ್ದ ಕೋರ್ಟ್ ಜಿಲ್ಲಾಧಿಕಾರಿಯ ಕಾರು ಜಪ್ತಿ ಮಾಡಲು ಆದೇಶಿಸಿತ್ತು. ವಿಚಾರಣೆ ಬಳಿಕ ಕಲ್ಮಠಕ್ಕೆ ಸುಮಾರು 7 ಲಕ್ಷ ರೂಪಾಯಿ, ವಿರೂಪಾಕ್ಷಪ್ಪ ಅವರಿಗೆ 6 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿತ್ತು. ಆದರೆ, ಇದುವರೆಗೂ ಯಾವುದೇ ಪರಿಹಾರ ಸಿಕ್ಕಿರಲಿಲ್ಲ. ಆದ್ದರಿಂದ ಮಾಲೀಕರು ಮತ್ತೊಮ್ಮೆ ಕೋರ್ಟ್ ಮೊರೆ ಹೋದಾಗ ಗಂಗಾವತಿಯ ಹಿರಿಯ ಶ್ರೇಣಿಯ ನ್ಯಾಯಾಲಯ ಕಾರು ಜಪ್ತಿ ಮಾಡಲು ಆದೇಶಿಸಿತ್ತು.
ಲೋಕಾಯುಕ್ತ ದಾಳಿ: ಇತ್ತೀಚೆಗಷ್ಟೇ ದಾವಣಗೆರೆ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಜಿಲ್ಲಾ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಘಟಕದ ಜಿಲ್ಲಾ ಸಾಂಖಿಕ ಅಧಿಕಾರಿ ಡಾ.ಜಿ.ಎಸ್.ನಾಗರಾಜು ಅವರಿಗೆ ಸೇರಿದ 5 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.
ನಗರದ ಎಸ್.ನಿಜಲಿಂಗಪ್ಪ ಬಡಾವಣೆಯ ನಾಗರಾಜು ಅವರ ಮನೆ, ತಂದೆ ಷಣ್ಮುಖಪ್ಪ ಅವರ ನಿವಾಸ, ಫಾರಂಹೌಸ್, ಕಚೇರಿ ಹಾಗೂ ಕುಟುಂಬದ ಕಿಡಿತದಲ್ಲಿರುವ ಸಹಕಾರ ಸಂಘದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಚಿನ್ನಾಭರಣ, ಹಣ ಸೇರಿದಂತೆ ಅಪಾರ ಸಂಪತ್ತು ಪತ್ತೆಯಾಗಿತ್ತು.
ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿದ ಆರೋಪದ ಮೇಲೆ ನಾಗರಾಜು ಅವರಿಗೆ ಸೇರಿದ 5 ಸ್ಥಳಗಳ ಮೇಲೆ ದಾಳಿ ನಡೆದಿದೆ. ಡಿವೈಎಸ್ಪಿ, ಎನ್ಸ್ಪೆಕ್ಟರ್ ಸೇರಿ ಹಲವು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಇದೀಗ ದಾಳಿ ಸ್ಥಳಗಳಲ್ಲಿ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್.ಕೌಲಾಪುರ ಮಾಹಿತಿ ನೀಡಿದ್ದರು.
ಯಾವ ಜಿಲ್ಲೆಗಳಲ್ಲಿ 'ಲೋಕಾ' ದಾಳಿ?: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಕೋಲಾರ, ತುಮಕೂರು, ಕಲಬುರಗಿ, ವಿಜಯಪುರ, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿತ್ತು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications